ವಿದ್ಯಾಗಮ ಯೋಜನೆ ಸ್ಥಗಿತ; ಮಲೆನಾಡಿನಲ್ಲಿ ಸಂತಸ

ಕುಗ್ರಾಮಗಳಿಗೆ ಹೋಗಲು ವಾಹನದ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದ ಶಿಕ್ಷಕರು

Team Udayavani, Oct 11, 2020, 4:04 PM IST

ವಿದ್ಯಾಗಮ ಯೋಜನೆ ಸ್ಥಗಿತ; ಮಲೆನಾಡಿನಲ್ಲಿ ಸಂತಸ

ಸಕಲೇಶಪುರ: ಕೋವಿಡ್ ಆತಂಕ ನಡುವೆ ಸರ್ಕಾರ ಕಾರ್ಯಗತಗೊಳಿಸಿದ್ದ ವಿದ್ಯಾಗಮ ಯೋಜನೆಯನ್ನು ಈಗ ಸ್ಥಗಿತಗೊಳಿಸಿದ್ದು, ಮಲೆನಾಡು ಭಾಗದ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

ತಾಲೂಕಿನಲ್ಲಿ 170 ಸರ್ಕಾರಿ ಪ್ರಾಥಮಿಕ, 15 ಸರ್ಕಾರಿ ಪ್ರೌಢಶಾಲೆ ಇವೆ.400 ಶಿಕ್ಷಕರು ಪ್ರಾಥಮಿಕ ವಿಭಾಗ, 100 ಶಿಕ್ಷಕರು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜಾಘೋಷಣೆಮಾಡಿ,ಮಕ್ಕಳುಅಕ್ಷರಾಭ್ಯಾಸದಿಂದ ಹಿಂದೆ ಉಳಿಯಬಾರದು ಎಂದು ಸರ್ಕಾರ ವಿದ್ಯಾಗಮ ಯೋಜನೆ ಜಾರಿಗೆ ತಂದಿತ್ತು.

ವಾರದಲ್ಲಿ ಒಂದು ಅಥವಾ ಎರಡು ದಿನ ಶಿಕ್ಷಕರು ಹೆಚ್ಚು ಮಕ್ಕಳಿರುವ ಜಾಗಗಳಿಗೆ ಹೋಗಿ ಅವರನ್ನೆಲ್ಲ ಒಂದು ಕಡೆ ಸೇರಿಸಿ ಹತ್ತಿರವಿರುವ ಸಮುದಾಯ ಭವನ, ದೇವಸ್ಥಾನ, ಮರದ ನೆರಳಿನಲ್ಲಿ ತರಗತಿ ಮಾಡಲಾಗುತ್ತಿತ್ತು. ಆದರೆ, ವಿದ್ಯಾಗಮ ಯೋಜನೆಯಡಿ ರಾಜ್ಯಾದ್ಯಂತ ಕೆಲಸ ಮಾಡುತ್ತಿದ್ದ ಕೆಲ ಶಿಕ್ಷಕರಿಗೆ ಕೋವಿಡ್ ಸೋಂಕು ಬಂದಿರುವುದು. ಕೆಲವರು ಸಾವನ್ನಪ್ಪಿರುವುದು ತಾಲೂಕಿನ ಶಿಕ್ಷಕರಲ್ಲೂ ಆತಂಕ ತರಿಸಿತ್ತು. ಜೊತೆಗೆಪೋಷಕರು ಸಹ ಭಯದಲ್ಲೇ ತಮ್ಮ ಮಕ್ಕಳನ್ನು ವಿದ್ಯಾಗಮಕ್ಕೆ ಕಳುಹಿಸುತ್ತಿದ್ದರು.

