ಜಿಡಿಪಿಯಲ್ಲಿ ಭಾರತವನ್ನು ಹಿಂದಿಕ್ಕಿದ ಬಾಂಗ್ಲಾದೇಶ ! ಐಎಂಎಫ್ ಹೇಳಿದ್ದೇನು?


Team Udayavani, Oct 14, 2020, 8:24 PM IST

GDP

ಮಣಿಪಾಲ: ಹಿಂದುಳಿದ ರಾಷ್ಟ್ರಗಳ ಸಾಲಿನಲ್ಲಿ ಗುರುತಿಸಿಕೊಳ್ಳುವ ಬಾಂಗ್ಲಾದೇಶದ ಜಿಡಿಪಿ ಈ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್ ವರೆಗೆ) ಭಾರತದ ಕ್ಯಾಪಿಟಾ ಜಿಡಿಪಿಗಿಂತ ಹೆಚ್ಚಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಾಹಿತಿಯನ್ನು ಸ್ವತಃ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಈ ನೀಡಿದೆ. ಐಎಂಎಫ್ ಬಾಂಗ್ಲಾದೇಶದ ತಲಾ ಜಿಡಿಪಿ 1,888 ಡಾಲರ್‌ (ಸುಮಾರು 1,38,400 ರೂ.) ಆಗಿದ್ದರೆ, ಭಾರತದಲ್ಲಿ ಅದು 1,877 ಡಾಲರ್‌ (ಸುಮಾರು 1,37,594 ರೂ.) ಆಗಿರಬಹುದು ಎಂದು ಹೇಳಿದೆ.

2021ರ ವೇಳೆಗೆ ಭಾರತ ಇದರಲ್ಲಿ ಮುನ್ನಡೆ ಸಾಧಿಸಲಿದೆ ಎಂದು ಐಎಂಎಫ್ ಹೇಳಿದೆ. 2021ರಲ್ಲಿ ಭಾರತದಲ್ಲಿ ತಲಾ ಜಿಡಿಪಿ 1,48,190 ರೂ. ಆಗಿರಲಿದ್ದು, ಬಾಂಗ್ಲಾದೇಶದ ಜಿಡಿಪಿ 1,45,270 ರೂಪಾಯಿಗಳಾಗಿರಲಿದೆ. ಇದೀಗ ಭಾರತವು 1,037,21 ರೂಪಾಯಿಗಳನ್ನು ಹೊಂದಿದ್ದರೆ, ಬಾಂಗ್ಲಾದೇಶವು ತಲಾ ಜಿಡಿಪಿಯಲ್ಲಿ 1,37,824 ರೂಪಾಯಿಗಳನ್ನು ಹೊಂದಿದೆ. ಈ ಅಂಕಿ ಅಂಶವು ಒಂದು ಡಾಲರ್‌ಗೆ 73 ರೂಪಾಯಿಗಳನ್ನು ಆಧರಿಸಿದೆ.

ಮೊದಲ ತ್ರೈಮಾಸಿಕದ ಕೆಲವು ಬೆಳವಣಿಗೆಗಳು ಭಾರತದ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ ಎಂದು ಐಎಂಎಫ್ ಹೇಳಿದೆ. ಮುಂದಿನ ದಿನಗಳಲ್ಲಿ ಅವುಗಳು ಕಡಿಮೆಯಾಗುವ ಯಾವುದೇ ಸಾಧ್ಯತೆ ಕಾಣುತ್ತಿಲ್ಲ ಎಂದು ಹೇಳಿದೆ. ಭಾರತದ ಆರ್ಥಿಕತೆಗೆ ಮುಂದಿನ ಹಾದಿ ಸಾಕಷ್ಟು ಸವಾಲಿನದ್ದಾಗಿದೆ. ಐಎಂಎಫ್ ವರದಿಯ ಪ್ರಕಾರ ದೇಶದ ಸ್ಥಿತಿ ಬಾಂಗ್ಲಾದೇಶಕ್ಕಿಂತ ಕೆಟ್ಟದಾಗಿದ್ದು, ತಲಾ ಜಿಡಿಪಿಯೂ ಬಾಂಗ್ಲಾದೇಶಕ್ಕಿಂತ ಕೆಳಗೆ ಇದೆ ಎಂದಿದೆ. ಇದಕ್ಕೆ ಲಾಕ್‌ಡೌನ್‌ ನೇರ ಕಾರಣ ಎಂದು ಹೇಳಲಾಗಿದೆ.

