ಗ್ರಾಹಕ ರಕ್ಷಣೆಗೆ ಮಹತ್ವದ ತೀರ್ಪು


Team Udayavani, Nov 5, 2020, 6:16 AM IST

Editorial

ನಗರ ಹಾಗೂ ಮಹಾನಗರಗಳಲ್ಲಿ ಒಂದು ಫ್ಲ್ಯಾಟ್‌ ಖರೀದಿ ಮಾಡಬೇಕು ಎನ್ನುವ ಕನಸು ಬಹುತೇಕರಿಗೆ ಇರುತ್ತದೆ. ಹೀಗಾಗಿಯೇ ಅನೇಕರು ಕಷ್ಟಪಟ್ಟು ದುಡಿದ ಹಣವನ್ನು ಒಟ್ಟುಗೂಡಿಸಿಯೋ ಅಥವಾ ಸಾಲ ಮಾಡಿಯೋ ಫ್ಲ್ಯಾಟ್‌ ಖರೀದಿಸಲು ನಿರ್ಧರಿಸುತ್ತಾರೆ. ಇದಕ್ಕಾಗಿ ರಿಯಲ್‌ ಎಸ್ಟೇಟ್‌ ಕಂಪೆನಿಗಳಿಗೆ ಮುಂಗಡ ನೀಡಿರುತ್ತಾರೆ. ಆದರೆ ಒಂದು ನಿರ್ದಿಷ್ಟ ಅವಧಿಯಲ್ಲಿ ಫ್ಲ್ಯಾಟ್‌ ನಿಮ್ಮದಾಗುತ್ತದೆ ಎಂದು ಭರವಸೆ ನೀಡುವ ಕಂಪೆನಿಗಳು ಅನಂತರ ಏನೇನೋ ನೆಪ ಮುಂದಿಟ್ಟು, ವಿತರಣೆಯಲ್ಲಿ ವಿಳಂಬ ಮಾಡುತ್ತಾ ಹೋಗುವ ಪ್ರವೃತ್ತಿ ಹೆಚ್ಚುತ್ತಲೇ ಇದೆ.

ಕೋವಿಡ್‌ ಸಾಂಕ್ರಾಮಿಕ ತಡೆಗಾಗಿ ತರಲಾದ ಲಾಕ್‌ಡೌನ್‌ ಹಾಗೂ ಈಗ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅನೇಕ ರಿಯಲ್‌ ಎಸ್ಟೇಟ್‌ ಕಂಪೆನಿಗಳು ಅನಿವಾರ್ಯವಾಗಿಯೂ ನಿರ್ಮಾಣ ಕಾರ್ಯವನ್ನು ವಿಳಂಬಿಸುವಂತಾಗಿದೆ. ಹೀಗಾಗಿಯೇ, ಹಣ ಕೊಟ್ಟು, ಫ್ಲ್ಯಾಟ್‌ಗಳ ನಿರೀಕ್ಷೆಯಲ್ಲಿರುವವರಿಗೆ ನಿರಾಸೆ
ಹೆಚ್ಚುತ್ತಲೇ ಇದೆ.

ಹೀಗೆ ಅತಿಯಾದ ವಿಳಂಬದಿಂದಾಗಿ ನಿರಾಶರಾಗುವ ಜನರು ಫ್ಲ್ಯಾಟ್‌ ಪಡೆಯುವ ಕನಸನ್ನು ಕೈ ಬಿಟ್ಟು, ತಾವು ಕೊಟ್ಟ ಹಣ ಹಿಂಪಡೆಯಲು ನಿರ್ಧರಿಸುತ್ತಾರೆ. ಆದರೆ ಕೆಲವೊಮ್ಮೆ ಕಂಪೆನಿಗಳು ಈ ವಿಚಾರದಲ್ಲೂ ಗ್ರಾಹಕರಿಗೆ ನೆಪ ಹೇಳಿ ತೊಂದರೆ ಮಾಡಿಬಿಡುತ್ತವೆ. ಇದಷ್ಟೇ ಅಲ್ಲ, “ಮನೆಯ ಖರೀದಿ ಮತ್ತು ವಿಳಂಬಕ್ಕೆ ಸಂಬಂಧಿಸಿದ ವಿವಾದಗಳ ವಿಚಾರದಲ್ಲಿ ಗ್ರಾಹಕರು ಕೇವಲ “ರೇರಾ’ ಕಾಯ್ದೆಯ (ರಿಯಲ್‌ ಎಸ್ಟೇಟ್‌ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ) ಮೊರೆ ಹೋಗಬೇಕು ಹಾಗೂ ಈ ಜಟಿಲ ಪ್ರಕ್ರಿಯೆಯಿಂದಾಗಿ ತಮಗೆ ಮತ್ತಷ್ಟು ಸಮಯ ಸಿಗುತ್ತದೆ ಎಂಬ ಧೈರ್ಯದಲ್ಲಿ ರಿಯಲ್‌ ಎಸ್ಟೇಟ್‌ ಕಂಪೆನಿಗಳಿರುತ್ತವೆ. ಈ ಕಾರಣಕ್ಕಾಗಿಯೇ, ಗ್ರಾಹಕರೀಗ ಬೇಸತ್ತು ಗ್ರಾಹಕ ರಕ್ಷಣ ಕಾಯ್ದೆಯ ಮೊರೆ ಹೋಗಲಾರಂಭಿಸಿದ್ದಾರೆ.

