ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌


Team Udayavani, Oct 30, 2020, 12:09 AM IST

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

ಬೈಡೆನ್‌ ಹಾದಿ…
ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಯಾಗಿರುವ 77 ವರ್ಷದ ಜೋ ಬೈಡೆನ್‌, ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಆರು ಬಾರಿ ಸೆನೇಟರ್‌ ಆಗಿ(36 ವರ್ಷಗಳವರೆಗೆ) ಕಾರ್ಯನಿರ್ವಹಿಸಿದವರು. ಒಬಾಮಾ ಅವಧಿಯಲ್ಲಿ 8 ವರ್ಷ ಅಮೆರಿಕದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಹೆಸರು ಮಾಡಿದವರು. ಈ ಬಾರಿ ಚುನಾವಣೆಯಲ್ಲಿ ಗೆದ್ದರೆ ಅಮೆರಿಕದ ಇದುವರೆಗಿನ ಅತಿ ಹಿರಿಯ ಅಧ್ಯಕ್ಷರೆಂದು ಕರೆಸಿಕೊಳ್ಳಲಿದ್ದಾರೆ.

ಕೋವಿಡ್‌ ಸಮಯದಲ್ಲಿ ಸಕ್ರಿಯ
ಟ್ರಂಪ್‌ರ ಆರಂಭಿಕ ಅಸಡ್ಡೆಯೇ ರೋಗ ಪ್ರಸರಣ ಹೆಚ್ಚಲು ಕಾರಣ ಎಂದು ಬೈಡೆನ್‌ ಆರಂಭದಿಂದಲೂ ಆರೋಪಿಸುತ್ತಾ ಬಂದಿದ್ದಾರೆ. ಆದರೆ, ಇದೇ ವೇಳೆಯಲ್ಲೇ ಅವರು ತಮ್ಮ ಬೆಂಬಲಿಗರಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಲು ವಿನಂತಿಸುತ್ತಾ, ಆರೋಗ್ಯ ಪರಿಣತರು ಹಾಗೂ ಆರ್ಥಿಕ ತಜ್ಞರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸರಕಾರಕ್ಕೆ ಶಿಫಾರಸು ಮಾಡುತ್ತಾ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಬೆಂಬಲಿಗರಿಗೆ ಸೋಂಕು ಪ್ರಸರಣದ ಅಪಾಯ ಎದುರಾಗುತ್ತದೆಂಬ ಕಾರಣಕ್ಕಾಗಿ ಪಕ್ಷದ ರ್ಯಾಲಿಗಳನ್ನು, ಮನೆಮನೆ ಪ್ರಚಾರವನ್ನು ಕಡಿತಗೊಳಿಸಿದ್ದಾರೆ.

ಬರ್ನಿ ಬದಲು ಬೈಡೆನ್‌
ಬೈಡೆನ್‌ ಆಯ್ಕೆಗೂ ಮೊದಲು, ಹಿರಿಯ ರಾಜಕಾರಣಿ ಬರ್ನಿ ಸ್ಯಾಂಡರ್ಸ್‌ ಅವರೇ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಬಹುದೆಂಬ ನಿರೀಕ್ಷೆ ಯಿತ್ತು. ಆದರೆ, ತೀವ್ರ ಎಡಪಂಥೀಯ ಧೋರಣೆಯಿರುವ ಸ್ಯಾಂಡರ್ಸ್‌ರನ್ನು ಅಮೆರಿಕದ ಕಾರ್ಪೊರೇಟ್‌ ವಲಯ ದ್ವೇಷಿಸುತ್ತದೆ. ಈ ಕಾರಣಕ್ಕಾಗಿಯೇ ಎಲ್ಲ ವರ್ಗಗಳನ್ನೂ ತಲುಪಬಲ್ಲ, ಮೃದು ಮಾತಿನ ಸಮಾಜವಾದಿ ಬೈಡೆನ್‌ರನ್ನೇ ಡೆಮಾಕ್ರಟಿಕ್‌ ಪಕ್ಷ ಆಯ್ಕೆ ಮಾಡಿದೆ ಎನ್ನಲಾಗುತ್ತದೆ.

