ಪ್ರತಿದಿನ 3,300 ಕೋವಿಡ್ ಪರೀಕ್ಷೆ ಗುರಿ


Team Udayavani, Oct 7, 2020, 3:34 PM IST

ಪ್ರತಿದಿನ 3,300 ಕೋವಿಡ್ ಪರೀಕ್ಷೆ ಗುರಿ

ಹಾಸನ: ಜಿಲ್ಲೆಯಲ್ಲಿ ಪ್ರತಿದಿನ 3,300 ಕೋವಿಡ್ ಪರೀಕ್ಷೆ ನಡೆಸಲು ಗುರಿ ನಿಗದಿಪಡಿಸಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿಯರ ಕಚೇರಿ ಸಭಾಂಗದಲ್ಲಿ ಹಮ್ಮಿಕೊಂಡಿದ್ದ ವಿಡಿಯೋ ಸಂವಾದದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಾರಣ, ಜಿಲ್ಲಾಡಳಿತ ನೀಡಿರುವ ಗುರಿ ಸಾಧಿಸಲು ಆರ್‌ಟಿ-ಪಿಸಿಆರ್‌ ಮತ್ತು ರ್ಯಾಟ್‌ ಪರೀಕ್ಷೆ ಯನ್ನುಕೈಗೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್ ಪರೀಕ್ಷೆ ಮಾಡಲು ಹೋದಾಗ ಸಾರ್ವಜನಿಕರು ಪೂರ್ಣ ರೀತಿಯಲ್ಲಿ ಸಹಕರಿಸುತ್ತಿಲ್ಲ, ವೈದ್ಯಾಧಿಕಾರಿಗಳೊಂದಿಗೆ ಜನರು ಗಲಾಟೆ ಮಾಡುತ್ತಿದ್ದಾರೆ ಎಂಬ ದೂರುಗಳಿವೆ. ಈ ಹಿನ್ನೆಲೆಯಲ್ಲಿ ಅರಿವು ಮೂಡಿಸಿ ನಂತರ ಪರೀಕ್ಷೆಗೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ನಿರ್ದಿಷ್ಟ ಗುರಿ ನಿಗದಿಪಡಿಸಿ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರಾಥಮಿಕ ಸಂಪರ್ಕಿತರು, ರೋಗ ಲಕ್ಷಣಗಳಿರುವವರು ಹಾಗೂ ದುರ್ಬಲ ಪ್ರದೇಶಗಳಲ್ಲಿ ಇರುವವರನ್ನು ಪತ್ತೆಮಾಡಿ ಪರೀಕ್ಷೆಗೆ ಒಳಪಡಿಸಲು ಆರೋಗ್ಯಾಧಿಕಾರಿ, ಆಶಾ ಕಾರ್ಯಕರ್ತೆಯರಿಗೆ ನಿರ್ದಿಷ್ಟ ಗುರಿ ನಿಗದಿಪಡಿಸಬೇಕು ಎಂದು ತಾಲೂಕು ವೈದ್ಯಾಧಿಕಾರಿಗಳಿಗೆ ತಿಳಿಸಿದರು.

ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರೊಂದಿಗೆ ಸಭೆ ನಡೆಸಿ, ಪರೀಕ್ಷೆಯಲ್ಲಿ ನಿರ್ದಿಷ್ಟ ಗುರಿ ತಲುಪಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿ ಯಲ್ಲಿರುವ ಲ್ಯಾಬ್‌ಗಳ ಮೂಲಕ ಪರೀಕ್ಷೆ ನಡೆಸಬೇಕು ಎಂದು ಹೇಳಿದರು.