ಈ ವರ್ಷ ಜಿಡಿಪಿ 10% ಕುಸಿದಿದೆ
ಈ ವರ್ಷ ಭಾರತದ ತಲಾ ಜಿಡಿಪಿ 10% ರಷ್ಟು ಕುಸಿದಿದೆ. ಆದರೆ ಬಾಂಗ್ಲಾದೇಶದ ತಲಾ ಜಿಡಿಪಿಯು ಶೇ. 4ರ ಬೆಳವಣಿಗೆಯನ್ನು ಕಂಡಿದೆ. ತಲಾ ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) ವಿಷಯದಲ್ಲಿ ಕೆಲವು ವರ್ಷಗಳ ಹಿಂದಿನ ವರೆಗೂ ಭಾರತ ಬಾಂಗ್ಲಾದೇಶಕ್ಕಿಂತಲೂ ಮೇಲಿತ್ತು. ಆದರೆ ದೇಶದಲ್ಲಿ ತ್ವರಿತ ರಫ್ತಿನಿಂದಾಗಿ, ಅದರ ಬೆಳವಣಿಗೆ ಗಮನಾರ್ಹವಾಗಿ ಬದಲಾಗಿದೆ. ಅಲ್ಲದೆ ಭಾರತದ ಉಳಿತಾಯ ಮತ್ತು ಹೂಡಿಕೆ ಕಡಿಮೆಯಾಗಿದೆ.

ಪಾಕಿಸ್ಥಾನ ಮತ್ತು ನೇಪಾಳಕ್ಕಿಂತ ಭಾರತ ಮುಂದೆ
ಐಎಂಎಫ್ ನ ಅಂದಾಜು ಲೆಕ್ಕಾಚಾರಗಳ ಪ್ರಕಾರ ಭಾರತವು ಪಾಕಿಸ್ಥಾನ ಮತ್ತು ನೇಪಾಳಕ್ಕಿಂತ ಮುಂದೆ ಇದೆ. ಆದರೆ ಭೂತಾನ್, ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ದಕ್ಷಿಣ ಏಷ್ಯಾ ಭಾರತಕ್ಕಿಂತ ಮುಂದೆ ಇದೆ. ಭಾರತದ ಸಾಧನೆ ಕುಸಿಯಬಹುದು ಎಂದಿರುವ ವರದಿ ನೇಪಾಳ ಮತ್ತು ಭೂತಾನ್ ಆರ್ಥಿಕತೆಗಳು ಈ ವರ್ಷ ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಿದೆ. 2021ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿಯಲ್ಲಿ 9.6% ಕುಸಿತ ಕಾಣಲಿದೆ ಎಂದು ವಿಶ್ವ ಬ್ಯಾಂಕ್ ಮುನ್ಸೂಚನೆ ನೀಡಿದೆ. ಸ್ಪೇನ್ ಮತ್ತು ಇಟಲಿಯ ಅನಂತರ ಭಾರತದ ಜಿಡಿಪಿಯಲ್ಲಿ 10.3% ರಷ್ಟು ಇಳಿಕೆ ಕಂಡುಬಂದಿದೆ.

ಅಭಿವೃದ್ಧಿಶೀಲ ರಾಷ್ಟ್ರಗಳು ಮತ್ತು ಬೆಳವಣಿಗೆ ಕಾಣುತ್ತಿರುವ ಆರ್ಥಿಕತೆಗಳ ನಡುವಿನ ದೊಡ್ಡ ಕುಸಿತವಾಗಲಿದೆ ಎಂದು ಐಎಂಎಫ್ ವರದಿಯಲ್ಲಿ ತಿಳಿಸಿದೆ. ಚೀನ 2020 ರಲ್ಲಿ ಶೇ. 5.7ರಷ್ಟು ಕೊರತೆ ಕಾಣಲಿದೆ ಎಂದಿದೆ. ಭಾರತ ಮತ್ತು ಇಂಡೋನೇಷ್ಯಾದಂತಹ ದೇಶಗಳಲ್ಲಿ ಮುಂಬರುವ ದಿನಗಳಲ್ಲಿ ವೈರಸ್ ಹರಡುವ ಪ್ರಮಾಣ ಹೆಚ್ಚಾಗಲಿದ್ದು, ಇದು ಆರ್ಥಿಕ ಚೇತರಿಕೆಗೆ ಅಪಾಯ ತಂದೊಡ್ಡಲಿದೆ ಎಂದು ಹೇಳಿದೆ. ಈ ದೇಶಗಳ ಆರ್ಥಿಕತೆಯು ಪ್ರವಾಸೋದ್ಯಮ ಮತ್ತು ರಫ್ತನ್ನು ಅವಲಂಬಿಸಿದೆ.

1990-91ರ ಬಿಕ್ಕಟ್ಟಿನ ಬಳಿಕ 2020ರಲ್ಲಿ ಭಾರತೀಯ ಆರ್ಥಿಕತೆಯು ಹೆಚ್ಚು ಪರಿಣಾಮ ಬೀರಬಹುದು ಎಂದು ವರದಿ ಹೇಳಿದೆ. ಶ್ರೀಲಂಕಾದ ಬಳಿಕ ಭಾರತವು ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಕೆಟ್ಟ ಆರ್ಥಿಕತೆಯಾಗುವ ಸಾಧ್ಯತೆಯಿದೆ ಎಂದು ಅದು ವರದಿ ಕಳವಳ ವ್ಯಕ್ತಪಡಿಸಿದೆ. ಆದಾಗ್ಯೂ 2021ರಲ್ಲಿ ಭಾರತದಲ್ಲಿ ಚೇತರಿಕೆ ಕಾಣಲಿದೆ ಎಂದು ಐಎಂಎಫ್ ವರದಿ ತಿಳಿಸಿದೆ.

 

 

 

 

 

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.