![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 8, 2020, 6:33 PM IST
ಬೆಳಗಾವಿ: ಸ್ಯಾಂಡಲ್ ವುಡ್ ನ ಖ್ಯಾತ ಚಿತ್ರ ಸಾಹಿತಿ ಕೆ.ಕಲ್ಯಾಣ್ ಅವರ ದಾಂಪತ್ಯ ಕಲಹ ಕೊನೆಗೂ ಅಂತ್ಯಕಂಡಿದ್ದು, ವಿವಾಹ ವಿಚ್ಛೇದನ ಅರ್ಜಿಯನ್ನು ವಾಪಸ್ ಪಡೆಯಲು ಪತ್ನಿ ಅಶ್ವಿನಿ ಒಪ್ಪಿಗೆ ಸೂಚಿಸಿರುವುದಾಗಿ ವರದಿ ತಿಳಿಸಿದೆ.
ಜೂನ್ 16ರಂದು ವಿವಾಹ ವಿಚ್ಛೇದನ ಕೋರಿ ಅಶ್ವಿನಿ ಅವರು ಬೆಳಗಾವಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಸಂದರ್ಭದಲ್ಲಿ ಕಲ್ಯಾಣ್ ಹಾಗೂ ಪತ್ನಿ ಅಶ್ವಿನಿಗೆ ಕೌನ್ಸೆಲಿಂಗ್ ಮಾಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿ ವಾಪಸ್ ಪಡೆಯಲು ಪತ್ನಿ ಸಹಮತ ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.
ಬಾಗಲಕೋಟೆಯ ಗಂಗಾ ಕುಲಕರ್ಣಿ ಹಾಗೂ ಬೀಳಗಿಯ ಶಿವಾನಂದ ಬಸವರಾಜ ವಾಲಿ ತನ್ನ ಪತ್ನಿ ಹಾಗೂ ಮಾವನನ್ನು ಅಪಹರಿಸಿ ಆಸ್ತಿ ಬರೆಯಿಸಿಕೊಂಡಿದ್ದಾರೆ ಎಂದು ಕಲ್ಯಾಣ್ ಅವರು ಬೆಳಗಾವಿಯಲ್ಲಿ ದೂರು ದಾಖಲಿಸಿದ್ದರು.
ಆರೋಪಿ ಗಂಗಾ ಕಲ್ಯಾಣ್ ಮನೆಯಲ್ಲಿ ಅಡುಗೆ ಕೆಲಸಕ್ಕೆಂದು ಸೇರಿಕೊಂಡಿದ್ದರು. ನಂತರ ಕುಟುಂಬದ ಸ್ನೇಹ ಬೆಳೆಸಿಕೊಂಡಿದ್ದು, ಶಿವಾನಂದನನ್ನೂ ಪರಿಚಯಿಸಿದ್ದಳು. ಇವರಿಬ್ಬರು ಸೇರಿ ಪತ್ನಿ ಅಶ್ವಿನಿ, ಅತ್ತೆ ರಾಧಿಕಾ ಹಾಗೂ ಮಾವ ಕೃಷ್ಣ ಸಾತ್ವಿಕ್ ಅವರನ್ನು ಪುಸಲಾಯಿಸಿ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಕಲ್ಯಾಣ್ ತಿಳಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಮಾಳ ಪೊಲೀಸರು ಶಿವಾನಂದ ವಾಲಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.