ಕೋವಿಡ್: ಆಸ್ಪತ್ರೆಗೆ ದಾಖಲಾದ 4 ದಿನದಲ್ಲೇ ಶೇ. 51 ಸಾವು!

ಜೀವನ ರಕ್ಷಾ ಅಧ್ಯಯನದಲ್ಲಿ ಬಹಿರಂಗ

Team Udayavani, Oct 11, 2020, 6:00 AM IST

ಕೋವಿಡ್: ಆಸ್ಪತ್ರೆಗೆ ದಾಖಲಾದ 4 ದಿನದಲ್ಲೇ ಶೇ. 51 ಸಾವು!

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಶೇ. 51ರಷ್ಟು ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾದ ನಾಲ್ಕು ದಿನಗಳಲ್ಲೇ ಸಾವನ್ನಪ್ಪಿದ್ದು, ಈ ಪೈಕಿ ಶೇ. 17 ಸೋಂಕಿತರು ಆಸ್ಪತ್ರೆಗೆ ಆಗಮಿಸಿದ ದಿನವೇ ಮೃತಪಟ್ಟಿದ್ದಾರೆ ಎಂಬುದು ಅಧ್ಯಯನವೊಂದರಿಂದ ತಿಳಿದು ಬಂದಿದೆ.

ಆಗಸ್ಟ್‌ನಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯನ್ನು ಆಧರಿಸಿ ಮೈಸೂರಿನ ಜೀವನ್‌ ರಕ್ಷಾ ಮ್ಯಾನೇಜ್‌ಮೆಂಟ್‌ ಕನ್ಸಲ್ಟಿಂಗ್‌ ಸಂಸ್ಥೆಯು ಈ ಅಧ್ಯಯನ ನಡೆಸಿದೆ. ಆ ತಿಂಗಳಲ್ಲಿ ಸಾವನ್ನಪ್ಪಿದ 2,697 ಸೋಂಕಿತರ ಪೈಕಿ ಶೇ. 51 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿ ನೂರು ತಾಸುಗಳಲ್ಲೇ ಸಾವನ್ನಪ್ಪಿದ್ದಾರೆ. ಕೋಲಾರದಲ್ಲಿ ಈ ಪ್ರಮಾಣ ನೂರರಷ್ಟಿದ್ದು, ಶೇ. 17ರಷ್ಟು ಮಂದಿ ದಾಖಲಾದ ದಿನವೇ ಮೃತಪಟ್ಟಿದ್ದಾರೆ. ಶೇ. 3ರಷ್ಟು ಸೋಂಕಿತರು ಆಸ್ಪತ್ರೆಗೆ ಆಗಮಿಸುವಷ್ಟರಲ್ಲಿ ಕೊನೆಯುಸಿರೆಳೆದಿರುವುದು ಪತ್ತೆಯಾಗಿದೆ ಎಂದು ಜೀವನ್‌ ರಕ್ಷಾ ಇನಿಷಿಯೇಟಿವ್‌ ಆಫ್ ಪ್ರಾಕ್ಸಿಮಾ ಸಂಚಾಲಕ ಮೈಸೂರು ಸಂಜೀವ್‌ ತಿಳಿಸಿದರು.

“ಕೋವಿಡ್‌ ಅವಧಿಯಲ್ಲಿ ಸಾವಿಗೆ ಕಾರಣವಾಗುವ ಅಂಶಗಳು’ ಕುರಿತ ಆನ್‌ಲೈನ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಂಕಿ-ಅಂಶಗಳು ಕೊರೊನಾ ಬಗ್ಗೆ ಸೋಂಕಿತರ ನಿರ್ಲಕ್ಷ್ಯ ಹಾಗೂ ಆಸ್ಪತ್ರೆ ವ್ಯವಸ್ಥೆಗೆ ಕನ್ನಡಿಯಾಗಿವೆ ಎಂದರು.

