![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 19, 2020, 3:27 PM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆ ಆರಂಭವಾದರೂ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೆ ಭಣಗುಟ್ಟಿದವು.
ದಸರಾ ಸಂದರ್ಭ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿ ಕೋವಿಡ್ ಸೋಂಕು ಸ್ಫೋಟಿಸುತ್ತದೆ ಎಂದು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಮೈಸೂರು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳ ಮೇಲೆನಿರ್ಬಂಧ ವಿಧಿಸಿತ್ತು. ಆದರೆ ಮುಖ್ಯಮಂತ್ರಿ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ತೆರವುಗೊಳಿಸಲು ಆದೇಶಿದ್ದರು. ನಂತರ ಅ.18 ಭಾನುವಾರದಿಂದ ನಗರದ ಚಾಮುಂಡಿ ಬೆಟ್ಟ, ಮೃಗಾಲಯ, ರೈಲ್ವೆ ಮ್ಯೂಸಿಯಂ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ನಿರ್ಬಂಧತೆರವಾಗಿದ್ದರೂ ನಿರೀಕ್ಷಿತ ಮಟ್ಟದ ಪ್ರವಾಸಿಗರು ಕಾಣಿಸಲಿಲ್ಲ.
ಕೋವಿಡ್ ಲಾಕ್ಡೌನ್ ನಂತರ ಚಾಮುಂಡಿಬೆಟ್ಟಕ್ಕೆ ಪ್ರತಿ ಭಾನುವಾರ, ಶುಕ್ರವಾರ ಹಾಗೂ ಸೋಮವಾರ ಸಾರ್ವಜನಿಕರು, ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಬಳಿಕ ದಸರಾ ಅಂಗವಾಗಿ ಬೆಟ್ಟಕ್ಕೆ ಸಂಪೂರ್ಣವಾಗಿ ನಿರ್ಬಂಧ ವಿಧಿಸಲಾಗಿತ್ತು. ಆದರೆ ಭಾನುವಾರದಿಂದ ನಿರ್ಬಂಧ ತೆರವುಗೊಳಿಸಿದ್ದರೂ ಬೆಟ್ಟಕ್ಕೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ಪ್ರವಾಸಿಗರು ಬರಲಿಲ್ಲ. ಪ್ರತಿವರ್ಷ ದಸರಾ ಸಂದರ್ಭ ರಜಾ ದಿನಗಳಲ್ಲಿ 10 ರಿಂದ 15 ಸಾವಿರ ಮಂದಿ ಭೇಟಿ ನೀಡುತ್ತಿದ್ದರು. ಕೋವಿಡ್ ನಂತರ ಐದಾರು ಸಾವಿರ ಮಂದಿ ಬೆಟ್ಟಕ್ಕೆ ಬರುತ್ತಿದ್ದರು. ಆದರೆ ಭಾನುವಾರ ಎರಡರಿಂದ ಮೂರು ಸಾವಿರ ಮಂದಿಯಷ್ಟೇ ಬೆಟ್ಟಕ್ಕೆ ಭೇಟಿ ನೀಡಿದ್ದರು.
ಬೆರಳೆಣಿಕೆಯಷ್ಟು ಮಂದಿ ಮಾತ್ರ ಭೇಟಿ : ನಗರದ ಪ್ರಮುಖ ಪ್ರವಾಸಿ ತಾಣ ಹಾಗೂ ಆಕರ್ಷಣೀಯ ಸ್ಥಳಗಳಾದ ಮೃಗಾಲಯ ಮತ್ತು ರೈಲ್ವೆ ಮ್ಯೂಸಿಯಂಗೆ ಭಾನುವಾರ ಬೆರಳೆಣಿಕೆಯಷ್ಟು ಮಂದಿ ಪ್ರವಾಸಿಗರು ಭೇಟಿ ನೀಡಿದರು. ನಿರ್ಬಂಧ ವಾಪಸ್ ತೆಗೆದಿರುವಬಗ್ಗೆ ಪ್ರವಾಸಿಗರು ಮತ್ತು ಜನರಲ್ಲಿ ಮಾಹಿತಿ ಕೊರತೆಯಿಂದಾಗಿ ಹೆಚ್ಚು ಜನ ಆಗಮಿಸಿಲ್ಲಎಂದು ಅಧಿಕಾರಿಗಳು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.