ಸ್ಥಳೀಯವಾಗಿ ಪ್ರಚಾರ ಕೈಗೊಳ್ಳಿ: ಹಾಸನ ನಗರದ ನಂತರ ಅರಸೀಕೆರೆ ತಾಲೂಕಿನಲ್ಲಿ ಹೆಚ್ಚು ಸೋಂಕಿತರಿದ್ದಾರೆ. ಹಾಗಾಗಿ ಸಮು ದಾಯ ಆರೋಗ್ಯ ಕೇಂದ್ರಗಳ ಸುತ್ತಮುತ್ತಲ ಪ್ರದೇಶಗಳಿಗೆ ಆಶಾ ಕಾರ್ಯಕರ್ತೆಯರು ಅಥವಾ ಗ್ರಾಪಂ ಮೂಲಕ ಸ್ಥಳೀಯವಾಗಿ, ತ್ಯಾಜ್ಯ ವಿಲೇವಾರಿ ವಾಹನಗಳ ಮೂಲಕ ಕೋವಿಡ್ ಲಕ್ಷಣಗಳು ಹಾಗೂ ಪರೀಕ್ಷೆ ಕುರಿತಂತೆ ಪ್ರಚಾರ ಮಾಡಿಸಿ, ನಿಗದಿತ ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿ ಗಳಿಗೆ ಸೂಚಿಸಿದರು.

ಕ್ವಾರಂಟೈನ್‌ನಲ್ಲಿರುವವರ ಬಗ್ಗೆ ನಿಗಾವಹಿಸಿ: ನರೇಗಾ ಯೋಜನೆಗಳ ಜೊತೆಗೆ ಕೋವಿಡ್ ಸೋಂಕು ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವ್ಯಾಪಕ ವಾಗಿ ಪ್ರಚಾರ ಮಾಡಿ, ಅರಿವು ಮೂಡಿಸ ಬೇಕು. ಹೋಂ ಐಸೋಲೇಷನ್‌ ಹಾಗೂ ಕ್ವಾರಂಟೈನ್‌ನಲ್ಲಿರುವವರು ಅನವಶ್ಯಕವಾಗಿ ಓಡಾಡದಂತೆ ಪ್ರತಿ ದಿನ ಮನೆಗೆ ಭೇಟಿ ನೀಡಿ ಫೋಟೋ ತೆಗೆದು ಅಪ್ಲೋಡ್‌ ಮಾಡುವಂತೆ ಹಾಗೂ ಶೇ.100 ಹೋಂ ಐಸೋಲೇಷನ್‌ ನಲ್ಲಿರುವವರ ಕುರಿತು ನಿಗಾಹಿವಹಿಸುವಂತೆ ತಹಶೀಲ್ದಾರ್‌ ಮತ್ತು ಇಒಗೆ ಸೂಚಿಸಿದರು. ನಗರ ಪ್ರದೇಶ, ಪಪಂ, ಹೋಬಳಿ ಮಟ್ಟ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಸ್ಕ್ ಧರಿಸದ, ಗುಂಪು ಸೇರುವವರಿಗೆ ಹೆಚ್ಚಿನ ದಂಡ ವಿಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಾಪಂ ಇಒಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ರ್ಯಾಟ್‌ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದ ವ್ಯಕ್ತಿಗಳಿಗೆ ರೋಗಲಕ್ಷಣ ಇರುವುದು ಕಂಡು ಬಂದಲ್ಲಿ ಅಂತಹವರನ್ನು ಆರ್‌ಟಿ – ಪಿಸಿಆರ್‌ ಪರೀಕ್ಷೆಗೆ ಒಳಪಡಿಸಬೇಕು, ಪ್ರತಿ ದಿನ ಅಂಕಿ ಅಂಶಗಳ ವರದಿ ನೀಡುವಂತೆ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ಕುಮಾರ್‌, ತಹಶೀಲ್ದಾರ್‌ ಶಿವಶಂಕರಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ .ಹಿರಣ್ಣಯ್ಯ, ತಾಪಂ ಸಹಾಯಕ ನಿರ್ದೇಶಕ ದಿನೇಶ್‌, ತಹಶೀಲ್ದಾರರು, ಇಒ ಮತ್ತು ವೈದ್ಯಾಧಿಕಾರಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.