ಎಪಿಎಂಸಿ ಆದಾಯ ಭಾರೀ ಕುಸಿತ

ಎಲ್ಲವೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಹಿಮೆ

Team Udayavani, Oct 18, 2020, 3:55 PM IST

Kopala-tdy-2

ಕೊಪ್ಪಳ: ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಹಲವು ಮಹತ್ವದ ಬದಲಾವಣೆಗಳನ್ನು ತಂದಿದೆ. ಇದರಿಂದ ಎಪಿಎಂಸಿ ಆದಾಯಕ್ಕೆ ದೊಡ್ಡ ಹೊಡೆತ ಬಿದ್ದಿದ್ದು, ಮಾರುಕಟ್ಟೆ ಶುಲ್ಕ ಸಂಗ್ರಹದಲ್ಲೂಭಾರಿ ಇಳಿಮುಖವಾಗಿದೆ. ಹೀಗಾದರೆ ಎಪಿಎಂಸಿ ಆಡಳಿತನಡೆಸೋದೇ ಕಷ್ಟವೆಂದು ತಲೆ ಮೇಲೆ ಕೈ ಹೊತ್ತು ಕುಳಿತಿದೆ ಆಡಳಿತ ವರ್ಗ.

ಹೌದು.. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳುಸುಗ್ರೀವಾಜ್ಞೆ ಮೂಲಕ ಎಪಿಎಂಸಿ ಸೇರಿದಂತೆ ಹಲವುಕಾಯ್ದೆಗಳ ತಿದ್ದುಪಡಿ ಮಾಡಿವೆ. ಇದಾದ ಎರಡೇತಿಂಗಳಲ್ಲಿ ಎಪಿಎಂಸಿಗಳಿಗೆ ಆದಾಯ ಸಂಗ್ರಹದಲ್ಲಿಭಾರಿ ಇಳಿಮುಖವಾಗಿದೆ. ಹಾಗಾಗಿ ಎಪಿಎಂಸಿಗಳುಚಡಪಡಿಸುವಂತಾಗಿದೆ.ರಾಜ್ಯ ಸರ್ಕಾರವು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ರಾಜ್ಯದ ಎಲ್ಲಎಪಿಎಂಸಿಗಳಲ್ಲಿ ಮಾರುಕಟ್ಟೆ ಶುಲ್ಕವನ್ನು 1.50 ರೂ. ಸಂಗ್ರಹ ಮಾಡಲಾಗುತ್ತಿತ್ತು. ಆದರೆ ಸರ್ಕಾರ ಆಗಸ್ಟ್‌ ತಿಂಗಳಲ್ಲಿಯೇ ಕಾಯ್ದೆಗೆ ತಿದ್ದುಪಡಿ ತರಲುಸುಗ್ರೀವಾಜ್ಞೆ ಜಾರಿ ಮಾಡಿದ್ದರಿಂದ ಅಂದಿನಿಂದಲೇ ಮಾರುಕಟ್ಟೆಯ ಶುಲ್ಕ 1.50 ರೂ. ಬದಲು, ಕೇವಲ 35 ಪೈಸೆ ಸಂಗ್ರಹಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಇದರಿಂದಾಗಿ ಎಪಿಎಂಸಿಯಲ್ಲಿ ಆದಾಯ ಕುಸಿತವಾಗಿದೆ.

ಉದಾಹರಣೆಗೆ ಕಾಯ್ದೆ ತಿದ್ದುಪಡಿಗೂ ಮುನ್ನಕೊಪ್ಪಳ ಎಪಿಎಂಸಿಯು ವರ್ತಕರು, ವ್ಯಾಪಾರಸ್ಥರು, ಟ್ರೇಡಿಂಗ್‌ ಕಂಪನಿಗಳಲ್ಲಿನಡೆಸುವ ಉತ್ಪನ್ನಗಳವಹಿವಾಟಿನ ಮೇಲೆ 1.50 ರೂ. ಮಾರುಕಟ್ಟೆ ಶುಲ್ಕ ಸಂಗ್ರಹ ಮಾಡುತ್ತಿದ್ದವು. ಹಾಗಾಗಿ ವಾರ್ಷಿಕವಾಗಿ 3 ರಿಂದ 4 ಕೋಟಿ ರೂ. ಶುಲ್ಕ ಸಂಗ್ರಹವಾಗುತ್ತಿತ್ತು. ಅದೇ ಹಣದಲ್ಲಿಯೇ ಸರ್ಕಾರಕ್ಕೆ ಆವರ್ತ ನಿಧಿ , ಎಪಿಎಂಸಿ ಬೋರ್ಡ್‌, ಕೃಷಿ ವಿವಿ, ನೌಕರರ ವೇತನದ ವೆಚ್ಚವು ಸೇರಿದಂತೆ ಇತರೆ ವಿಭಾಗಕ್ಕೆ ಬಳಕೆ ಮಾಡಿಉಳಿಕೆ ಹಣವನ್ನು ರಾಜ್ಯ ಸರ್ಕಾರಕ್ಕೆ ಕೊಡುತ್ತಿತ್ತು. ಆದರೆ ಕಾಯ್ದೆಗೆ ಸುಗ್ರೀವಾಜ್ಞೆ ಜಾರಿ ಬಳಿಕ 35 ಪೈಸೆ ದರ ನಿಗದಿಯಾಗಿದ್ದರಿಂದ ಎಪಿಎಂಸಿ ಆದಾಯದಲ್ಲಿ ಮೂರುಪಟ್ಟು ಇಳಿಕೆಯಾಗಿದೆ.

