![Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ](https://www.udayavani.com/wp-content/uploads/2024/12/ban-2-415x277.jpg)
ಸರಕಾರಕ್ಕೆ ಬೇಡವಾದ ಗ್ರಾಮ ಪಂಚಾಯತ್ ಚುನಾವಣೆ
ಚುನಾವಣೆ ಮುಂದೂಡಲು ಮತ್ತೆ ಆಯೋಗಕ್ಕೆ ಮೊರೆ ಸಿಗದ ಪೂರಕ ಸ್ಪಂದನೆ
Team Udayavani, Oct 17, 2020, 5:13 AM IST
![ಸರಕಾರಕ್ಕೆ ಬೇಡವಾದ ಗ್ರಾಮ ಪಂಚಾಯತ್ ಚುನಾವಣೆ](https://www.udayavani.com/wp-content/uploads/2020/10/Udupi-Vote-1-620x349.jpg)
ಸಾಂದರ್ಭಿಕ ಚಿತ್ರ
ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸಿದ್ಧ ಎನ್ನುತ್ತಿದ್ದ ಸರಕಾರ ಈಗ ವರಸೆ ಬದಲಾ ಯಿಸಿದ್ದು, ಚುನಾವಣೆ ಮುಂದೂಡುವಂತೆ ಮತ್ತೂಮ್ಮೆ ಆಯೋಗದ ಮೊರೆ ಹೋಗಿದೆ.
ಆಯೋಗವು ಚುನಾವಣೆ ನಡೆಸಲು ಎಲ್ಲ ರೀತಿಯಲ್ಲೂ ಸಜ್ಜಾಗಿರುವ ಹಂತ ದಲ್ಲಿ ಮುಂದೂಡುವುದಕ್ಕೆ ಸರಕಾರ ಪಟ್ಟು ಹಿಡಿದಿದೆ. ಆದರೆ, ಆಯೋಗವು ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ಗೆ ಸ್ಪಷ್ಟಪಡಿಸಿದ್ದು, ಸರಕಾರ ಇಕ್ಕಟ್ಟಿಗೆ ಸಿಲುಕಿದೆ.
ಸರಕಾರದ ಜತೆಗೆ ಮೂರು ರಾಜಕೀಯ ಪಕ್ಷಗಳು ಕೂಡ ಸದ್ಯಕ್ಕೆ ಚುನಾವಣೆ ಬೇಡ ಎಂದು ಆಯೋಗಕ್ಕೆ ಪತ್ರ ಬರೆದಿದೆ. ಒಂದೊಮ್ಮೆ ಆಯೋಗ ತನ್ನ ಪಟ್ಟು ಸಡಿಲಿಸದಿದ್ದರೆ ಸರಕಾರ ಚುನಾವಣೆ ನಡೆಸಲೇಬೇಕಾದ ಅನಿವಾರ್ಯತೆಗೆ ಸಿಲುಕಬಹುದು. ಗ್ರಾಮೀಣ ಭಾಗದ ಜನರು ಹಾಗೂ ಬಹುತೇಕ ಜನಪ್ರತಿನಿಧಿಗಳು ಚುನಾವಣೆ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸರಕಾರದ ನಿಲುವಿಗೆ ವಿರೋಧವೂ ಕೇಳಿ ಬರುತ್ತಿದೆ.
ಆಯೋಗಕ್ಕೆ ಪತ್ರ
ಈ ಹಿಂದೆಯೂ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆಗೆ ಆಯೋಗಕ್ಕೆ ಪತ್ರ ಬರೆದಿದ್ದ ಸರಕಾರ ಶುಕ್ರವಾರ ಮತ್ತೂಂದು ಪತ್ರ ಬರೆದಿದೆ. ಗ್ರಾ.ಪಂ.ಗಳಿಗೆ ಶೀಘ್ರ ಚುನಾವಣೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡು ವಂತೆ ಕೋರಿ ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಎ.ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಇದಕ್ಕೆ ಮೊದಲು, ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ ಅವರು ಲಿಖೀತ ಹೇಳಿಕೆ ಸಲ್ಲಿಸಿ, ಕೊರೊನಾ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ಕೋರಿ ಸರಕಾರ ಅ.3ರಂದು ಬರೆದಿದ್ದ ಪತ್ರದ ಕುರಿತು ಸಂಬಂಧಿಸಿದ ಎಲ್ಲ ಅಂಶಗಳ ಬಗ್ಗೆ ಚರ್ಚಿಸಿದ ಬಳಿಕ ಚುನಾವಣೆ ನಡೆಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ನ್ಯಾಯಪೀಠವು ವಿಚಾರಣೆಯನ್ನು ಅ.21ಕ್ಕೆ ಮುಂದೂಡಿತು.
ಸರಕಾರದ ಅಭಿಪ್ರಾಯ
ಸರಕಾರದ ಪರ ವಕೀಲರು ಚುನಾವಣೆಗಳನ್ನು ಮುಂದೂಡುವಂತೆ ಮನವಿ ಮಾಡಿದ್ದು, ಸರಕಾರ ಗುರುವಾರ ಮತ್ತೂಂದು ಪತ್ರ ಬರೆದಿರುವ ವಿಷಯ ಪ್ರಸ್ತಾವಿಸಿದರು. ಅಲ್ಲದೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳೂ ಇದೇ ವಿಚಾರವಾಗಿ ಆಯೋಗಕ್ಕೆ ಪತ್ರ ಬರೆದಿವೆ ಎಂದು ನ್ಯಾಯಾಲಯದ ಗಮನ ಸೆಳೆದರು.
ಆಯೋಗದ ಅಭಿಪ್ರಾಯ
ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಂಭಾವ್ಯ ವೇಳಾಪಟ್ಟಿಯನ್ನೂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಅದನ್ನು ಪರಿಗಣಿಸಬೇಕು ಎಂದು ಆಯೋಗದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
ಟಾಪ್ ನ್ಯೂಸ್
![Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ](https://www.udayavani.com/wp-content/uploads/2024/12/ban-2-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್](https://www.udayavani.com/wp-content/uploads/2024/12/hari-150x87.jpg)
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
![Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ](https://www.udayavani.com/wp-content/uploads/2024/12/SAMMELANA-SAMMANA-2-150x82.jpg)
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
![Yathanal](https://www.udayavani.com/wp-content/uploads/2024/12/Yathanal-150x90.jpg)
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
![BY-Vijayendra](https://www.udayavani.com/wp-content/uploads/2024/12/BY-Vijayendra-1-150x90.jpg)
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
![Baduta-Mandya](https://www.udayavani.com/wp-content/uploads/2024/12/Baduta-Mandya-150x90.jpg)
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.