ವಿಜ್ಞಾನದಿಂದ ಮೂಢನಂಬಿಕೆ ದೂರ
Team Udayavani, Oct 12, 2020, 4:47 PM IST
ಯಾದಗಿರಿ: ವಿಜ್ಞಾನದಿಂದ ಮೂಢನಂಬಿಕೆ, ಕಂದಾಚಾರ ದೂರವಾಗಲಿದೆ. ಡಿಜಿಟಲ್ ಯುಗಕ್ಕೆ ಕಾಲಿಡುತ್ತಿರುವ ಸನ್ನಿವೇಶದಲ್ಲಿ ಭಾನಾಮತಿಯಂತಹ ಪ್ರಕರಣಗಳು ಜೀವಂತವಾಗಿರುವುದು ವಿಷಾದನೀಯ ಸಂಗತಿ ಎಂದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಗಿರೀಶ ಕಡ್ಲೇವಾಡ ಹೇಳಿದರು.
ಯಾದಗಿರಿ ನಗರದ ಹೊರವಲಯದಲ್ಲಿರುವ ಎಪಿಎಫ್ದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಅಜೀಂ ಪ್ರೇಮಜಿಫೌಂಡೇಶನ್ ಇವರ ಸಹಯೋಗದಲ್ಲಿ ಕಲಬುರಗಿ ವಿಭಾಗದ ಬಾಲ ವಿಜ್ಞಾನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ನಾಲ್ಕು ದಶಕಗಳಿಂದ ಬಾಲ ವಿಜ್ಞಾನ ಪತ್ರಿಕೆಯ ಕೊಡುಗೆ ಗುರುತರವಾಗಿದೆ. ವೈಜ್ಞಾನಿಕ ಚಿಂತನೆಗಳನ್ನು ಕನ್ನಡ ಭಾಷೆಯ ಮೂಲಕ ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಪತ್ರಿಕೆ ಮಾಡುತ್ತಿದೆ. ಇದನ್ನು ಡಿಜಿಟಲೀಕರಣ ಮಾಡಲಾಗುತ್ತಿದ್ದು, ವೆಬ್ಸೈಟ್ ನಲ್ಲಿ ಹಳೆಯ ಪತ್ರಿಕೆಗಳನ್ನು ಪಡೆದುಕೊಳ್ಳಬಹುದು ಎಂದರು.
ಕಾರ್ಯಕಾರಿ ಸಮಿತಿ ಸದಸ್ಯ ಮಹಾರುದ್ರಪ್ಪ ಅಣದೂರು ಅಧ್ಯಕ್ಷತೆ ವಹಿಸಿದ್ದರು. ಡಾ. ಕುಂಟೆಪ್ಪ ಗೌರಿಪುರ, ಪ್ರಕಾಶ ಲಕ್ಕಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮನಗೌಡ ಪಾಟೀಲ ಕ್ಯಾತನಾಳ, ಎಪಿಎಪ್ ಸಂಸ್ಥೆ ಸಂಯೋಜಕಿ ಅಕ್ಕಮಹಾದೇವಿ, ಬಾಲವಿಜ್ಞಾನೋತ್ಸವ ಸಂಯೋಜಕ ಸೂರ್ಯಪ್ರಕಾಶ ಘನಾತೆ,ರಾಜಶೇಖರ ಪಾಟೀಲ, ಶ್ರೀಶೈಲ ಎನ್. ಪೂಜಾರಿ,ಅಶೋಕ ಕೆಂಭಾವಿ, ಶರಣಗೌಡ, ಮುಖ್ಯಗುರು ಲಿಂಗಾರೆಡ್ಡಿ ನಾಯಕ ಇತರರಿದ್ದರು. ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ, ರಾಮಕೃಷ್ಣ ಕಟ್ಕಾವಲಿ ಮತ್ತು ಸಾಯಪ್ಪ ಚಂಡ್ರಿಕಿ ವಿವಿಧ ಗೋಷ್ಠಿಗಳನ್ನು ನಿರೂಪಿಸಿದರು.
ಕನ್ನಡದಲ್ಲಿ ವಿಜ್ಞಾನ ಸಂವಹನ ಕುರಿತು ಚಿಟಗುಪ್ಪ ಜ್ಞಾನಾಮೃತ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶೈಲಜಾ ಜಿ.ಹುಡಗೆ ಉಪನ್ಯಾಸ ನೀಡಿದರು. ಇದಕ್ಕೂ ಮುಂಚೆ ಬಾಲ ವಿಜ್ಞಾನ ಪತ್ರಿಕೆಯ ಲೇಖಕರಾದ ಅಮರೇಗೌಡ ಲಿಂಗಸುಗೂರ, ಸಂತೋಷಕುಮಾರ ಎಸ್.ಪಿ. ಆಳಂದ, ಶೈಲಜಾ ಗುಂಡಪ್ಪ ಬೀದರ ಅವರನ್ನು ಸನ್ಮಾನಿಸಿ ಅಭಿನಂದನಾ ಪತ್ರಗಳನ್ನು ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.