ನೇತ್ರದಾನಕ್ಕೆ ಕೋವಿಡ್ 19 ವೈರಸ್‌ ‘ವಕ್ರದೃಷ್ಟಿ’ : ಈ ವರ್ಷ ಸಂಗ್ರಹಿಸಿದ್ದು ಕೇವಲ 90 


Team Udayavani, Oct 8, 2020, 7:18 AM IST

ನೇತ್ರದಾನಕ್ಕೆ ಕೋವಿಡ್ 19 ವೈರಸ್‌ ‘ವಕ್ರದೃಷ್ಟಿ’ : ಈ ವರ್ಷ ಸಂಗ್ರಹಿಸಿದ್ದು ಕೇವಲ 90 

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ 19 ವೈರಸ್‌ ಈಗ ನೇತ್ರದಾನದ ಮೇಲೂ ವಕ್ರದೃಷ್ಟಿ ಬೀರಿದೆ.

ಪರಿಣಾಮ ಈ ಸಾಲಿನಲ್ಲಿ ರಾಜ್ಯದಲ್ಲಿ ಆಗಿರುವುದು ಕೇವಲ 90 ನೇತ್ರದಾನಗಳಷ್ಟೆ.

ಹಿಂದಿನ ಮೂರು ವರ್ಷಗಳಿಗೆ ಹೋಲಿಸಿದರೆ ನೇತ್ರದಾನ ಪ್ರಮಾಣ ಶೇ.98ರಷ್ಟು ಕುಸಿದಿದ್ದು, ಇದು ಈವರೆಗಿನ ಕನಿಷ್ಠ ದಾಖಲೆಯೂ ಆಗಿದೆ.

ಪ್ರತೀ ವರ್ಷ ರಾಜ್ಯದಲ್ಲಿ ಸರಾಸರಿ 5,000 ನೇತ್ರದಾನಗಳಾಗುತ್ತಿವೆ. ಕಳೆದ 3 ವರ್ಷಗಳಲ್ಲಿ ಸರಾಸರಿ 5,300 ನೇತ್ರದಾನಗಳಾಗಿವೆ.

ಈ ವರ್ಷ ಕೋವಿಡ್ 19 ಹಿನ್ನೆಲೆಯಲ್ಲಿ “ಆಸ್ಪತ್ರೆಯಲ್ಲಿ ದಾಖಲಾಗಿ ಕೋವಿಡೇತರ ಕಾರಣಕ್ಕೆ ಮೃತಪಟ್ಟವರಿಂದ ಮಾತ್ರ ನೇತ್ರದಾನ ಪಡೆಯಬೇಕು’ ಎಂಬ ನಿಯಮವನ್ನು ಕೇಂದ್ರ ಆರೋಗ್ಯ ಇಲಾಖೆಯು ಜಾರಿಗೊಳಿಸಿತ್ತು.


ಪರೀಕ್ಷೆಗೆ ಸಮಯವಿಲ್ಲ
ಮೃತಪಟ್ಟವರಿಂದ 6 ಗಂಟೆಗಳಲ್ಲೇ ಕಣ್ಣನ್ನು ಸಂಗ್ರಹಿಸಬೇಕಿದ್ದು, ಕೋವಿಡ್ 19 (ಆರ್‌ಟಿಪಿಸಿಆರ್‌) ಪರೀಕ್ಷೆ ನಡೆಸಿ ಸೋಂಕನ್ನು ಖಚಿತಪಡಿಸಿಕೊಳ್ಳಲು ಸಮಯ ಇರುವುದಿಲ್ಲ. ಹೀಗಾಗಿ ಮನೆಯಿಂದ ನೇತ್ರ ಸಂಗ್ರಹಕ್ಕೆ ತಡೆಯೊಡ್ಡಲಾಗಿದೆ ಎಂದು ಆರೋಗ್ಯ ಇಲಾಖೆ ನೇತ್ರ ವಿಭಾಗದ ಹಿರಿಯ ವೈದ್ಯಾಧಿಕಾರಿ ಡಾ| ಜಿ.ಎನ್‌. ರಜನಿ ತಿಳಿಸುತ್ತಾರೆ.

ಮನೆಯಿಂದಲೇ ಸಂಗ್ರಹ ಹೆಚ್ಚು
ರಾಜ್ಯದಲ್ಲಿ ಲಕ್ಷಾಂತರ ಮಂದಿ ನೇತ್ರದಾನಕ್ಕೆ ನೋಂದಣಿ ಮಾಡಿಸಿದ್ದು, ಅಂಥವರು ಮನೆಯಲ್ಲೇ ಮೃತಪಟ್ಟಾಗ ಆರೋಗ್ಯ ಸಿಬಂದಿ  ಸ್ಥಳಕ್ಕೆ ತೆರಳಿ ನೇತ್ರವನ್ನು ಸಂಗ್ರಹಿಸುತ್ತಾರೆ.  ರಾಜ್ಯದಲ್ಲಿ ಶೇ.90ಕ್ಕೂ ಅಧಿಕ ನೇತ್ರ ದಾನಗಳು ಈ ರೀತಿಯಾಗಿದ್ದವು.

ಇಂದು ವಿಶ್ವ ದೃಷ್ಟಿ ದಿನ
ದೃಷ್ಟಿ ಬಗ್ಗೆ ಅರಿವು ಮೂಡಿ ಸಲು ವಿಶ್ವಾದ್ಯಂತ ಅಕ್ಟೋಬರ್‌ 2ನೇ ಗುರುವಾರವನ್ನು ದೃಷ್ಟಿ ದಿನವಾಗಿ ಆಚರಿಸಲಾಗುತ್ತದೆ. ಈ ಬಾರಿಯ ಘೋಷ ವಾಕ್ಯವು ‘ದೃಷ್ಟಿಯಲ್ಲಿ ನಂಬಿಕೆ’ ಎಂಬುದಾಗಿದೆ. ದೇಶದಲ್ಲಿ 1.5 ಕೋಟಿ ಅಂಧರಿದ್ದು, ಈ ಪೈಕಿ ಕಾರ್ನಿಯ ಅಂಧತ್ವ ಪ್ರಮಾಣ ಶೇ.25ರಷ್ಟಿದೆ.  ಭಾರತಕ್ಕೆ ಪ್ರತಿ ವರ್ಷ 2 ಲಕ್ಷ ನೇತ್ರದಾನಿಗಳ ಅಗತ್ಯವಿದೆ.

– ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.