ಮಹಾನಗರದಲ್ಲಿ ಅಬ್ಬರಿಸಿದ ಮಳೆರಾಯ

ಆರ್‌.ಆರ್‌. ನಗರದಲ್ಲೇ 103 ಮಿ.ಮೀ. ಮಳೆ ,ಮೈಸೂರು ರಸ್ತೆ ಸಂಚಾರ ಸ್ಥಗಿತ

Team Udayavani, Oct 24, 2020, 11:45 AM IST

ಮಹಾನಗರದಲ್ಲಿ ಅಬ್ಬರಿಸಿದ ಮಳೆರಾಯ

ಬೆಂಗಳೂರು:ವರ್ಷದ ಗರಿಷ್ಠ ಮಳೆಗೆ ಗುರುವಾರ ನಗರ ಅಕ್ಷರಶಃ ತತ್ತರಿಸಿತು. ಆರ್‌.ಆರ್‌.ನಗರದಲ್ಲಿ ಸತತ2ದಿನವೂ ಮಳೆ ಪರಿಣಾಮ, ಫ್ಲ್ಯಾಶ್‌ಫ್ಲಡ್‌ ಉಂಟಾಯಿತು. ರಸ್ತೆಯಲ್ಲಿದ್ದ ವಾಹನಗಳು, ತಗ್ಗು ಪ್ರದೇಶಗಳಲ್ಲಿದ್ದ ಮನೆಗಳು, ನಿಲ್ದಾಣ ಗಳಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕರು, ಹಬ್ಬದ ಸಂತೆಗೆ ಬಂದ ಜನ, ವ್ಯಾಪಾರಿಗಳು, ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ಹೀಗೆ ಎಲ್ಲರಿಗೂ ಈ “ದಿಢೀರ್‌ ನೆರೆ’ ಬಿಸಿ ತಟ್ಟಿತು. ಹೊಸಕೆರೆ ಹಳ್ಳಿಯಲ್ಲಿ ರಾಜಕಾಲುವೆ ಉಕ್ಕಿಹರಿದ ಪರಿಣಾಮ ನೂರಾರು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತು.

ಎರಡನೇ ದಿನ ಜನ ಜಾಗರಣೆ ಕಾರಣವಾಯಿತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 20 ಮಂದಿಯತಂಡ ಹೊಸಕೆರೆಹಳ್ಳಿಗೆ ತೆರಳಿ ರಕ್ಷಣಾ ಕಾರ್ಯ ಕೈಗೊಂಡಿತು. ಇದಕ್ಕೂ ಮುನ್ನ ಸ್ಥಳೀಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮೂವರನ್ನು ರಕ್ಷಿಸಿದರು. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಲಿಲ್ಲ. ಈ ಮಧ್ಯೆ ಸ್ಥಳಕ್ಕೆ ಕಂದಾಯ ಸಚಿವ ಆರ್‌. ಅಶೋಕ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾತ್ರಿ 8ರ ಸುಮಾರಿಗೆ ಆರ್‌.ಆರ್‌. ನಗರದಲ್ಲಿ ಗರಿಷ್ಠ 103 ಮಿ.ಮೀ. ಮಳೆ ದಾಖಲಾಗಿದೆ. ಸಾರಕ್ಕಿ, ಉತ್ತನಹಳ್ಳಿ, ಪಟ್ಟಾಭಿರಾಮನಗರ, ಗೊಟ್ಟಿಗೆರೆ, ಹಂಪಿನಗರ, ಅಂಜನಾಪುರ ಮತ್ತಿತರಕಡೆ ಕನಿಷ್ಠ 25ರಿಂದ ಗರಿಷ್ಠ66 ಮಿ.ಮೀ. ಮಳೆ ಬಿದ್ದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಅಲ್ಪಾವಧಿಯಲ್ಲಿ ಅತಿಹೆಚ್ಚು ಮಳೆ ಅವಾಂತರಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಬಕೆಟ್‌ಗಳಲ್ಲಿ ನೀರು ಹೊರಹಾಕುತ್ತಿದ್ದ ಮಕ್ಕಳು, ವೃದ್ಧರು, ಮಹಿಳೆಯರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೆಜೆಸ್ಟಿಕ್‌, ಕೆ.ಆರ್‌. ಮಾರುಕಟ್ಟೆ, ಕೆ.ಜಿ. ರಸ್ತೆ, ಜೆ.ಸಿ. ರಸ್ತೆ, ಸಜ್ಜನ್‌ರಾವ್‌ ವೃತ್ತ, ಮೇಖ್ರೀ ವೃತ್ತ, ಆರ್‌.ವಿ. ರಸ್ತೆ, ಹೆಬ್ಟಾಳ, ಜಯನಗರ, ಶಾಂತಿನಗರಗಳಲ್ಲಿ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಶಾಂತಿನಗರ, ಕೆ.ಆರ್‌. ಮಾರುಕಟ್ಟೆ ಮತ್ತಿತರ ಪ್ರಮುಖ ನಿಲ್ದಾಣಗಳಿಗೂ ಪ್ರಯಾಣಿಕರಿಗೂ ಈ ಗೋಳು ತಪ್ಪಲಿಲ್ಲ.

