![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 5, 2020, 8:08 AM IST
ಮುಂಬೈ: ಎರಡು ವರ್ಷಗಳ ಹಿಂದಿನ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಮತ್ತು ಹಿರಿಯ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಹಾರಾಷ್ಟ್ರದ ಅಲಿಬಾಗ್ ನ್ಯಾಯಾಲಯವು ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಬುಧವಾರ ಬೆಳಗ್ಗೆ ಅಲಿಬಾಗ್ ಪೊಲೀಸರ ತಂಡ ಅರ್ನಾಬ್ ನಿವಾಸಕ್ಕೆ ತೆರಳಿ ಅವರನ್ನು ಬಂಧಿಸಿತ್ತು. ಈ ಸಂದರ್ಭಪೊಲೀಸರು ತನ್ನ ಮತ್ತು ಕುಟುಂಬದವರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಅರ್ನಾಬ್ ಆರೋಪಿಸಿದ್ದಾರೆ. ಈ ಸಂಬಂಧ ರಿಪಬ್ಲಿಕ್ ಟಿವಿ ಕೆಲವು ವೀಡಿಯೋ ಬಿಡುಗಡೆ ಮಾಡಿದ್ದು, ಅರ್ನಾಬ್ ಅವರನ್ನು ಪೊಲೀಸರು ಎಳೆದಾಡುತ್ತಿರುವ ದೃಶ್ಯಗಳು ವೈರಲ್ ಆಗಿವೆ.
2 ವರ್ಷಗಳ ಹಿಂದೆ ಆರ್ಕಿಟೆಕ್ಟ್ ಒಬ್ಬರು ರಿಪಬ್ಲಿಕ್ ಟಿವಿಯಿಂದ ಬಾಕಿ ಹಣ ಬಂದಿಲ್ಲ ಎಂದು ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಕಳೆದ ವರ್ಷ ಮುಕ್ತಾಯ ಮಾಡಲಾಗಿದ್ದ ಈ ಪ್ರಕರಣವನ್ನು ಈ ವರ್ಷದ ಮೇಯಲ್ಲಿ ಮಹಾ ರಾಷ್ಟ್ರ ಸರಕಾರ ಮತ್ತೆ ತೆರೆದಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.