ಕಳೆದ ವರ್ಷ ಕೊಪ್ಪಳ ಎಪಿಎಂಸಿಗೆ ಸರ್ಕಾರವು 4,09,00,000 ಆದಾಯ ಸಂಗ್ರಹದ ಗುರಿ ನಿಗದಿಪಡಿಸಿತ್ತು. ಎಪಿಎಂಸಿಯು 3,73,34,954 ರೂ. ಸಂಗ್ರಹಿಸಿತ್ತು. ಪ್ರಸಕ್ತ ವರ್ಷದ ಆಗಸ್ಟ್‌ನಿಂದ ಮಾರುಕಟ್ಟೆ ಶುಲ್ಕ 35 ಪೈಸೆ ಲೆಕ್ಕದಲ್ಲಿ 3,57,306 ರೂ., ಸೆಪ್ಟೆಂಬರ್‌ನಲ್ಲಿ 4,00,412 ಸಂಗ್ರಹಿಸಿದೆ. ಈ 35 ಪೈಸೆಯಲ್ಲಿ ಆವರ್ತ ನಿಧಿ ಗೆ ಶೇ.0.15, ಎಪಿಎಂಸಿ ಬೋರ್ಡ್‌ಗೆ ಶೇ.0.04, ಎಪಿಎಂಸಿ ಆಡಳಿತ ವೆಚ್ಚಕ್ಕೆ ಶೇ.0.14, ರೆಮ್ಸ್‌ ಸಂಸ್ಥೆಗೆ ಶೇ.0.02ಹಣವನ್ನು ಹಂಚಿಕೆ ಮಾಡಬೇಕು. ಅಂದರೆ ಎಪಿಎಂಸಿನಿರ್ವಹಣೆಗೆ ಪಕ್ಕಾ ಶೇ.0.14 ಅಷ್ಟು ಹಣವನ್ನು ಮಾತ್ರ ಬಳಕೆ ಮಾಡಿಕೊಳ್ಳಬೇಕು. ಇಷ್ಟು ಹಣದಲ್ಲಿ ಹೇಗೆತಾನೇ ಎಪಿಎಂಸಿ ಆಡಳಿತ ನಿರ್ವಹಣೆ ಮಾಡಲುಸಾಧ್ಯ ಎನ್ನುತ್ತಿದೆ ಆಡಳಿತ ವರ್ಗ. 35 ಪೈಸೆಯಂತೆ ಶುಲ್ಕ ಸಂಗ್ರಹಿಸಿದರೆ ವಾರ್ಷಿಕ 1 ಕೋಟಿ ರೂ. ಸಂಗ್ರಹವಾಗುವುದು ಅನುಮಾನ. ಒಟ್ಟಿನಲ್ಲಿ ಕಾಯ್ದೆ ತಿದ್ದುಪಡಿ ಬಳಿಕ ಆದಾಯದಲ್ಲಿ ಭಾರಿ ಇಳಿಕೆಯಾಗಿದೆ. ಇದರಿಂದ ಎಪಿಎಂಸಿ ನಿರ್ವಹಣೆ ವೆಚ್ಚಕ್ಕೆ ಎಪಿಎಂಸಿಗಳು ನರಳಾಡುವಂತಾಗಿದೆ. ಇನ್ನು ಎಪಿಎಂಸಿಯಲ್ಲಿ ಕಳೆದ 20 ವರ್ಷಗಳಿಂದ ಹೊರ ಗುತ್ತಿಗೆ ಕೆಲಸ ಮಾಡುತ್ತಿದ್ದ 20 ಜನರ ಪೈಕಿ 10 ಜನರನ್ನು ಕೆಲಸದಿಂದ ತೆಗೆಯಲಾಗಿದೆ ಎಂದೆನ್ನುತ್ತಿದೆ ಎಪಿಎಂಸಿ ಆಡಳಿತ ಮಂಡಳಿ.

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಬಳಿಕ ಎಲ್ಲ ಎಪಿಎಂಸಿಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ. ಇದರಿಂದ ನಮ್ಮ ಆದಾಯಕ್ಕೆ ಕುತ್ತು ಬಂದಿದೆ. ಮಾರುಕಟ್ಟೆ ಶುಲ್ಕ 1.50 ರೂ. ಬದಲು, 35 ಪೈಸೆ ಸಂಗ್ರಹಿಸುವಂತೆ ಸರ್ಕಾರ ಆದೇಶ ಮಾಡಿದೆ. ಇದರಿಂದ ನಾವು ಆಡಳಿತ ನಿರ್ವಹಣೆ ಮಾಡುವುದೇ ಕಷ್ಟವಾಗುತ್ತಿದೆ. ಆರ್ಥಿಕ ತೊಂದರೆಯಿಂದ ಕೆಲಸಗಾರರನ್ನು ತೆಗೆದಿದ್ದೇವೆ. -ನಾಗರಾಜ ಚಳ್ಳೂಳ್ಳಿ, ಕೊಪ್ಪಳ ಎಪಿಎಂಸಿ ಅಧ್ಯಕ್ಷ

 

-ದತ್ತು ಕಮ್ಮಾರ

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.