ಮೂಲಭೂತ ಹಕ್ಕು, ಕರ್ತವ್ಯ ಅರಿವು ಅಗತ್ಯ


Team Udayavani, Oct 27, 2020, 1:40 PM IST

ಮೂಲಭೂತ ಹಕ್ಕು, ಕರ್ತವ್ಯ ಅರಿವು ಅಗತ್ಯ

ಬಾಗೇಪಲ್ಲಿ: ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಮೂಲಭೂತ ಹಕ್ಕುಗಳನ್ನು ಸಂರಕ್ಷಣೆ ಮಾಡುವ ಹಿನ್ನೆಲೆಯಲ್ಲಿ ಭಾರತ ರತ್ನ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ದೇಶಕ್ಕೆ ಸಂವಿಧಾನ ರಚಿಸಿಕೊಟ್ಟರು ಎಂದು ನ್ಯಾಯಾಧೀಶ ಎಸ್‌.ಎಂ.ಅರುಟಗಿ ಪ್ರತಿಪಾದಿಸಿದರು.

ಪಟ್ಟಣದ ನ್ಯಾಯಾಲಯದ ಪ್ರಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಬಾಗೇಪಲ್ಲಿ ಆಡಳಿತ ಇಲಾಖೆ, ಪತ್ರಕರ್ತ ಸಂಘದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರದಿಂದ ಸಿಗುವ ಯೋಜನೆಗಳ, ಸಂವಿಧಾನ ದಿನಾಚರಣೆ ಹಾಗೂ ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉಚ್ಛ ನ್ಯಾಯಾಲಯದ ನಿರ್ದೇಶನದಂತೆ ಇಂದು ಸಂವಿಧಾನ ದಿನಾಚರಣೆ ಏರ್ಪಡಿಸಲಾಗಿದ್ದು, ಸಂವಿಧಾನದಲ್ಲಿರುವ ಪ್ರತಿಯೊಬ್ಬರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ತಿಳಿಸಬೇಕು ಎಂಬ ಉದ್ದೇಶವನ್ನು ಒಳಗೊಂಡಿದೆ. ಅದೇರೀತಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಂದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದಾಗಿದೆ ಎಂದರು.

ಮೂಲಭೂತ ಹಕ್ಕುಗಳಾದ ಶಿಕ್ಷಣ, ಆಹಾರ, ಬದುಕುವ, ಮಾತನಾಡುವ, ಪ್ರತಿಭಟಿಸುವ ಇತ್ಯಾದಿ ಹಕ್ಕುಗಳನ್ನು ನಮ್ಮ ಸಂಧಾನ ಕಲ್ಪಿಸಿದ್ದು, ಅದರೊಂದಿಗೆಕರ್ತವ್ಯಗಳನ್ನು ಪಾಲಿಸಬೇಕಾಗಿರುತ್ತದೆಎಂದರು. ವಕೀಲರ ಸಂಘದ ಅಧ್ಯಕ್ಷ  ನಂಜುಂಡಪ್ಪ ಮಾತನಾಡಿ, ಪ್ರತಿಯೊಂದು ಧರ್ಮಕ್ಕೂ ಒಂದೊಂದು ಧರ್ಮಗ್ರಂಥವಿರುತ್ತದೆ. ಆದರೆ ಎಲ್ಲಾ ಧರ್ಮಗಳನ್ನೊಳಗೊಂಡ ನಮ್ಮ ದೇಶಕ್ಕೆ ಒಂದೇ ಧರ್ಮಗ್ರಂಥ ಅದು ನಮ್ಮ ಸಂವಿಧಾನ ಎಂದರು.

ವಕೀಲರ ಸಂಘದ ಉಪಾಧ್ಯಕ್ಷೆ ಓ.ಎನ್‌.ಮಂಜುಳಾ, ವಕೀಲರಾದ ಫ‌ಯಾಜ್‌ಬಾಷ, ನಾಗಭೂಷಣ್‌, ನಾರಾಯಣ, ಬಾಲು, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಅನ್ಸೂಬಾಯಿ ಮತ್ತಿತರರು ಇದ್ದರು.

