ಮುಂಬೈ ಶೇರು ಮಾರುಕಟ್ಟೆ: ಒಂದು ಸಾವಿರ ಅಂಕ ಮಹಾಕುಸಿತ; ಹೂಡಿಕೆದಾರರಿಗೆ 2.7 ಲಕ್ಷ ಕೋಟಿ ನಷ್ಟ

ಒಂದು ಸಾವಿರ ಅಂಕಗಳ ಕುಸಿತದಿಂದ ಕಳೆದ ಹತ್ತು ದಿನಗಳಲ್ಲಿ ಮಾಡಿಕೊಂಡಿದ್ದ ಲಾಭ ಕೊಚ್ಚಿಕೊಂಡು ಹೋದಂತಾಗಿದೆ.

Team Udayavani, Oct 15, 2020, 4:50 PM IST

ಮುಂಬೈ ಶೇರು ಮಾರುಕಟ್ಟೆ: ಒಂದು ಸಾವಿರ ಅಂಕ ಮಹಾಕುಸಿತ; ಹೂಡಿಕೆದಾರರಿಗೆ 2.7 ಲಕ್ಷ ಕೋಟಿ ನಷ್ಟ

ಮುಂಬೈ: ಐಟಿ ಮತ್ತು ಫೈನಾಶ್ಶಿಯಲ್ ಶೇರು ಮಾರಾಟ ತೀವ್ರ ಕಡಿಮೆ ವಹಿವಾಟು ನಡೆಸಿದ ಪರಿಣಾಮ ಗುರುವಾರ ಮುಂಬೈ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 1,0,66.33 ಅಂಕಗಳಷ್ಟು ಮಹಾಕುಸಿತ ಕಂಡಿದ್ದು, 39, 728.41 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 290.70ಅಂಕಗಳಷ್ಟು ಕುಸಿತ ಕಂಡಿದ್ದು, 11,680.35 ಅಂಕಗಳ ವಹಿವಾಟಿನೊಂದಿಗೆ ಮುಕ್ತಾಯ ಕಂಡಿದೆ. ಒಂದು ಸಾವಿರ ಅಂಕಗಳ ಕುಸಿತದಿಂದ ಕಳೆದ ಹತ್ತು ದಿನಗಳಲ್ಲಿ ಮಾಡಿಕೊಂಡಿದ್ದ ಲಾಭ ಕೊಚ್ಚಿಕೊಂಡು ಹೋದಂತಾಗಿದೆ. ಒಂದೇ ದಿನದಲ್ಲಿ ಹೂಡಿಕೆದಾರರಿಗೆ 2.7 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ವರದಿ ತಿಳಿಸಿದೆ.

ಸೆನ್ಸೆಕ್ಸ್ ಕುಸಿತಕ್ಕೆ ಮೂರು ಕಾರಣ:

ಸದ್ಯದ ಸ್ಥಿತಿಯಲ್ಲಿ ಅಮೆರಿಕ ವಿಶ್ವ ಆರ್ಥಿಕ ನೀತಿಯನ್ನು ಮುನ್ನಡೆಸುವ ಮುಂಚೂಣಿ ಸ್ಥಾನದಲ್ಲಿದೆ. ಅಲ್ಲದೇ ಅಮೆರಿಕದ ಆರ್ಥಿಕತೆ ಚೇತರಿಕೆಗೆ ನೆರವು ನೀಡಲು ಅಮೆರಿಕ ವಿತ್ತ ಸಚಿವಾಲಯ ಪ್ಯಾಕೇಜ್ ಘೋಷಣೆಯ ನಿರೀಕ್ಷೆಯಲ್ಲಿದೆ. ಆದರೆ ಅಮೆರಿಕದ ಆಂತರಿಕ ರಾಜಕೀಯದಿಂದಾಗಿ ಪ್ಯಾಕೇಜ್ ಘೋಷಣೆ ವಿಳಂಬವಾಗಿದೆ.

ನವೆಂಬರ್ 3ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಡೊನಾಲ್ಡ್ ಟ್ರಂಪ್ ಅವರ ಮರು ಆಯ್ಕೆ ಅನಿಶ್ಚಿತತೆಯಲ್ಲಿದೆ. ಹೀಗಾಗಿ ರಾಜಕೀಯ ಕಾರಣದಿಂದಾಗಿ ಆರ್ಥಿಕ ಉತ್ತೇಜನದ ಪ್ಯಾಕೇಜ್ ಘೋಷಣೆ ವಿಳಂಬವಾಗುತ್ತಿರುವುದಾಗಿ ವಿಶ್ಲೇಷಿಸಲಾಗಿದೆ. ಇದು ವಿಶ್ವ ಆರ್ಥಿಕತೆಗೆ ಕೆಟ್ಟ ವಿಷಯವಾಗಿದ್ದು, ಶೇರು ಮಾರುಕಟ್ಟೆ ವಹಿವಾಟಿನ ಮೇಲೆ ಪರಿಣಾಮ ಬೀರಿದೆ.

ಚೀನಾ ಸಂಬಂಧ

ಅಮೆರಿಕದ ರೀತಿಯಲ್ಲಿ ಚೀನಾದ ಜಾಗತಿಕ ವ್ಯವಹಾರದ ಮನಸ್ಥಿತಿ ಕೂಡಾ ಮುಖ್ಯವಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಅಮೆರಿಕ, ಭಾರತ ಮತ್ತು ಇತರ ಏಷ್ಯಾ ಪೆಸಿಫಿಕ್ ದೇಶಗಳು ನಿರಂತರವಾಗಿ ಚೀನಾ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಕೂಡಾ ಒಂದು ಕಾರಣವಾಗಿದೆ. ಚೀನಾ, ಅಮೆರಿಕ ನಡುವಿನ ಸಂಘರ್ಷ ಕೂಡಾ ಮುಂದುವರಿದಿರುವುದು ಶೇರುಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.

ಕೋವಿಡ್ ಪುನರಾಗಮನ ಭೀತಿ:

ಯುರೋಪ್ ಸೇರಿದಂತೆ ಹಲವು ದೇಶಗಳಲ್ಲಿ ಮತ್ತೊಂದು ಸುತ್ತಿನ ಕೋವಿಡ್ ಸೋಂಕು ಹಬ್ಬತೊಡಗಿದೆ. ಲಾಕ್ ಡೌನ್ ನಿಂದ ಮತ್ತೆ ಸಹಜಸ್ಥಿತಿಗೆ ಬರುತ್ತಿರುವಂತೆಯೇ ಕೋವಿಡ್ 2ನೇ ಅಲೆಯ ಹೊಡೆತ ಕೂಡಾ ಶೇರುಪೇಟೆ ಮೇಲೆ ಪರಿಣಾಮ ಬೀರಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.