ಜಿಲ್ಲೆಯ ಆರು ಗ್ರಾಪಂಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

ಕೋವಿಡ್ ಹಿನ್ನೆಲೆ ನಡೆಯದಕಾರ್ಯಕ್ರಮ, ಪ್ರಶಸ್ತಿ ಪತ್ರ ಮಾತ್ರ ವಿತರಣೆ; 5 ಲಕ್ಷ ರೂ.ಅನುದಾನವಿಲ್ಲ

Team Udayavani, Oct 6, 2020, 1:35 PM IST

ಜಿಲ್ಲೆಯ ಆರು ಗ್ರಾಪಂಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಈ.ತಿಮ್ಮಸಂದ್ರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾಯೋಜನೆಯಡಿ ವಿವಿಧಕಾಮಗಾರಿ ನಡೆಸುತ್ತಿರುವಕೂಲಿ ಕಾರ್ಮಿಕರೊಂದಿಗೆ ಪಿಡಿಒ ತನ್ವೀರ್‌ ಅಹಮದ್‌ ಇರುವುದು.

ಚಿಕ್ಕಬಳ್ಳಾಪುರ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸ್ವಚ್ಛತೆ, ಗ್ರಾಮ ನೈರ್ಮಲ್ಯ ಕಾಪಾಡಿ ಕಂದಾಯ ವಸೂಲಿಗೆ ಆದ್ಯತೆ ನೀಡಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಜಿಲ್ಲೆಯ 6 ಗ್ರಾಪಂಗಳು ರಾಜ್ಯ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಭಾಜನವಾಗಿವೆ.

ಪಿಡಿಒಗಳಿಗೆಸಂತಸ: ನರೇಗಾಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ದ್ದು ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ.ಮತ್ತೂಂದಡೆಜಿಲ್ಲೆಯ6ಗ್ರಾಪಂಗಳು ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾ ಗಿರುವುದು ಆಯಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ರೀತಿಯ ಸಂತಸ ಉಂಟಾದರೇ ಇತ್ತೀಚಿಗೆ ಅಧಿಕಾರಅವಧಿಯನ್ನುಪೂರ್ಣಗೊಳಿಸಿರುವ ಗ್ರಾಪಂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರಲ್ಲಿ ಸಂತೋಷ ಮನೆ ಮಾಡಿದೆ.

ಚುನಾವಣೆ ನೀತಿ ಸಂಹಿತೆ: ಜಿಲ್ಲೆಯಲ್ಲಿ ಆಯ್ಕೆಯಾಗಿರುವ 6 ಗ್ರಾಪಂಗಳಿಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅಧಿಕಾರಿಗಳು 2019-20ನೇ  ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಅಭಿನಂದಿಸಲಿದ್ದಾರೆ. ವಿಧಾನ ಪರಿಷತ್ತಿನ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಗಾಂಧಿಗ್ರಾಮ ಪುರಸ್ಕಾರ ವಿತರಣೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ.

ಸಿಎಂ-ಸಚಿವರಿಂದ ಪ್ರಶಸ್ತಿ ಪ್ರದಾನ: ಜಿಲ್ಲೆಯಲ್ಲಿ ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಗ್ರಾಪಂಗಳ ಪಿಡಿಒಗಳು, ತಾಪಂ ಇಒ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಿಗೆ ಸಿಎಂ ಯಡಿಯೂರಪ್ಪ, ಆರ್‌ಡಿಪಿಆರ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ, ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಖ್‌,ಉಮಾಮಹಾದೇವನ್‌ ಸಹಿತ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಶಸ್ತಿಪ್ರದಾನ ನಡೆಯಲಿದೆ ಎಂದು ತಿಳಿದು ಬಂದಿದೆ.