ಒಬಾಮಾ-ಬೈಡೆನ್‌ ಮೀಮ್ಸ್‌
ಬೈಡೆನ್‌ ಕಳೆದ ಮೂವತ್ತು ವರ್ಷಗಳಿಂದಲೂ ಅಧ್ಯಕ್ಷನಾಗಬೇಕೆಂಬ ಬಯಕೆ ಹೊಂದಿರುವವರು. ಒಬಾಮಾ ಮೊದಲ ಬಾರಿ ಸ್ಪರ್ಧಿಸಿದ್ದ ವೇಳೆಯಲ್ಲಿ ಡೆಮಾಕ್ರಟಿಕ್‌ ಪಕ್ಷದಲ್ಲಿ ಒಬಾಮಾ ಅವರಿಗೆ ಪರ್ಯಾಯವಾಗಲೂ ಪ್ರಯತ್ನಿಸಿ ವಿಫ‌ಲರಾಗಿ ದ್ದರು. ಆದರೆ, ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ ನಂತರ, ಒಬಾಮಾರ ಅತ್ಯಾಪ್ತರಾಗಿ ಬದಲಾದರು. ಇವರಿಬ್ಬರ ದೋಸ್ತಿ ಯಾವ ಮಟ್ಟಕ್ಕೆ ಸದ್ದುಮಾಡುತ್ತಿತ್ತು ಎಂದರೆ, ಗೆಳೆತನ ಎಂದರೆ ಒಬಾಮಾ- ಬೈಡೆನ್‌ರದ್ದು ಎಂದು ಮೀಮ್‌ಗಳು ಹರಿದಾಡುತ್ತಿದ್ದವು. ಈಗ ಒಬಾಮಾ ಬೈಡೆನ್‌ ಪರ ಜೋರಾಗಿಯೇ ಪ್ರಚಾರ ಮಾಡುತ್ತಿದ್ದಾರೆ.

ಭಾಷಣ ಕದಿಯುತ್ತಾರೆಂಬ ಆರೋಪ
ಬೈಡೆನ್‌ರ ವಿರುದ್ಧ ಎದುರಾಳಿಗಳು ಮಾಡುವ ಪ್ರಮುಖ ಆರೋಪಗಳಲ್ಲಿ “ಅವರು ಭಾಷಣಗಳನ್ನು ಕದಿಯುತ್ತಾರೆ, ಸ್ವಂತ ವಿಚಾರವಿಲ್ಲದ ಮನುಷ್ಯ’ ಎನ್ನುವುದೂ ಒಂದು. 1988ರ ಚುನಾವಣೆಯ ಸಮಯದಲ್ಲಿ ಅಧ್ಯಕ್ಷೀಯ ಅಭ್ಯರ್ಥಿ ಸ್ಥಾನದ ಆಕಾಂಕ್ಷಿಯಾಗಿದ್ದ ಬೈಡೆನ್‌ ಕಾರ್ಯಕ್ರಮವೊಂದರಲ್ಲಿ ಮಾಡಿದ ಭಾಷಣ ಅವರ ಓಟಕ್ಕೆ ಮುಳುವಾಯಿತು. ಬ್ರಿಟನ್‌ನ ಲೇಬರ್‌ ಪಾರ್ಟಿಯ ನಾಯಕ ನೀಲ್‌ ಕಿನ್ನೋಕ್‌ ಮಾಡಿದ್ದ ಭಾಷಣದಲ್ಲಿನ ಕೆಲವು ಭಾಗಗಳನ್ನು ಬೈಡೆನ್‌ ಯಥಾವತ್ತಾಗಿ ಎತ್ತಿಕೊಂಡಿದ್ದಾರೆಂದು ವಿವಾದವಾಯಿತು. ಇದಷ್ಟೇ ಅಲ್ಲದೇ, ದಶಕಗಳ ಹಿಂದೆ ರಾಬರ್ಟ್‌. ಎಫ್. ಕೆನಡಿ ಹಾಗೂ ಹ್ಯೂಬರ್ಟ್‌ ಹಂಫ್ರಿಯವರು ಮಾಡಿದ್ದ ಭಾಷಣಗಳನ್ನೂ ಬೈಡೆನ್‌ ನಕಲಿಸಿದ್ದಾರೆ ಎನ್ನುವ ಆರೋಪವೂ ಎದುರಾಗಿತ್ತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.