ಮಲೆನಾಡಿನಲ್ಲಿ ನಿರಂತರವಾಗಿ ಮಳೆ ಸುರಿಯತ್ತಿದ್ದ ಕಾರಣ, ಕುಗ್ರಾಮಗಳಿಗೆ ಹೋಗಲು ವಾಹನದ ವ್ಯವಸ್ಥೆ ಇಲ್ಲದೆ, ಶಿಕ್ಷಕರು ಪರದಾಡುತ್ತಿದ್ದರು. ಇನ್ನು ವಿದ್ಯಾಗಮ ಯೋಜನೆಯಲ್ಲಿ ಗ್ರಾಮಗಳ ಹತ್ತಿರದಲ್ಲಿರುವ ಸಮುದಾಯ ಭವನ, ಬಯಲು, ದೇವಸ್ಥಾನದಂತಹ ಜಾಗ ಹುಡುಕಿಕೊಂಡು ಮಕ್ಕಳಿಗೆ ಪಾಠ ಮಾಡಬೇಕಾಗಿತ್ತು. ಬಹುತೇಕ ಕಡೆ ಮೂಲ ಸೌಕರ್ಯಗಳಿಲ್ಲದೆ ಮೂತ್ರ ವಿಸರ್ಜಿಸಲು ಸಹ ಶಿಕ್ಷಕರು ಪರದಾಡಬೇಕಾಗಿತ್ತು. ಗ್ರಾಮಾಂತರಪ್ರದೇಶಗಳಲ್ಲಿಆರೋಗ್ಯ ಭದ್ರತೆಯೂ ಇರದ ಕಾರಣ ಮಹಿಳಾ ಶಿಕ್ಷಕರು ಆತಂಕಗೊಂಡಿದ್ದರು. ಹಲವು ಸಂದರ್ಭಗಳಲ್ಲಿ ಮಕ್ಕಳಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಅಸಾಧ್ಯವಾಗಿತ್ತು. ಜೊತೆಗೆ ಮಕ್ಕಳನ್ನು ನಿಯಂತ್ರಿಸಲು ಶಿಕ್ಷಕರಿಗೆ ಸವಾಲಿನ ಕೆಲಸವಾಗಿತ್ತು.

ಕೋವಿಡ್ ಭಯ ಶಿಕ್ಷಕರನ್ನುಕಾಡುತ್ತಿತ್ತು. ಈ ಎಲ್ಲಾ ಕಾರಣಗಳಿಂದ ವಿದ್ಯಾಗಮ ಯೋಜನೆಯನ್ನು ನಿಲ್ಲಿಸಬೇಕೆಂಬ ಕೂಗು ತಾಲೂಕಿನಲ್ಲಿ ಮೊದಲಿನಿಂದಲೂ ಕೇಳಿ ಬರುತ್ತಲೇ ಇತ್ತು. ಸರ್ಕಾರ ಈಗ ಸ್ಥಗಿತಗೊಳಿಸಿದ್ದಕ್ಕೆ ಶಿಕ್ಷಕರ ವಲಯ ಸಂತಸ ವ್ಯಕ್ತಪಡಿಸಿದೆ.

ವಿದ್ಯಾಗಮಯೋಜನೆ ಸ್ಥಗಿತಗೊಳಿಸಿದಕ್ರಮ ಸರಿ ಇದೆ. ಅಪರಿಚಿತ ಸ್ಥಳಗಳಲ್ಲಿಯಾವುದೇ ಭದ್ರತೆ ಇಲ್ಲದೆ ತರಗತಿ ನಡೆಸುತ್ತಿದ್ದರಿಂದಾಗಿ ಕೋವಿಡ್ ಸೋಂಕು ಹರಡುವ ಸಾಧ್ಯತೆ ಹೆಚ್ಚಿತ್ತು. ತಮ್ಮಣ್ಣ ಶೆಟ್ಟರು, ತಾಲೂಕು ಅಧ್ಯಕ್ಷ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ವಿದ್ಯಾಗಮಯೋಜನೆ ಸ್ಥಗಿತಗೊಳಿಸಿದ ಸರ್ಕಾರದಕ್ರಮ ಸರಿಯಿದೆ. ಒಂದು ವರ್ಷ ಮಕ್ಕಳಿಗೆ ಶೈಕ್ಷಣಿಕವಾಗಿ ಹಿನ್ನಡೆಯಾದ್ರೆ ಏನು ಆಗುವುದಿಲ್ಲ. ಬರುವ ಜೂನ್‌ನಿಂದ ಶಾಲೆ ಆರಂಭಿಸಲಿ, ಆ ವೇಳೆಗೆ ಕೋವಿಡ್ ಸೋಂಕುಕಡಿಮೆಯಾಗುವ ಸಾಧ್ಯತೆಯಿದೆ. ಎಚ್‌.ಕೆ.ಕುಮಾರಸ್ವಾಮಿ, ಶಾಸಕ.

 

ಸುಧೀರ್‌ ಎಸ್‌.ಎಲ್‌.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.