ಬಾಣಲೆಯಿಂದ ಬೆಂಕಿಗೆ ಬಿದ್ದ ರಿಕ್ಷಾ ಚಾಲಕರು

ಮಹಾನಗರದಲ್ಲಿದ್ದಾರೆ ಕರಾವಳಿ ಮೂಲದ ಹಲವು ರಿಕ್ಷಾ ದುಡಿಮೆಗಾರರು

Team Udayavani, Oct 5, 2020, 4:56 PM IST

mumbai-tdy-1

ಸಾಂದರ್ಭಿಕ ಚಿತ್ರ

ಮುಂಬಯಿ, ಅ. 4: ಮಹಾನಗರವು ಲಾಕ್‌ಡೌನ್‌ ಬಳಿಕ ಪ್ರಸ್ತುತ ನಿಧಾನವಾಗಿ ಮತ್ತೆ ತನ್ನ ನೈಜ ಸ್ವರೂಪ ಮತ್ತು ಲಯಕ್ಕೆಹಿಂದಿರುಗುತ್ತಿದೆ. ಮಹಾನಗರದ ಸಾರ್ವಜನಿಕ  ಸಂಪರ್ಕ ಸಾರಿಗೆಯಲ್ಲಿ ಒಂದಾದ ರೈಲುಗಳು ಅಗತ್ಯ ಸಿಬಂದಿಗೆ ಮಾತ್ರ ಸೀಮಿತವಾಗಿರುವಾಗ ರಸ್ತೆ ಸಾರಿಗೆಯು ಸಾರ್ವಜನಿಕರಿಗೆ ಅನುಕೂಲಮಾಡಿಕೊಟ್ಟಿದೆ. ಆದರೆ ಇಲ್ಲಿ ಆಟೋರಿಕ್ಷಾಇರಿಸಿಕೊಂಡು ಬದುಕು ಕಟ್ಟಿಕೊಂಡಿದ್ದಕರಾವಳಿ ಮೂಲದ ಹಲವರು ಲಾಕ್‌ಡೌನ್‌ ಮತ್ತು ಆ ಬಳಿಕದ ಕಠಿನ ಸಂಚಾರ ನಿಯಮ ಗಳಿಂದಾಗಿ ದುಡಿಮೆ ಕಡಿಮೆಯಾಗಿ ಸಂಕಷ್ಟ ಎದುರಿಸುತ್ತಿದ್ದಾರೆ.

ಲಾಕ್‌ಡೌನ್‌ ಅನಂತರ ಮೊದಲಿಗೆ ಸರಕಾರವು ಅಗತ್ಯ ಸೇವಾ ಸಿಬಂದಿಗೆ ಬಸ್‌ ಸೇವೆ ಪ್ರಾರಂಭಿಸಿತ್ತು. ಬಳಿಕ ರಿಕ್ಷಾ ಚಾಲಕರ ಬೇಡಿಕೆಯನ್ನು ಮನ್ನಿಸಿ ಲಾಕ್‌ಡೌನ್‌ – 4ರ ಅಡಿಯಲ್ಲಿ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಟ್ಯಾಕ್ಸಿಗಳು, ಆಟೋ ರಿಕ್ಷಾಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯು ಕಂಟೈನ್ಮೆಂಟ್‌ ವಲಯಗಳನ್ನು ಹೊರತುಪಡಿಸಿ ಕಾರ್ಯನಿರ್ವಹಿಸಲು ಅನುಮತಿ ನೀಡಿತ್ತು. ಪ್ರಸ್ತುತ ರಿಕ್ಷಾ- ಟ್ಯಾಕ್ಸಿ ಸಂಚಾರ ಸಹಜ ಸ್ಥಿತಿಯ ಕಡೆಗೆ ಸಾಗುತ್ತಿದ್ದರೂಮಹಾನಗರದಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿರುವ ನೂರಾರು ಕನ್ನಡಿಗರ ಸ್ಥಿತಿ ತೀರಾ ಹದಗೆಟ್ಟಿದೆ. ಹಿಂದಿನಂತೆ ಪ್ರಯಾಣಿಕರು ಇಲ್ಲದಿರುವುದು ಮಾತ್ರವಲ್ಲದೆ ಸರಕಾರದ ಮಾರ್ಗಸೂಚಿಗಳಿಂದ ದುಡಿಮೆ ಕಡಿಮೆಯಾಗಿದೆ ಎಂಬ ಅಳಲು ಅವರದು.

ಇಬ್ಬರು ಪ್ರಯಾಣಿಕರು ಮಾತ್ರ, “ಶೇರ್‌ ರಿಕ್ಷಾ’ ಕಡಿತ : ಸುರಕ್ಷೆ ಮತ್ತು ಕಾಳಜಿ ದೃಷ್ಟಿಯಿಂದ ಒಮ್ಮೆಗೆ ಇಬ್ಬರು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯುವ ನಿಯಮ ಪಾಲನೆಯನ್ನು ರಿಕ್ಷಾ ಚಾಲಕರುಮಾಡುತ್ತಿದ್ದಾರೆ. ಕೆಲವು ಚಾಲಕರು ಈಗಾಗಲೇ ಇಬ್ಬರು ಪ್ರಯಾಣಿಕರು ಮಾತ್ರ ಕುಳಿತುಕೊಳ್ಳಲು ಅಗತ್ಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಪ್ರಯಾಣಿಕರು ರಿಕ್ಷಾ ಏರುವುದಕ್ಕೆ ಮೊದಲೇ ಸ್ಯಾನಿಟೈಸರ್‌ ನೀಡುತ್ತಿದ್ದಾರೆ. ಕೆಲವು ಉಪನಗರಗಳಲ್ಲಿ ಮಾರ್ಗಸೂಚಿ ಗಾಳಿಗೆ ತೂರಿ ಹೆಚ್ಚು ಪ್ರಯಾಣಿಕರನ್ನು ಸಾಗಿಸುವುದೂ ಕಂಡುಬರುತ್ತಿದೆ. ಹಿಂದೆ 10 ರೂ. ನೀಡಿ “ಶೇರ್‌ ರಿಕ್ಷಾ’ಗಳಲ್ಲಿ ತೆರಳುತ್ತಿದ್ದ ಹೆಚ್ಚಿನವರು ಭಯದಿಂದ ರಿಕ್ಷಾ ಪ್ರಯಾಣ ತ್ಯಜಿಸಿದ್ದಾರೆ.