ಸಾವನ್ನಪ್ಪಿದವರಲ್ಲಿ ಬಹುತೇಕರು ವೈರಸ್‌ ಬಗ್ಗೆ ನಿರ್ಲಕ್ಷ್ಯ ಹೊಂದಿ ಕೊನೆ ಕ್ಷಣದಲ್ಲಿ ಆಸ್ಪತ್ರೆಗೆ ಹೋಗಿದ್ದಾರೆ. ಉತ್ತರ ಕನ್ನಡ, ಕಲಬುರಗಿ, ಚಾಮರಾಜನಗರ ಮತ್ತು ಹಾಸನದಲ್ಲಿ ಕನಿಷ್ಠ ಶೇ. 18ರಿಂದ ಗರಿಷ್ಠ ಶೇ. 23ರಷ್ಟು ಜನ ಆಸ್ಪತ್ರೆಗಳಿಗೆ ಬರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಹಲವು ಪ್ರಕರಣಗಳಲ್ಲಿ ಗ್ರಾಮೀಣ ಭಾಗದ ಸೌಲಭ್ಯಗಳ ಕೊರತೆ ಕಾರಣವಾಗಿವೆ. ಶೇ.40 ರೋಗಿಗಳು ಆಸ್ಪತ್ರೆಗಳಲ್ಲಿ 5-49 ದಿನಗಳ ಅಂತರದಲ್ಲಿ ಮೃತಪಟ್ಟಿದ್ದಾರೆ ಎಂದು ಅಧ್ಯಯನದಿಂದ ತಿಳಿದು ಬಂದಿದೆ ಎಂದರು.

ಆಸ್ಪತ್ರೆಗಳ ಲೆಕ್ಕಾಚಾರ
ಶೇ. 45 ಸಾವು ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟ ಆಸ್ಪತ್ರೆಗಳಲ್ಲಿ ಹಾಗೂ ಶೇ. 27 ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಮೃತಪಟ್ಟಿದ್ದಾರೆ. ಒಟ್ಟಾರೆ 2,697 ಸಾವುಗಳಲ್ಲಿ 32 ಸೋಂಕಿತರು ತಮ್ಮ ಮನೆಗಳಲ್ಲಿ ಹಾಗೂ 38 ರೋಗಿಗಳು ಆಸ್ಪತ್ರೆಗೆ ತರುವಾಗ ಸಾವನ್ನಪ್ಪಿದ್ದಾರೆ. ರಾಮನಗರದಲ್ಲಿ ದಾಖಲಾದ ಸಾವುಗಳ ಪೈಕಿ ಶೇ. 88 ಖಾಸಗಿ ಆಸ್ಪತ್ರೆಗಳಲ್ಲಾಗಿವೆ. ಇನ್ನು ಬೀದರ್‌ನಲ್ಲಿ ಶೇ. 92 ಸಾವು ಕೋವಿಡ್‌-19ಗೆ ಮೀಸಲಿಟ್ಟ ಆಸ್ಪತ್ರೆಗಳಲ್ಲಾಗಿವೆ. 30 ವರ್ಷ ಮೇಲ್ಪಟ್ಟ 54 ಸೋಂಕಿತರು ಅಸುನೀಗಿದ್ದು, ಇದರಲ್ಲಿ ಶೇ. 37 ಜನ ಬೆಂಗಳೂರು ನಗರಕ್ಕೆ ಸೇರಿದವರು.

ಮೃತರಲ್ಲಿ ಹೆಚ್ಚಿನವರಿಗೆ ತೀವ್ರ ಉಸಿರಾಟದ ಸಮಸ್ಯೆ (ಸಾರಿ), ವಿಷಮಶೀತ ಜ್ವರದ ಲಕ್ಷಣಗಳಿದ್ದವು. ಶ್ವಾಸಕೋಶ ತಜ್ಞರ ಕೊರತೆ ಮತ್ತಿತರ ಅಂಶಗಳು ಕಾರಣ ಎಂದ ಅವರು, ಸಾವನ್ನಪ್ಪಿದವರಲ್ಲಿ ಶೇ. 69.19ರಷ್ಟು ಪುರುಷರು ಹಾಗೂ ಶೇ. 30.77 ಮಹಿಳೆಯರು. ದೇಶದ ಕೋವಿಡ್‌ ಪಾಸಿಟಿವಿಟಿ ಪ್ರಮಾಣ ಶೇ. 7.6ರಷ್ಟಿದ್ದು, ಕರ್ನಾಟಕ, ಆಂಧ್ರ ಪ್ರದೇಶ, ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಶೇ. 9.7 ರಷ್ಟಿದೆ. ಅದೇ ರೀತಿ, ದೊಡ್ಡ ರಾಜ್ಯ ಗಳಲ್ಲಿ ಮೃತ ಪ್ರಮಾಣ ಶೇ. 78ರಷ್ಟಿದೆ ಎಂದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.