![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 29, 2020, 11:35 PM IST
ಅಬುಧಾಬಿ: ಆಸ್ಟ್ರೇಲಿಯ ಪ್ರವಾಸಗೈಯುವ ಭಾರತದ ಯಾವುದೇ ತಂಡದಲ್ಲಿ ಸ್ಥಾನ ಪಡೆಯದ ಸೂರ್ಯ ಕುಮಾರ್ ಯಾದವ್ ಬುಧವಾರದ ಆರ್ಸಿಬಿ ಎದುರಿನ ಪಂದ್ಯದಲ್ಲಿ ತನ್ನ ತಾಕತ್ತು ಪ್ರದರ್ಶಿಸಿ ಆಯ್ಕೆಗಾರರಿಗೆ ಸವಾಲೆಸೆದಿದ್ದಾರೆ. ಜತೆಗೆ ಯಾದವ್ ಭಾರತ ತಂಡದಲ್ಲಿ ಇರಬೇಕಿತ್ತು ಎಂಬುದಾಗಿ ಮುಂಬೈ ತಂಡದ ಉಸ್ತುವಾರಿ ನಾಯಕ ಕೈರನ್ ಪೊಲಾರ್ಡ್ ಅಭಿಪ್ರಾಯಪಟ್ಟಿದ್ದಾರೆ.
“ಎರಡು ವಿಕೆಟ್ ಬೇಗನೇ ಬಿದ್ದಾಗ ಅಮೋಘ ಸ್ಟ್ರೈಕ್ರೇಟ್ ಮೂಲಕ ತಂಡವನ್ನು ಆಧರಿಸಿ ನಿಲ್ಲುವುದು ಸುಲಭವಲ್ಲ. ಆದರೆ ಸೂರ್ಯಕುಮಾರ್ ಇದನ್ನು ಸಾಧಿಸಿ ತೋರಿದ್ದಾರೆ. ಅವರು ಈಗಾಗಲೇ ಭಾರತ ತಂಡದಲ್ಲಿರಬೇಕಿತ್ತು’ ಎಂಬುದಾಗಿ ಪೊಲಾರ್ಡ್ ಹೇಳಿದರು.
ಫಿನಿಶಿಂಗ್ಗಾಗಿ ಕಾಯುತ್ತಿದ್ದೆ
ಇದೇ ವೇಳೆ ಪ್ರಕ್ರಿಯಿಸಿದ ಸೂರ್ಯಕುಮಾರ್ ಯಾದವ್, “ನಾನು ಪರಿಪೂರ್ಣ ಫಿನಿಶಿಂಗ್ಗಾಗಿ ಕಾಯುತ್ತಿದ್ದೆ. ಇದು ಹೇಗೆ ಸಾಧ್ಯವಾಗಲಿದೆ ಎಂಬ ಬಗ್ಗೆ ಯೋಚಿಸುತ್ತಿದ್ದೆ. ನನ್ನ ಆಟದ ಬಗ್ಗೆಯೇ ನಾನು ಪರಿಪೂರ್ಣವಾಗಿ ತಿಳಿದುಕೊಳ್ಳಬೇಕಿತ್ತು. ಮೆಡಿಟೇಶನ್, ನನ್ನೊಂದಿಗೇ ಸಮಯ ಕಳೆದುದರಿಂದ ಕ್ರೀಸ್ನಲ್ಲಿ ಬಹಳ ಹೊತ್ತು ನಿಲ್ಲುವಂತಾಯಿತು’ ಎಂದರು.
ಚಹಲ್ ಎಸೆತಗಳನ್ನು ಕವರ್ ವಿಭಾಗದ ಮೇಲಿನಿಂದ ಬಾರಿಸಿದ್ದು, ಸ್ಟೇನ್ ಎಸೆತಗಳಿಗೆ ಬ್ಯಾಕ್-ಫುಟ್ ಡ್ರೈವ್ ಟಚ್ ನೀಡಿದ್ದೆಲ್ಲ ಸೂರ್ಯಕುಮಾರ್ ಅವರ ಆಕರ್ಷಕ ಬ್ಯಾಟಿಂಗಿಗೆ ಸಾಕ್ಷಿಯಾಗಿತ್ತು. ಕೇವಲ 43 ಎಸೆತ ಎದುರಿಸಿದ ಯಾದವ್, ಅಜೇಯ 79 ರನ್ ಬಾರಿಸಿ ಮುಂಬೈ ಗೆಲುವಿನ ರೂವಾರಿಯಾದರು. ಈ ಪಂದ್ಯಶ್ರೇಷ್ಠ ಆಟದಲ್ಲಿ 10 ಬೌಂಡರಿ, 3 ಸಿಕ್ಸರ್ ಒಳಗೊಂಡಿತ್ತು.
ಇಂಥ ಸ್ಟೈಲಿಶ್ ಬ್ಯಾಟ್ಸ್ಮನ್ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗದಿರುವ ಬಗ್ಗೆ ಎಲ್ಲ ದಿಕ್ಕುಗಳಿಂದಲೂ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ ಯಾದವ್ ವಯಸ್ಸೇ ಇದಕ್ಕೆ ಅಡ್ಡಿಯಾಗಿರುವ ಸಾಧ್ಯತೆ ಇಲ್ಲದಿಲ್ಲ. ಈಗಾಗಲೇ ಅವರಿಗೆ 30 ವರ್ಷ ಪೂರ್ತಿಯಾಗಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.