ರಾಜಧಾನಿಯ ದಕ್ಷಿಣದಲ್ಲೇ ಅಬ್ಬರ ಹೆಚ್ಚು :

ದಕ್ಷಿಣ ಭಾಗದಲ್ಲಿ ವರುಣನ ಆರ್ಭಟ ಜೋರಾಗಿತ್ತು. ರಾಜಕಾಲುವೆ ನೀರು ರಸ್ತೆ ಆವರಿಸಿದ್ದರಿಂದ ಹೊಸಕೆರೆಹಳ್ಳಿಯಲ್ಲಿ ನೂರಾರು ಮನೆಗಳಿಗೆ ನೀರು ನುಗ್ಗಿತು. ಮೈಲಸಂದ್ರ ಕೆರೆ ಉಕ್ಕಿಹರಿದಿದ್ದರಿಂದ ಬೆಂಗಳೂರು-ಮೈಸೂರು ಮುಖ್ಯರಸೆ ¤ ಸಂಚಾರ ಹಲವು ಗಂಟೆ ಕಾಲ ಸ್ಥಗಿತಗೊಂಡಿತ್ತು. ಮೈಲಸಂದ್ರದಿಂದ ಕುಂಬಳಗೋಡುವರೆಗೂ ರಸ್ತೆಗಳು ಜಲಾವೃತಗೊಂಡಿದ್ದವು. ಬಿಎಂಟಿಸಿ ಹಾಗೂ ಕಾಲೇಜು ಸಿಬ್ಬಂದಿಯನ್ನು ಕರೆದೊಯ್ಯುವ ಬಸ್‌ಗಳು, ಕಾರುಗಳು ಸೇರಿದಂತೆ30ಕ್ಕೂ ಅಧಿಕ ವಾಹನಗಳು ಜಲಾವೃತಗೊಂಡು, ಮಾರ್ಗಮಧ್ಯೆಯೇ ಕೆಟ್ಟುನಿಂತವು. ಸ್ಥಳಕ್ಕೆ ಧಾವಿಸಿದ ಪೌರ ರಕ್ಷಣಾ ದಳ ಹಾಗೂ ಅಗ್ನಿಶಾಮಕ ಸಿಬ್ಬಂದಿ, ಬಸ್‌ ಮತ್ತಿತರ ವಾಹನಗಳ ಚಾಲಕರು, ಸವಾರರನ್ನು ರಕ್ಷಿಸಿದರು. ರಸ್ತೆಗಳಲ್ಲಿ

