ರಸ್ತೆ ಕಾಮಗಾರಿ ಶೀಘ್ರ ಪೂರ್ಣ: ಶಾಸಕಿ

ಅಧಿಕಾರಿಗಳಿಗೆಕೆಜಿಎಫ್ ಶಾಸಕಿ ರೂಪಕಲಾ ಸೂಚನೆ

Team Udayavani, Oct 10, 2020, 3:40 PM IST

kolara-tdy-1

ಬೇತಮಂಗಲ: ಸುಮಾರು 3 ವರ್ಷಗಳಿಂದ ನಡೆಯುತ್ತಿರುವ ಬೇತಮಂಗಲ-ಕೊತ್ತೂರು ಹಾಗೂ ರಾಮಸಾಗರ ಕ್ರಾಸ್‌ ಬಳಿ ರಸ್ತೆ ಕಾಮಗಾರಿಗೆ ಮರ ಗಳು ಹಾಗೂ ವಿದ್ಯುತ್‌ ಕಂಬಗಳು ತೆರವುಗೊಳಿಸದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಬಗ್ಗೆ ಉದಯವಾಣಿ ಕೋಲಾರ ಆವೃತ್ತಿಯಲ್ಲಿ ಅ.7ರಂದು “”ಮರ, ಕಂಬ ತೆರವು ಮಾಡದಿದ್ರೆ ಕಾಮಗಾರಿ ಸ್ಥಗಿತ” ಶೀರ್ಷಿಕೆಯಡಿ ಪ್ರಕಟವಾಗಿದ್ದ ವರದಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಶುಕ್ರವಾರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕಿ ರೂಪಕಲಾ ಶಶಿಧರ್‌, ನಿತ್ಯ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದು, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಶೀಘ್ರ ಪೂರ್ಣ ಭರವಸೆ: ರಾಷ್ಟ್ರೀಯ ಪ್ರಾಧಿಕಾರದ ಹೆದ್ದಾರಿಯಾಗಿರುವ ಈ ರಸ್ತೆಯನ್ನು ಗುಜರಾತ್‌ ಮೂಲದ ಸಂಸ್ಥೆ ಪಿಚ್ಚಹಳ್ಳಿ-ಎನ್‌.ಜಿ.ಹುಲ್ಕೂರು ಗ್ರಾಮ ದವರೆಗೆ ರಸ್ತೆ ಅಭಿವೃದ್ಧಿಗಾಗಿ 54 ಕೋಟಿಗೆ ಗುತ್ತಿಗೆಪಡೆದುಕೊಂಡಿದ್ದು, ರಾಷ್ಟ್ರೀಯ ವಿಪತ್ತು ಎದುರಾಗಿ ಅನುದಾನ ಬಿಡುಗಡೆಯಾಗದೆ, ರಸ್ತೆ ಕಾಮಗಾರಿ ಸ್ಥಗಿತ ಗೊಳಿಸಲಾಗಿತ್ತು. ಅನುದಾನದಲ್ಲಿ ಸ್ವಲ್ಪ ಭಾಗವನ್ನು ಬಿಡುಗಡೆ ಮಾಡಿರುವ ಹಿನ್ನೆಲೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳುವುದಾಗಿ ಭರವಸೆ ನೀಡಿದರು.

ವಿದ್ಯುತ್‌, ಅರಣ್ಯ ಇಲಾಖೆಗೆ ಸೂಚನೆ: ರಸ್ತೆಯ ಅಕ್ಕಪಕ್ಕದಲ್ಲಿ ರಸ್ತೆಗೆ ಅಡ್ಡವಾಗಿರುವ ವಿದ್ಯುತ್‌ ಕಂಬಗಳನ್ನು ಇಂದಿನಿಂದಲೇ (ಶುಕ್ರವಾರ) ಸ್ಥಳ ಗುರುತಿಸಿ ವಿದ್ಯುತ್‌ ಕಂಬಗಳನ್ನು ಮತ್ತೂಂದು ಕಡೆಗೆ ಸ್ಥಳಾಂತರ  ಮಾಡಬೇಕೆಂದರು. ರಸ್ತೆ ಪಕ್ಕದಲ್ಲಿರುವ ಮರಗಳನ್ನು ಶೀಘ್ರವಾಗಿ ಗುತ್ತಿಗೆ ಮೂಲಕ ತೆರವುಗೊಳಿಸಿ ರಸ್ತೆ ಕಾಮಗಾರಿನಡೆಸಲುಅನುವುಮಾಡಿಕೊಡಬೇಕೆಂದು ಸೂಚಿಸಿದರು.