6 ವರ್ಷ ಮತದಾರರ ಸಮಸ್ಯೆಗೆ ಸ್ಪಂದನೆ :

ಚಿಂತಾಮಣಿ: ಆರು ವರ್ಷಗಳ ಅವಧಿಯಲ್ಲಿ ನನ್ನ ಕಚೇರಿಗೆ ಒಂದು ದಿನವೂ ಕೂಡ ರಜೆ ಇಲ್ಲದೇಪದವೀಧರರ, ಸಾಮಾನ್ಯಜನರ ಹಾಗೂ ಮತದಾರರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಸಮಸ್ಯೆಗಳನ್ನು ಬಗೆಹರಿಸಿದ್ದು,ಈ ಬಾರಿಯ ವಿಧಾನ ಪರಿಷತ್‌ ಚುನಾವಣೆಯಲ್ಲಿಯೂ ಕೂಡ ಪದವೀಧರರು ತನ್ನ ಕೈ ಹಿಡಿಯಲಿದ್ದಾರೆ ಎಂದು ಆಗ್ನೇಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ತೂಪಲ್ಲಿ ಚೌಡರೆಡ್ಡಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಂದಿರುವ ಅನುದಾನವನ್ನು ಎಲ್ಲಾ ತಾಲೂಕುಗಳಿಗೆ ಸಮವಾಗಿ ಹಂಚಿಕೆ ಮಾಡಿದ್ದು, ಚಿಂತಾಮಣಿ ತಾಲೂಕಿನಲ್ಲಿಯೂ ಹಂಚಿಕೆ ಮಾಡಿದ್ದೇನೆ ಎಂದರು.

ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 48 ಸಾವಿರ ಶಿಕ್ಷಕರನ್ನು ನೇಮಿಸಲಾಯಿತು. ಶಿಕ್ಷಕರ, ಉಪನ್ಯಾಸಕರ, ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಿದ್ದು, ಅ ಮೂಲಕ ಎಲ್ಲಾ ಶಿಕ್ಷಕರ ಸಮಸ್ಯೆಗಳನ್ನುಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿರುವುದಾಗಿ ತಿಳಿಸಿದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಚುನಾವಣೆಯಲ್ಲಿ ಜೆಡಿಎಸ್‌ಗೆ ಪ್ರತಿ ಸ್ಪರ್ಧಿ ಬಿಜೆಪಿಯಾಗಿದ್ದು, ಟಿಕೆಟ್‌ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿ ಬಂಡಾಯ ಅಭ್ಯರ್ಥಿ ಸ್ಪರ್ಧೆಯಲ್ಲಿದ್ದು, ಇದರಿಂದ ನನಗೆ ನೆರವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಆರ್‌.ಮಣಿ, ಕರುಣಾಕರ ರೆಡ್ಡಿ, ಕೆಂಚಾರ‌್ಲಹಳ್ಳಿ ಸರಸ್ವತಿ ಶಾಲೆ ನಾರಾಯಣಸ್ವಾಮಿ, ಬಾಗೇಪ್ಪಲ್ಲಿ ವರದಾದ್ರಿ ಉಪನ್ಯಾಸಕ ಸುರೇಶ್‌, ಕಾಗತಿ ವೆಂಕಟೇಶ್‌, ಕರಿಯಪ್ಪಲ್ಲಿ ವೆಂಕಟೇಶ್ವರ ಶಾಲೆಯ ಎನ್‌. ರಮೇಶ್‌ ಕುಮಾರ್‌, ಊಲವಾಡಿ ಆದಿತ್ಯ ಶಾಲೆಯ ರಾಜಣ್ಣ, ಕಾಗತಿ ಮಂಜುನಾಥ್‌ ಸೇರಿದಂತೆ ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.