ಮೂರು ಅಡಿ ನೀರು ನಿಂತಿದ್ದರಿಂದ ವಾಹನಗಳ ಸಂಚಾರ ಕೆಲವೆಡೆ ಸಂಪೂರ್ಣ ಸ್ತಬ್ಧಗೊಂಡಿತ್ತು. ಬಸ್‌ ಸೇರಿದಂತೆ ವಾಹನಗಳಲ್ಲಿ ನೀರು ನುಗ್ಗಿದ್ದರಿಂದ ಪ್ರಯಾಣಿಕರು ಪರದಾಡಿದರು. ಬನಶಂಕರಿ, ಬಿಇಎಂಎಲ್‌ ಲೇಔಟ್‌, ಆರ್‌.ಆರ್‌. ನಗರದ ದತ್ತಾತ್ರೇಯ ಲೇಔಟ್‌, ಮೀನಾಕ್ಷಿ ಕಲ್ಯಾಣ ಮಂಟಪ, ಇಟ್ಟಮಡುಗು ಇತರೆಡೆ ನೀರು ನುಗ್ಗಿತು.

ಎಲ್ಲೆಲ್ಲಿ ಅವಾಂತರ? :  ಕೋರಮಂಗಲ 4ನೇ ಬ್ಲಾಕ್‌, ಸಿಟಿ ಬೆಡ್‌ ಬಾಸ್ಕ್ರ್‌ ರಾವ್‌ ಪಾರ್ಕ್‌ ಹಾಗೂ ಶ್ರೀಕಂಠೇಶ್ವರ ಪಾರ್ಕ್‌ ಸುತ್ತಮುತ್ತಲ ರಸ್ತೆಗಳು ಹಾಗೂ ಮನೆಗಳು ಜಲಾವೃತವಾಗಿ ಸವಾರರು ಹಾಗೂ ನಿವಾಸಿಗಳು ಪರಿದಾಡಿದರು. ಬನಶಂಕರಿ 2ನೇ ಹಂತ, ಎಲ್‌ಐಸಿ ಕಾಲೋನಿ 1ನೇ ಕ್ರಾಸ್‌, ಐಟಿಐ ಲೇಔಟ್‌, ಸಿಂಡಿಕೇಟ್‌ ಲೇಔಟ್‌, ವಿದ್ಯಾಪೀಠ, ಉತ್ತರಹಳ್ಳಿ, ವಿ.ವಿ.ಪುರಂ, ಕೋಣಕುಂಟೆ, ವಿದ್ಯಾಪೀಠ, ಪುಟ್ಟೇನಹಳ್ಳಿ, ಯಲಚೇತನಹಳ್ಳಿ, ಚಿಕ್ಕಕಲ್ಲಸಂದ್ರ, ಜೆ.ಪಿ.ನಗರ, ಕುಮಾರಸ್ವಾಮಿ ಲೇಔಟ್‌, ಬೆಳ್ಳಂದೂರು, ಮಹದೇವಪುರ, ವಸಂತಪುರ, ಉತ್ತರಹಳ್ಳಿ, ಬೇಗೂರು ನಂದಿಯು ಲೇಔಟ್‌ ಸೇರಿದಂತೆ ನಗರದ ಹಲವೆಡೆ ರಸ್ತೆಗಳು, ಮನೆಗಳು ಹಾಗೂ ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು.

ಉತ್ಸಾಹಕ್ಕೆ ತಣ್ಣೀರು :  “ಕೋವಿಡ್‌-19′ ಹಾವಳಿಯಿಂದಾಗಿ ಬಹುದಿನಗಳ ನಂತರ ಹಬ್ಬಕ್ಕೆಊರಿಗೆ ಹೊರಟವರ ಉತ್ಸಾಹಕ್ಕೆ ಮಳೆ ಕೆಲಹೊತ್ತು ತಡೆಯೊಡ್ಡಿತು. ಕೆಲಸ ಮುಗಿಸಿ ಹೊರಟವರಿಗೆ ರಸ್ತೆಗಳು ಜಲಾವೃತಗೊಂಡಿದ್ದರಿಂದ ಪರದಾಡುವಂತಾಯಿತು. ತದನಂತರ ಮನೆಗಳಿಗೆ ತೆರಳಿ, ಅಲ್ಲಿಂದ ಮೆಜೆಸ್ಟಿಕ್‌ ಅಥವಾ ಹತ್ತಿರದ ಬಸ್‌, ರೈಲು ನಿಲ್ದಾಣ ತಲುಪಲು ಹರಸಾಹಸ ಪಡುವಂತಾಯಿತು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.