ರಸ್ತೆ ಎತ್ತರ ಮಾಡಿ: ಈ ರಸ್ತೆಯಲ್ಲಿ ಮಳೆ ನೀರು ನಿಲ್ಲುವುದರಿಂದ ಮಳೆ ಬಂದಾಗ ರಸ್ತೆಯೇ ಕಾಣದೆ ಅಪ ಘಾತ ಸಂಭವಿಸುತ್ತವೆ. ರಸ್ತೆಯನ್ನು ಎತ್ತರ ಮಾಡಿ ನಂತರ ಡಾಂಬರೀಕರಣ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು. ಈ ರಸ್ತೆ ಕಾಮಗಾರಿ ನಡೆಸಲು ಸ್ಥಳೀಯರಿಂದ ಹಾಗೂ  ಇಲಾಖೆಯಿಂದ ಯಾವುದೇ ಸಮಸ್ಯೆಯಾದರೂ ತಮ್ಮ ಗಮನಕ್ಕೆ ತಂದು ಇತ್ಯರ್ಥಪಡಿಸಿಕೊಂಡು ರಸ್ತೆಗೆ ಮುಕ್ತಿ ನೀಡಿ ಎಂದರು.

ಜಿಪಂ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ, ನಾರಾಯಣಸ್ವಾಮಿ, ಅರಣ್ಯ ಇಲಾಖೆ ಅಧಿಕಾರಿ ವೇಣು, ರವೀಂದ್ರ, ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪದ್ಮನಾಭ ರೆಡ್ಡಿ, ಬೇತಮಂಗಲ ಸೊಸೈಟಿ ನಿರ್ದೇಶಕರಾದ ಸುರೇಂದ್ರಗೌಡ, ಒಬಿಸಿ ಮುನಿ ಸ್ವಾಮಿ, ಎಪಿಎಂಸಿ ನಿರ್ದೇಶಕ ರಾಮಚಂದ್ರ, ಮುಖಂಡರಾದ ತಂಬಾರಹಳ್ಳಿ ಮುನೇಗೌಡ, ಶ್ರೀಧರ್‌ರೆಡ್ಡಿ, ಗುತ್ತಿಗೆದಾರರು, ರಾಷ್ಟ್ರೀಯ ಹೆದ್ದಾರಿಇಲಾಖೆ ಅಧಿಕಾರಿಗಳು ಸೇರಿದಂತೆ ಅನೇಕರು ಹಾಜರಿದ್ದರು.

ಸರ್ಕಾರದಿಂದ ಅನುದಾನ ಬಿಡುಗಡೆಯಾಗದೆ ಹಿನ್ನೆಲೆ ರಸ್ತೆ ಕಾಮಗಾರಿ ಸ್ಥಗಿತ ಮಾಡಲಾಗಿತ್ತು. ಸ್ವಲ್ಪ ಅನುದಾನ ಗುತ್ತಿಗೆದಾರರಿಗೆ ನೀಡಲಾಗಿದೆ. ರಸ್ತೆಯ ಪಕ್ಕದ ಮರ ಹಾಗೂ ವಿದ್ಯುತ್‌ ನಿಗಮದವರುಕಂಬಗಳನ್ನು ತೆರವು ಮಾಡಿದ್ದಾರೆ. ರಸ್ತೆ ಪೂರ್ಣಗೊಳಿಸಲಾಗುವುದು. ಶಾಸಕರು ಅನೇಕ ಬಾರಿ ಇಲಾಖೆಗೆ ಭೇಟಿ ನೀಡಿ ಈ ಬಗ್ಗೆ ಚರ್ಚಿಸಿದ್ದಾರೆ. ಮಲ್ಲಿಕಾರ್ಜುನ್‌, ಎಇಇ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಾಧಿಕಾರ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.