ಶಿವಮೊಗ್ಗ ಮನೆ ತೆರವು ವಿರೋಧಿಸಿ ಪ್ರತಿಭಟನೆ


Team Udayavani, Oct 11, 2020, 8:06 PM IST

sm-tdy-1

ಶಿವಮೊಗ್ಗ: ಮನೆಗಳ ತೆರವು ವಿರೋ ಧಿಸಿ ಇಲ್ಲಿನ ಇಮಾಂಬಡಾ ನಿವಾಸಿಗಳು ಪ್ರತಿಭಟನೆ ನಡೆಸಿದರು. ಶನಿವಾರ ಪಾಲಿಕೆಯಿಂದ ಮನೆಗಳ ತೆರವು ಕಾರ್ಯಾಚರಣೆ ಕೈಗೊಳ್ಳಲು ಮುಂದಾದಾಗ ನಿವಾಸಿಗಳು ಪ್ರತಿರೋಧ ವ್ಯಕ್ತಪಡಿಸಿದರಲ್ಲದೆ ಧರಣಿ ನಡೆಸಿದರು.

ಪಾಲಿಕೆ ವಿಪಕ್ಷ ನಾಯಕ ಎಚ್‌.ಸಿ.ಯೋಗೀಶ್‌ ಮತ್ತು ಸದಸ್ಯರಾದ ನಾಗರಾಜ್‌ ಕಂಕಾರಿ ಹಾಗೂ ಕೆ.ರಂಗನಾಥ್‌ ಪ್ರತಿಭಟನೆಗೆ ಸಾಥ್‌ ನೀಡಿದರು. ಪ್ರತಿ ಬಾರಿ ಮಳೆಗಾಲದಲ್ಲೂ ಇಮಾಂಬಡಾದಲ್ಲಿರುವ ಸುಮಾರು 27ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗುತ್ತದೆ. ಪ್ರತಿ ಬಾರಿ ಪ್ರವಾಹ ಬಂದಾಗ ಇಲ್ಲಿನ ನಿವಾಸಿಗಳಿಗೆ ಸಂಕಷ್ಟಎದುರಾಗುತ್ತದೆ. ಹೀಗಾಗಿ ಮಹಾನಗರಪಾಲಿಕೆಇವರಿಗೆ ಬೇರೆ ಕಡೆ ಜಾಗ ನೀಡಿ ಮನೆಗಳನ್ನು ತೆರವುಗೊಳಿಸಲು ಮುಂದಾಗಿದೆ. ಆದರೆ ಬೇರೆಡೆ ನೀಡಲಾದ ಸ್ಥಳದಲ್ಲಿ ಯಾವುದೇ ಸೌಕರ್ಯವಿಲ್ಲ ಹೀಗಾಗಿ ಮನೆ ತೆರವುಗೊಳಿಸಬಾರದು ಎಂದು ನಿವಾಸಿಗಳು ಒತ್ತಾಯಿಸಿದರು.

ಪಾಲಿಕೆ ಗುರುತಿಸಿರುವ ಹಾಯ್‌ಹೊಳೆಯ ಜಾಗದಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಹಾಗೂ ಮನೆಗಳನ್ನು ತೆರವುಗೊಳಿಸದಂತೆ ಇಲ್ಲಿನ ಕೆಲವರು ನ್ಯಾಯಾಲಯದ ಮೊರೆಹೋಗಿದ್ದರು. ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ ಪಾಲಿಕೆ ಅಧಿಕಾರಿಗಳು ತೆರವುಗೊಳಿಸುತ್ತಿರುವುದಕ್ಕೆ ಅಲ್ಲಿನ ನಿವಾಸಿಗಳು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಸ್ಥಳದಲ್ಲಿಯೇ ಧರಣಿಕುಳಿತರು. ಯಾವುದೇ ಕಾರಣಕ್ಕೂ ಮನೆ ತೆರವುಗೊಳಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು.

ಪಾಲಿಕೆ ವಿಪಕ್ಷ ನಾಯಕ ಎಚ್‌.ಸಿ.ಯೋಗೀಶ್‌ ಮಾತನಾಡಿ, ಇಮಾಂಬಡಾದಲ್ಲಿ ಸಮಸ್ಯೆ ಇದ್ದೇ ಇದೆ. ಇಲ್ಲಿನ ನಿವಾಸಿಗಳಿಗೆ ಬೇರೆ ಕಡೆ ಜಾಗ ನೀಡಲಾಗಿದೆ. ಆದರೆ ಅಲ್ಲಿ ಮೂಲ ಸೌಕರ್ಯ ಇಲ್ಲ. ಮೊದಲು ಸೌಕರ್ಯಗಳನ್ನು ಕಲ್ಪಿಸಲಿ.

