ಕಟ್ಟಡ ಕಾರ್ಮಿಕರ ನೋಂದಣಿ ಸ್ಥಗಿತ; ನಕಲಿ ನೋಂದಣಿ ಶಂಕೆ

ತಾಂತ್ರಿಕ ಕಾರಣ ನೀಡುತ್ತಿರುವ ಅಧಿಕಾರಿಗಳು

Team Udayavani, Oct 20, 2020, 6:15 AM IST

ಕಟ್ಟಡ ಕಾರ್ಮಿಕರ ನೋಂದಣಿ ಸ್ಥಗಿತ; ನಕಲಿ ನೋಂದಣಿ ಶಂಕೆ

ಉಡುಪಿ: ರಾಜ್ಯ ಸರಕಾರದ ಕೋವಿಡ್‌ ಪ್ಯಾಕೇಜ್‌ ಘೋಷಣೆ ಯಾದ ಬಳಿಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯಲ್ಲಿ ನೋಂದಣಿ ಭಾರೀ ಪ್ರಮಾಣ ದಲ್ಲಿ ಹೆಚ್ಚಾ ಗಿದೆ. ಪ್ಯಾಕೇಜ್‌ ಪಡೆ ಯುವುದಕ್ಕಾಗಿ ನಕಲಿ ನೋಂದಣಿ ನಡೆಯುತ್ತಿದೆಯೇ ಎಂಬ ಶಂಕೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೊಸ ಕಾರ್ಡ್‌ ನೋಂದಣಿಯನ್ನು ಒಂದು ತಿಂಗಳಿ ನಿಂದ ಸ್ಥಗಿತಗೊಳಿಸಲಾಗಿದೆ.

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲು ಕಿರುವ ಸಮುದಾಯಗಳಿಗೆ ರಾಜ್ಯ ಸರಕಾರ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿತ್ತು. ಅದರ ಅನ್ವಯ ಸರಕಾರವು ಕಟ್ಟಡ ಕಾರ್ಮಿಕರ ಖಾತೆಗೆ ನೇರವಾಗಿ 5,000 ರೂ. ಜಮೆ ಬಗ್ಗೆ ಘೋಷಣೆ ಮಾಡಿತ್ತು. ಈ ಪ್ಯಾಕೇಜ್‌ ಘೋಷಣೆಯಾದ ಕೇವಲ ಒಂದು ವಾರದಲ್ಲಿ ರಾಜ್ಯದಲ್ಲಿ 5 ಲಕ್ಷ ಕಟ್ಟಡ ಕಾರ್ಮಿಕರು ಮಂಡಳಿಯಲ್ಲಿ ನೋಂದಣಿ ಯಾಗಿದ್ದಾರೆ. ಇವುಗಳಲ್ಲಿ ಹೆಚ್ಚಿ ನವು ನಕಲಿ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ನೋಂದಣಿಯಲ್ಲಿ ಏರಿಕೆ!
6 ತಿಂಗಳಿನಿಂದ ಮಂಡಳಿಯಲ್ಲಿ ನೋಂದಣಿಯಾಗುವ ಕಟ್ಟಡ ಕಾರ್ಮಿಕರ ಸಂಖ್ಯೆ ರಾಜ್ಯದಲ್ಲಿ ಶೇ. 90ರಷ್ಟು ಏರಿದೆ. ಎಪ್ರಿಲ್‌ನಿಂದ ಸೆಪ್ಟಂಬರ್‌ ವರೆಗೆ ಉಡುಪಿ ಯಲ್ಲಿ 12,057 ಕಾರ್ಮಿಕರು ಮತ್ತು ದ.ಕ.ದಲ್ಲಿ ಒಟ್ಟು 20,749 ಕಾರ್ಮಿಕರ ಸಹಿತ ಒಟ್ಟು 32,806 ಕಟ್ಟಡ ಕಾರ್ಮಿಕರು ಹೊಸ ದಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ.

1.28 ಲಕ್ಷ ಕಾರ್ಮಿಕರು
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಂಡಳಿಯಲ್ಲಿ ಒಟ್ಟು 1,28,171 ಕಟ್ಟಡ ಕಾರ್ಮಿಕರು ನೋಂದಣಿಯಾಗಿದ್ದಾರೆ. ಉಡುಪಿಯಲ್ಲಿ 21,954, ಕಾರ್ಕಳ ದಲ್ಲಿ 8,249, ಕುಂದಾಪುರದಲ್ಲಿ 16,231 ಸಹಿತ ಒಟ್ಟು ಜಿಲ್ಲೆಯಲ್ಲಿ 46,443 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ 81,728 ಕಟ್ಟಡ ಕಾರ್ಮಿಕರು ಇಲಾಖೆಯಡಿಯಲ್ಲಿ ಸೌಲಭ್ಯ ಪಡೆದು ಕೊಳ್ಳಲು ನೋಂದಣಿ ಮಾಡಿಕೊಂಡಿದ್ದಾರೆ.