ಆರ್ಥಿಕ ಸಮಸ್ಯೆ : ಸಂಖ್ಯೆ ಕಡಿಮೆಯಾಗಿದೆ. ಸೀಮಿತ ಪ್ರಯಾಣಿಕರನ್ನು ಮಾತ್ರ ಕರೆದೊಯ್ಯುವ ಅವಕಾಶ ಇರುವುದರಿಂದ ಕೆಲವು ಪ್ರಯಾಣಿಕರು ಹೆಚ್ಚಿನ ದರ ನೀಡಲು ನಿರಾಕರಿಸುತ್ತಾರೆ. ಇದರಿಂದ ಆರ್ಥಿಕ ಸಮಸ್ಯೆ ಎದುರಿಸುವಂತಾಗಿದೆ. -ಶೇಖರ್‌ ಶೆಟ್ಟಿ, ಭಾಯಂದರ್‌ ರಿಕ್ಷಾ ಚಾಲಕರು

ಸಾಲ ಪಾವತಿಗೆ ತೊಂದರೆ : ಜೂನ್‌ನಿಂದ ಸಂಚಾರಕ್ಕೆ ಅನುಮತಿ ನೀಡಿದರೂ ಲಾಕ್‌ ಡೌನ್‌ಗೆ ಹಿಂದೆ ಹೋಲಿಸಿದರೆ ಪ್ರಸ್ತುತ ಬಾಡಿಗೆ ತುಂಬಾ ಕಡಿಮೆಯಿದೆ. ಅದಲ್ಲದೆ ಎಲ್ಲ ಮಾರ್ಗಗಳಲ್ಲಿ ವಾಹನಗಳ ದಟ್ಟಣೆ ಉಂಟಾಗುತ್ತಿದ್ದು, ದೂರದ ಬಾಡಿಗೆ ಪಡೆಯುವುದು ಕಷ್ಟವಾಗುತ್ತಿದೆ. ಮೂರು ರಿಕ್ಷಾಗಳನ್ನು ಹೊಂದಿದ್ದರೂ ಚಾಲಕರು ಮತ್ತು ಬಾಡಿಗೆ ಇಲ್ಲದ ಕಾರಣ ಬ್ಯಾಂಕ್‌ ಸಾಲ ಭರಿಸುವುದಕ್ಕೆ ತೊಂದರೆಯಾಗುತ್ತಿದೆ. ಇಎಂಐ ಕಟ್ಟಲು ಸರಕಾರ ಅವಧಿ  ನೀಡಿರುವುದು ಮಾತ್ರ ಸಮಧಾನ ತಂದಿದೆ. -ಕುನಾಲ್‌ ಸುವರ್ಣ, ವಸಾಯಿ ಪಶ್ಚಿಮ, ರಿಕ್ಷಾ ಚಾಲಕರು

ವಿನಾಕಾರಣ ದಂಡ : ಎಲ್ಲರಂತೆ ನಾವು ಕೂಡ ಸಮಸ್ಯೆ ಎದುರಿಸುತ್ತಿದ್ದೇವೆ. ಮೊದಲಿಗೆ ಐದು ರೂ. ದುಡಿಯುತ್ತಿದ್ದರೆ, ಈಗ ಒಂದು ರೂ. ದುಡಿಮೆಯಾಗಿದೆ ನಮ್ಮದು. ದಿನದ ದುಡಿಮೆ ಕಡಿಮೆಯಾಗಿದೆ. ಸರಕಾರದ ಅನೇಕ ನಿಯಮಗಳನ್ನುಪಾಲಿಸುತ್ತಿದ್ದರೂ ಕೆಲವೊಮ್ಮೆ  ವಿನಾಕಾರಣವಾಗಿ ದಂಡ ವಿಧಿಸುವುದರಿಂದ ಮತ್ತಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ಅಗತ್ಯ ಸೇವಾ ಸಿಬಂದಿ ಮತ್ತು ಕೆಲವೊಮ್ಮೆ ಮಾರುಕಟ್ಟೆಗಳಿಗೆ ಹೋಗುವವರು ರಿಕ್ಷಾ ಬಳಸುತ್ತಾರೆ. ದುಡಿಮೆ ಕಡಿಮೆಯಾಗಿರುವುದರಿಂದ ಸಂಸಾರ ನಡೆಸುವುದು ಕಷ್ಟ ಎಂಬಂತಾಗಿದೆ. -ಮಾಧವ ಪೂಜಾರಿ ಬೊರಿವಲಿ, ರಿಕ್ಷಾ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.