ಅಲ್ಲದೇ ಅಲ್ಲಿ ಕೆಲವು ಖಾಸಗಿಯವರು ಇದು ತಮ್ಮ ಜಾಗವೆಂದು ಹೇಳಿಕೊಳ್ಳುತ್ತಿದ್ದಾರೆ. ಹಾಗಾಗಿ ಪಾಲಿಕೆಯವರು ಎಲ್ಲಸಮಸ್ಯೆಗಳನ್ನು ಬಗೆಹರಿಸಿ ಆಮೇಲೆ ನಿವಾಸಿಗಳನ್ನು ಸ್ಥಳಾಂತರಗೊಳಿಸಲಿ ಎಂದು ಹೇಳಿದರು.

ಇಮಾಂಬಡಾದ ನಿವಾಸಿಗಳ ಸ್ಥಳಾಂತರ ಅನಿವಾರ್ಯ. ಇಲ್ಲಿನ ನಿವಾಸಿಗಳಿಗೆ ಈಗಾಗಲೇ ಬೇರೆ ಕಡೆ ಜಾಗ ಗುರುತಿಸಲಾಗಿದೆ. ಅಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಒದಗಿಸಲಾಗಿದೆ. ಆದರೂ ಇವರು ಹೋಗುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಪ್ರತಿ ಬಾರಿ ಪ್ರವಾಹ ಉಂಟಾದಾಗಲೂ ಇಲ್ಲಿನ ನಿವಾಸಿಗಳು ಪರಿಹಾರ ಪಡೆಯುತ್ತಾರೆಯೇ ಹೊರತು ಹೊಸ ಜಾಗಕ್ಕೆ ಹೋಗಲು ಒಪ್ಪುವುದಿಲ್ಲ. ಹೀಗಾದರೆ ಸಮಸ್ಯೆ ಬಗೆಹರಿಯುವುದಾದರೂ ಹೇಗೆ? ಹಾಯ್‌ಹೊಳೆ ಜಾಗದಲ್ಲಿ ಎಲ್ಲರಿಗೂ ನಿವೇಶನ ನೀಡಲಾಗಿದೆ. ಮನೆ ಕಟ್ಟಿಕೊಳ್ಳಲೆಂದೇ ಪ್ರತಿಯೊಬ್ಬರಿಗೂ 1.25 ಲಕ್ಷ ಹಣ ಪಾವತಿಸಲಾಗಿದೆ. ಆದರೂ ಕೂಡ ನಿವಾಸಿಗಳು ಹೊಸ ಜಾಗಕ್ಕೆ ತೆರಳುತ್ತಿಲ್ಲ. ಈಗಾಗಲೇ ಅವರಿಗೆಮನೆ ಖಾಲಿ ಮಾಡುವಂತೆ ತಿಳಿಸಿ 1 ವರ್ಷದ ಕಾಲಾವಕಾಶ ನೀಡಲಾಗಿದೆ. ಇವರು ಅಲ್ಲಿಗೆ ತೆರಳಿದ ಕೂಡಲೇ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿಕೊಡಲಾಗುವುದು. ಸದ್ಯ ಅನಿವಾರ್ಯವಾಗಿ ಇಲ್ಲಿನ ಮನೆಗಳನ್ನು ತೆರವುಗೊಳಿಸಬೇಕಾಗಿದೆ. ಇಲ್ಲದಿದ್ದರೆ ಈ ಸಮಸ್ಯೆ ಜೀವಂತವಾಗಿ ಉಳಿಯುತ್ತದೆ ಮತ್ತು ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-Shiavamogga

Industry: ಕುದುರೆಮುಖದ ಕಂಪನಿಗೆ ದಿನಕ್ಕೆ 27 ಕೋಟಿ ರೂ.ನಷ್ಟ: ಎಚ್‌.ಡಿ.ಕುಮಾರಸ್ವಾಮಿ

Beluru

Shivamogga: ಸಾಗರ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ, ನೂರು ಹಾಸಿಗೆ ವ್ಯವಸ್ಥೆ: ಶಾಸಕ ಬೇಳೂರು

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Theertha-Land

Landslide: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ!

Theerthalli

Theerthahalli: ವಾಹನ ಚಲಾಯಿಸುವ ವೇಳೆಯೇ ಕುಸಿದು ಬಿದ್ದು ಯುವಕ ದುರ್ಮರಣ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.