ಮೊದಲ ಬಾರಿಗೆ ನೋಂದಣಿ ಸ್ಥಗಿತ
2007ರ ಬಳಿಕ ಇದೇ ಮೊದಲ ಬಾರಿಗೆ ಕಟ್ಟಡ ಕಾರ್ಮಿಕ ಮಂಡಳಿ ಕಟ್ಟಡ ಕಾರ್ಮಿಕರ ನೋಂದಣಿಯನ್ನು ಸ್ಥಗಿತಗೊಳಿಸಿದೆ. ಇಲಾಖೆಯು ತಂತ್ರಾಂಶ 1.0ರಿಂದ 1.02ಕ್ಕೆ ಅಭಿ ವೃದ್ಧಿ ಪಡಿಸುತ್ತಿರುವುದು ಮತ್ತು ಶುಲ್ಕ ಪಾವತಿ ಸಂದರ್ಭದಲ್ಲಿ ವ್ಯತ್ಯಾಸ ಉಂಟಾಗು ತ್ತಿರುವ ಹಿನ್ನೆಲೆಯಲ್ಲಿ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ.

ನೋಂದಣಿ ಸ್ಥಗಿತಕ್ಕೆ ನಕಲಿ ಶಂಕೆ ಕಾರಣ
ಮಂಡಳಿಯ ಮೂಲಗಳ ಪ್ರಕಾರ, ಏಕಾಏಕಿಯಾಗಿ ನೋಂದಣಿ ಸಂಖ್ಯೆ ಹೆಚ್ಚಾಗಿದ್ದರಿಂದ ನಕಲಿಯೇ ಎಂಬ ಶಂಕೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ತಾತ್ಕಾಲಿಕವಾಗಿ ನೋಂದಣಿ ಸ್ಥಗಿತಗೊಳಿಸಲಾಗಿದೆ.

ನೋಂದಣಿ ತಂತ್ರಾಂಶದಲ್ಲಿ ತಾಂತ್ರಿಕ ತೊಡಕುಗಳಿವೆ. ಅವುಗಳನ್ನು ಸರಿಪಡಿಸಲು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಂಡಳಿಯು ಶೀಘ್ರದಲ್ಲಿ ಕಟ್ಟಡ ಕಾರ್ಮಿಕರ ನೋಂದಣಿಗೆ ಅವಕಾಶ ಕಲ್ಪಿಸ ಲಿದೆ. ಬೋಗಸ್‌ ಕಾರ್ಡ್‌ಗಳ ಬಗ್ಗೆ ಗಮನಕ್ಕೆ ಬಂದಿಲ್ಲ. ಬಂದರೆ ಕ್ರಮ ತೆಗೆದು ಕೊಳ್ಳ ಲಾಗುತ್ತದೆ. ಇದು ವರೆಗೆ ಯಾವುದೇ ಸಂಘಟನೆ ಬೋಗಸ್‌ ಕಾರ್ಡ್‌ಗಳು ನೊಂದಣಿಯಾಗುತ್ತಿರುವ ಕುರಿತು ದೂರು ನೀಡಿಲ್ಲ.
-ಬಿ.ಕೆ. ನಾಗರಾಜ್‌, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರು, ದ.ಕ. ಜಿಲ್ಲೆ.

ಕಟ್ಟಡ ಕಾರ್ಮಿಕರಿಗೆ ಕೋವಿಡ್‌ ಪ್ಯಾಕೇಜ್‌ ಘೋಷಣೆಯಾದ ಬಳಿಕ ಏಕಾಏಕಿಯಾಗಿ ನೋಂದಣಿ ಸಂಖ್ಯೆ ಹೆಚ್ಚಿದೆ. ಇವುಗಳಲ್ಲಿ ನಕಲಿ ಇರುವ ಸಾಧ್ಯತೆ ಇದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸಂಘದಿಂದ ಕಲ್ಯಾಣ ಮಂಡಳಿ ಕಾರ್ಯದರ್ಶಿ ಹಾಗೂ ಕಾರ್ಮಿಕ ಮಂತ್ರಿಗಳಿಗೆ ಮನವಿ ಮಾಡಲಾಗಿತ್ತು.
-ಬಾಲಕೃಷ್ಣ ಶೆಟ್ಟಿ , ಕಟ್ಟಡ ನಿರ್ಮಾಣ ಕಾರ್ಮಿಕ ಸಂಘ (ಸಿಐಟಿಯು) ಕಾರ್ಯದರ್ಶಿ, ಉಡುಪಿ

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.