ಯಾವ ಗ್ರಾಪಂಗಳಿಗೆ ಪುರಸ್ಕಾರ? : ಜಿಲ್ಲೆಯ 6 ತಾಲೂಕುಗಳಿಂದ ತಲಾ ಒಂದು ಗ್ರಾಪಂ ಅನ್ನು ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಿಡ್ಲಘಟ್ಟ ತಾಲೂಕಿನ ಇ.ತಿಮ್ಮಸಂದ್ರ, ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ, ಚಿಂತಾಮಣಿ ತಾಲೂಕಿನ ಕೋನಪಲ್ಲಿ, ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ, ಗೌರಿಬಿದನೂರು ತಾಲೂಕಿನ ನಗರಗೆರೆ, ಗುಡಿಬಂಡೆ ತಾಲೂಕಿನ ತಿರುಮಣಿ ಗ್ರಾಪಂಗಳು ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ. ಪ್ರಸಕ್ತ ಸಾಲಿನಲ್ಲಿ ಕೈಗೊಂಡಿರುವ ಪ್ರಗತಿ ಆಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕಗಳ ಮಾರ್ಗಸೂಚಿ ಒಳಗೊಂಡಂತೆ 150 ಅಂಶಗಳ ಪ್ರಶ್ನಾವಳಿ ಪಂಚತಂತ್ರ ತಂತ್ರಾಂಶದಿಂದ ಉತ್ತರಿಸುವ ಮೂಲಕ ಗ್ರಾಪಂಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅತಿ ಹೆಚ್ಚು ಅಂಕ ಪಡೆದ ಪ್ರತಿ ತಾಲೂಕಿನ 5 ಗ್ರಾಪಂಗಳನ್ನು ಪ್ರಾಥಮಿಕ ಹಂತದಲ್ಲಿ ಆಯ್ಕೆ ಮಾಡಿ ಶಿಫಾರಸ್ಸಿಗೆ ಆಯಾ ಜಿಲ್ಲೆಗಳ ಸಿಇಒಗೆ ಪಟ್ಟಿಕಳುಹಿಸಲಾಗಿತ್ತು. ಅಭಿವೃದ್ಧಿಕಾಮಗಾರಿ, ಸಾಧ® ಗುರುತಿಸಿ ಆರ್‌ಡಿಪಿಆರ್‌ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಟ್ಟಿ ಬಿಡುಗಡೆ ಮಾಡಿದೆ.

ಜಿಲ್ಲೆಯ 6 ಗ್ರಾಪಂಗಳಿಂದ ಇಲಾಖೆಪ್ರಶ್ನಾವಳಿಗಳನ್ನು ತಂತ್ರಾಂಶದ ಮೂಲಕ ಉತ್ತರಿಸಿಹಿಂದಿನ ಸಿಇಒಅವರ ಶಿಫಾರಸ್ಸಿನ ಮೇರೆಗೆ ಗಾಂಧಿಗ್ರಾಮ ಪುರಸ್ಕಾ ರಕ್ಕೆಆಯ್ಕೆಮಾಡಲಾಗಿದೆ. ಅ.2 ರಂದುಪ್ರಶಸ್ತಿ ವಿತರಿಸಬೇಕಾಗಿತ್ತು. ಆದರೆ, ಆಗಿಲ್ಲಪ್ರಸಕ್ತ ಸಾಲಿನಲ್ಲಿಕೋವಿಡ್‌ಇರುವುದರಿಂದ ಗ್ರಾಪಂಗಳಿಗೆ ಪ್ರಶಸ್ತಿ ಪತ್ರ ಮಾತ್ರ ವಿತರಣೆಯಾಗಲಿದ್ದು ತಲಾ 5 ಲಕ್ಷ ರೂ.ಗಳಅನುದಾನ ಲಭಿಸುವುದಿಲ್ಲ. ಶಿವಶಂಕರ್‌, ಚಿಕ್ಕಬಳ್ಳಾಪುರ ಜಿಪಂ ಸಿಇಒ

ಗ್ರಾಪಂ ಗಾಂಧಿಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತೋಷ ತಂದಿದೆ.ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು, ಶಿಡ್ಲಘಟ್ಟ ತಾಪಂಇಒ, ನರೇಗಾ ಸಹಾಯಕ ನಿರ್ದೇಶಕರು,ಹಿಂದಿನ ಸಿಇಒಅವರ ಸಲಹೆ ಸೂಚನೆಯಡಿಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಗುರುತಿಸಿ ಪ್ರಶಸ್ತಿಗೆ ಆಯ್ಕೆಯಾಗಿದೆ. ತನ್ವೀರ್‌ ಅಹಮದ್‌, ಈ.ತಿಮ್ಮಸಂದ್ರ ಗ್ರಾಪಂ ಪಿಡಿಒ, ಶಿಡ್ಲಘಟ್ಟ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.