![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 11, 2020, 8:27 AM IST
ಹೈದರಾಬಾದ್: “ದೇಶದ ಎಲ್ಲ ನಾಗರಿಕರಿಗೂ ಮತದಾನದ ಹಕ್ಕನ್ನು ನೀಡಲೇಬಾರದು.’ ಹೀಗೆಂದು ಹೇಳಿರುವುದು ತೆಲುಗಿನ ನಟ ವಿಜಯ್ ದೇವರಕೊಂಡ.
ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿರುವ ಅವರು, “ನಾನೇನಾದರೂ ರಾಜಕೀಯ ಪ್ರವೇಶಿಸಿದರೆ “ಸರ್ವಾಧಿಕಾರಿಯಾಗಲು ಬಯಸುತ್ತೇನೆ. 300 ಮಂದಿ ಒಂದು ವಿಮಾನದಲ್ಲಿ ತೆರಳಲು ಬಯಸುತ್ತಾರೆ ಎಂದಿಟ್ಟುಕೊಳ್ಳಿ. ಪೈಲಟ್ ಯಾರಾಗಬೇಕು ಎಂದು ಎಲ್ಲ 300 ಮಂದಿ ಸೇರಿ ನಿರ್ಧರಿಸುತ್ತಾರಾ? ಇಲ್ಲವಲ್ಲ. ವಿಮಾನ ಓಡಿಸಲು ಯಾರು ಅರ್ಹರು ಎಂಬುದನ್ನು ಒಂದು ಸಮರ್ಪಕ ಸಂಸ್ಥೆ ನಿರ್ಧರಿಸುತ್ತದೆ.
ಅದೇ ರೀತಿ ದೇಶವನ್ನು ನಡೆಸಬೇಕಾದವರು ಯಾರು ಎಂಬುದನ್ನು ಇಡೀ ದೇಶವೇ ನಿರ್ಧರಿಸಬೇಕಾಗಿಲ್ಲ. ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡುವುದು ನನಗೆ ಸಮಂಜಸ ಎನಿಸುವುದಿಲ್ಲ ಎಂದೂ ಹೇಳಿದ್ದಾರೆ.
ಇದನ್ನೂ ಓದಿ:ಟೈಮ್ ಮುಖಪುಟದಲ್ಲಿ ಅಪ್ಪಟ ಭಾರತೀಯ ಪ್ರತಿಭೆ ಮಾನಸಿ ಜೋಷಿ
ತುಂಬಾ ಜನರು ಹಣ ಮತ್ತು ಹೆಂಡಕ್ಕಾಗಿ ತಮ್ಮ ಮತದಾನದ ಹಕ್ಕನ್ನು ಮಾರಿಕೊಳ್ಳುತ್ತಾರೆ. ಅವರು ಯಾವ ಕಾರಣಕ್ಕಾಗಿ ಮತದಾನದಲ್ಲಿ ಭಾಗಿಯಾಗುತ್ತಾರೆ ಎನ್ನುವ ಪರಿಕಲ್ಪನೆಯೂ ಅವರಿಗೆ ಇರುವುದಿಲ್ಲ. ಅಂತವರಿಗೆ ಮತದಾನ ಮಾಡಲು ಅವಕಾಶ ನೀಡಬಾರದು ಎಂದು ವಿಜಯ್ ಹೇಳಿದ್ದಾರೆ.
ಅರ್ಜುನ್ ರೆಡ್ಡಿ ಚಿತ್ರದ ಮೂಲಕ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಹೊಸ ಸೆನ್ಸೇಶನ್ ಹುಟ್ಟು ಹಾಕಿದ ವಿಜಯ್ ದೇವರಕೊಂಡ ಮುಂದಿನ ಚಿತ್ರ ಫೈಟರ್ ನಲ್ಲಿ ಅನನ್ಯಾ ಪಾಂಡೆ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.