ಇದಕ್ಕೂ ಕಂಪೆನಿಗಳು ತಗಾದೆ ತೆಗೆಯಲಾರಂಭಿಸಿವೆ. ಇತ್ತೀಚೆಗೆ ಇಂಥದ್ದೇ ಪ್ರಕರಣವೊಂದರಲ್ಲಿ ಇಂಪೀರಿಯಾ ಸ್ಟ್ರಕ್ಚರ್ಸ್‌ ಲಿಮಿಟೆಡ್‌ ಎಂಬ ರಿಯಲ್‌ ಎಸ್ಟೇಟ್‌ ಕಂಪೆನಿ ವಿರುದ್ಧ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಜನರು ದೂರು ಸಲ್ಲಿಸಿದ್ದರು. ದೂರಿನ ಪರಿಶೀಲನೆ ನಡೆಸಿದ ಆಯೋಗ, ಫ್ಲ್ಯಾಟ್‌ ನೀಡುವಲ್ಲಿ ವಿಳಂಬವಾಗುತ್ತಿದ್ದು, ಗ್ರಾಹಕರು ಪಾವತಿಸಿರುವ ಹಣವನ್ನು ಕೂಡಲೇ ಹಿಂದಿರುಗಿಸಿ ಎಂದು ಆ ನಿರ್ಮಾಣ ಕಂಪೆನಿಗೆ ಆದೇಶ ನೀಡಿತ್ತು. ಆದರೆ, “”ಈ ಯೋಜನೆಯನ್ನು ರೇರಾ ಅಡಿ ನೋಂದಣಿ ಮಾಡಲಾಗಿದ್ದು. ಈ ಕಾರಣಕ್ಕಾಗಿಯೇ ಗ್ರಾಹಕ ರಕ್ಷಣಾ ಕಾಯ್ದೆ ಅಡಿಯಲ್ಲಿ ಸಲ್ಲಿಸಲಾದ ಅರ್ಜಿಗಳನ್ನು ಮಾನ್ಯ ಮಾಡಬಾರದು ” ಎಂದು ಈ ಕಂಪೆನಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಗಮನಾರ್ಹ ಸಂಗತಿಯೆಂದರೆ, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು: “”ಇನ್ಮುಂದೆ ಫ್ಲ್ಯಾಟ್‌ಗಳ ಖರೀದಿದಾರರು ಸೇವೆಯಲ್ಲಿನ ಲೋಪಗಳ ವಿರುದ್ಧ ರೇರಾ ಜತೆಯಲ್ಲೇ ಗ್ರಾಹಕ ರಕ್ಷಣ ಕಾಯ್ದೆಯ ಅಡಿಯಲ್ಲೂ ಪರಿಹಾರ ಪಡೆಯಬಹುದು” ಎಂದು ಮಹತ್ವದ ಆದೇಶ ನೀಡಿದೆ.

ಗ್ರಾಹಕರ ಹಿತರಕ್ಷಣೆಯಲ್ಲಿ ನಿಸ್ಸಂಶಯವಾಗಿಯೂ ಈ ತೀರ್ಪು ಗಮನಾರ್ಹ ಪಾತ್ರ ವಹಿಸಲಿದೆ. ಫ್ಲ್ಯಾಟ್‌ ಖರೀದಿಸಬೇಕೆಂಬ ಕನಸು ಹೊತ್ತು, ಕಂಪೆನಿಗಳ ಭರವಸೆಯ ಮಾತುಗಳನ್ನು ನಂಬಿ ಹಣ ತೆರುವ ಗ್ರಾಹಕರು, ಅನಂತರ ವರ್ಷಗಟ್ಟಲೇ ಕಾಯುತ್ತ ಕುಳಿತುಕೊಳ್ಳುವಂಥ ಪರಿಸ್ಥಿತಿ ಇದರಿಂದ ಕಡಿಮೆಯಾಗಲಿದೆ.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

TREKKING: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

supreme-Court

Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.