![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 14, 2020, 12:11 PM IST
ಗಂಗಾವತಿ: ಇತಿಹಾಸ ಪ್ರಸಿದ್ದ ಪ್ರವಾಸಿತಾಣ ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇಗುಲದಲ್ಲಿ ಹೈಕೋರ್ಟ್ ಸೂಚನೆಯಂತೆ ಜಿಲ್ಲಾಡಳಿತ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಅವರಿಗೆ ಪೂಜೆ ಧಾರ್ಮಿಕ ಕಾರ್ಯ ಮಾಡಲು ಅವಕಾಶ ಕಲ್ಪಿಸಿದ್ದು ಬುಧವಾರ ಬೆಳಗಿನ ಜಾವ ಯಾವುದೇ ಆತಂಕವಿಲ್ಲದೇ ಪೂಜಾ ಕಾರ್ಯವನ್ನು ನೆರವೇರಿಸಲಾಯಿತು. ಮಂಗಳವಾರ ಸಂಜೆ ನಾಲ್ವರು ಶಿಷ್ಯರ ಜತೆ ಅಂಜನಾದ್ರಿ ಹತ್ತಿದ ಬಾಬಾ ಇವರಿಗೆ ದೇಗುಲದ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಮೊದಲು ವಾಸವಾಗಿದ್ದ ಕೋಣೆಯಲ್ಲಿ ಬಾಬಾ ಅವರು ಉಳಿದುಕೊಳ್ಳಲು ವ್ಯವಸ್ಥೆ ಮಾಡಿದರು.
ದೇಗುಲದ ಮಾಲೀಕತ್ವ ಮತ್ತು ಪೂಜೆ ವಿಷಯವಾಗಿ ಆನೆಗೊಂದಿ ರಾಜವಂಶಸ್ಥರ ನೇತೃತ್ವದ ಟ್ರಸ್ಟ್ ಹಾಗೂ ವಿದ್ಯಾದಾಸ ಬಾಬಾ ಇವರ ನಡುವೆ ವಿವಾದವುಂಟಾಗಿ ಅರ್ಚಕ ಸ್ಥಾನದಿಂದ ವಿದ್ಯಾದಾಸ ಬಾಬಾ ಅವರನ್ನು ಟ್ರಸ್ಟ್ ನವರು ಪದಚ್ಯುತಿಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಗಂಗಾವತಿ ಜೆಎಂಎಫ್ ಸಿ ನ್ಯಾಯಾಲದಿಂದ ಬಾಬಾ ತಡೆಯಾಜ್ಞೆ ತಂದು ಅರ್ಚಕ ಹಾಗೂ ದೇಗುಲದ ಎಲ್ಲ ಕಾರ್ಯಗಳನ್ನು ಬಾಬಾ ಮುಂದುವರಿಸಿದರು. ಈ ಮಧ್ಯೆ ಬಾಬಾ ಬೆಂಬಲಿಗರು ಮತ್ತು ಆನೆಗೊಂದಿ ರಾಜಮನೆತನದವರ ಟ್ರಸ್ಟ್ ಪದಾಧಿಕಾರಿಗಳ ಮಧ್ಯೆ ಸಂಷರ್ಘವುಂಟಾಯಿತು.
ಇದನ್ನೂ ಓದಿ:ವಿಡಿಯೋ ವೈರಲ್: ಆನೆ ಮೇಲೆ ಯೋಗ: ದಿಢೀರ್ ಕೆಳಗೆ ಬಿದ್ದ ಬಾಬಾರಾಮ್ ದೇವ್
ಅಂಜನಾದ್ರಿ ದೇಗುಲದ ಬಳಿ ನಡೆದಿದೆ ಎನ್ನಲಾಗುವ ಲೈಂಗಿಕ ಪ್ರಕರಣಕ್ಕಾಗಿ ಬಾಬಾ ಅವರನ್ನು ಟ್ರಸ್ಟ್ ನವರ ಒತ್ತಾಯ ಮೇರೆ ಬೆಟ್ಟದಿಂದ ಪೊಲೀಸರ ನೇತೃತ್ವದಲ್ಲಿ ಕೆಳಗೆ ಇಳಿಸಿ ಕಳುಹಿಸಲಾಯಿತು. ಈ ಮಧ್ಯೆ ಪೊಲೀಸ್ ಮತ್ತು ಕಂದಾಯ ಇಲಾಖೆ ಶಿಫಾರಸ್ಸಿನಂತೆ ಜಿಲ್ಲಾಡಳಿತ ದೇಗುಲವನ್ನು ಕಳೆದ ಎರಡು ವರ್ಷಗಳ ಸರಕಾರದ ವಶಕ್ಕೆ ಪಡೆದಿತ್ತು. ಅರ್ಚಕ ವಿದ್ಯಾದಾಸ ಹೈಕೋರ್ಟ್ ಮೊರೆ ಹೋಗಿ ಪೂಜೆ ಮಾಡಲು ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಪೂಜೆ ಅವಕಾಶ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು. ಇದೀಗ ಬಾಬಾ ಗೆ ಪೂಜೆ ಮಾಡಲು ಅವಕಾಶ ನೀಡಲಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.