ಸಮೂಹ ಸಾರಿಗೆ ಬಳಕೆ ಇಳಿಕೆ; ಮಾಲಿನ್ಯ ಏರಿಕೆ

ನಗರ ಪ್ರದೇಶದಲ್ಲಿ ಸ್ವಂತ ವಾಹನಗಳ ಬಳಕೆ ಹೆಚ್ಚಳ

Team Udayavani, Nov 10, 2020, 12:28 PM IST

ಸಮೂಹ ಸಾರಿಗೆ ಬಳಕೆ ಇಳಿಕೆ; ಮಾಲಿನ್ಯ ಏರಿಕೆ

ನೈಸ್‌ ರಸ್ತೆ ಮಾರ್ಗದಲ್ಲಿ ಧೂಳು ಮತ್ತು ಹೊಗೆಯಿಂದಾಗಿ ವಾಯು ಮಾಲಿನ್ಯ ಸಮಸ್ಯೆ ಎದುರಾಗಿದೆ.

ಬೆಂಗಳೂರು: ಕೋವಿಡ್ ಭೀತಿಯಿಂದಾಗಿ ನಗರ‌ ನಿವಾಸಿಗಳು ಸಮೂಹ ಸಾರಿಗೆ ಬಳಸುವುದು ಕಡಿಮೆ ಮಾಡಿದ್ದು, ಸ್ವಂತ ವಾಹನಗಳ ‌ ಬಳಕೆ ಹೆಚ್ಚಳ ‌, ಕಾಮಗಾರಿಗಳ ಧೂಳಿನಿಂದ ವಾಯು ಮಾಲಿನ್ಯ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗಿದೆ.

ನಗರದ ‌ ವಿವಿಧ ಪ್ರದೇಶಗಳಲ್ಲಿ 2019ರ ಆಗಸ್ಟ್‌ ಮತ್ತು ಸೆಪ್ಟೆಂಬರ್‌ ಅವಧಿಗಿಂತ 2020ರ ಆಗಸ್ಟ್ ಮತ್ತು ಸೆಪ್ಟೆಂಬರ್‌ ಅವಧಿಯಲ್ಲಿ ವಾಯು ಮಾಲಿನ್ಯಪ್ರಮಾಣಹೆಚ್ಚಾಗಿರುವುದು ಸೆಂಟರ್‌ ಆಫ್ ಸ್ಟಡಿ ಆಫ್ ಸೈನ್ಸ್‌, ಟೆಕ್ನಾಲಜಿ ಆ್ಯಂಡ್‌ ಪಾಲಿಸಿ (ಸಿಎಸ್‌ಟಿ ಇಪಿ)ಸಂಸ್ಥೆಯ ಅಧ್ಯಯನ ‌ ವರದಿಯಲ್ಲಿ ಬೆಳಕಿಗೆ ಬಂದಿದೆ.

ನಗರದ‌ ವಿವಿಧ‌ ಪ್ರದೇಶ ‌ಗಳಲ್ಲಿ ಗಾಳಿಯಲ್ಲಿ ಪಿಎಂ 2.5(2.5 ಮೈಕ್ರಾ ನ್‌ಗಿಂತ ಕಡಿಮೆ ಗಾತ್ರದ ‌) ಮಾಲಿನ್ಯ ಕಾರಕ ‌ ಕಣಗ ‌ಳು ಹೆಚ್ಚಾಗಿರುವುದು ಕಂಡುಬಂದಿದೆ. ಅ.29ರಿಂದ ಸೆ.11ರವರೆಗಿನ ಅವಧಿಯಲ್ಲಿನ ವಾಯು ಮಾಲಿನ್ಯ ಪ್ರಮಾಣದ ಹಿಂದಿನ ವರ್ಷಕ್ಕಿಂತ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಪಿಎಂ 2.5, ಪಿಎಂ 10 ಮತ್ತು ನೈಟ್ರೋಜನ್‌ ಆಕ್ಸೈಡ್‌ ಪ್ರಮಾಣವನ್ನು ಸಹ ಹೆಚ್ಚಾಗಿರುವುದು ಸಾಬೀತಾಗಿದೆ.

ಲಾಕ್‌ಡೌನ್‌ ವೇಳೆ ನಗರದಲ್ಲಿ ವಾಯು ಮಾಲಿನ್ಯ ಪ್ರಮಾಣ ಗಣ ನೀಯವಾಗಿ ಇಳಿದಿತ್ತು. ಅದರೆ, ಅನ್‌ ಲಾಕ್‌ ಬಳಿಕ ಮಾಲಿನ್ಯ ಪ್ರಮಾಣದಲ್ಲೂ ಹೆಚ್ಚಳವಾಗಿದೆ. ಹೆಬ್ಬಾಳ ‌ ರಾಷ್ಟ್ರೀಯ ಹೆದ್ದಾರಿ 47ರಲ್ಲಿ ವಾಹನ ಸಂಚಾರ ಹೆಚ್ಚಿದ್ದಾಗ (2020ರ ಅ.22ರಿಂದ ‌ ಸೆ.4) ಮಾಲಿನ್ಯ 2019ಕ್ಕಿಂತ ಧೂಳಿನ ಪ್ರಮಾಣ, ಹೊಗೆ ಪ್ರಮಾಣದಿಂದ ‌ ಮಾಲಿನ್ಯ ಹೆಚ್ಚಾಗಿದೆ.

ಸಮೂಹ ಸಾರಿಗೆ ಬಳಕೆ ಇಳಿಕೆ: ನಗರ‌ದಲ್ಲಿ ಕೋವಿಡ್ ಮುನ್ನ ನಿತ್ಯ ಅಂದಾಜು 30-35 ಲಕ್ಷ ಜನ ಬಿಎಂಟಿಸಿ ಸೇವೆ ಬಳಸುತ್ತಿದ್ದರು. ಆದರೆ, ಕೋವಿಡ್ ಬಳಿಕ 15 ರಿಂದ‌ 16 ಲಕ್ಷ ಜನ (ಶೇ.50 ರಷ್ಟು) ಜನ ಮಾತ್ರ ಬಿಎಂಟಿಸಿ ಬಳಸುತ್ತಿದ್ದಾರೆ. ಸೋಂಕು ಭೀತಿಯಿಂದ ಸಮೂಹ ಸಾರಿಗೆ ಬಳಸಲು ಪ್ರಯಾಣಿಕರು ಹಿಂದೇಟು ಹಾಕುತ್ತಿದ್ದಾರೆ.

ನೈಟ್ರೋಜನ್‌ ಆಕ್ಸೈಡ್‌ ಪ್ರಮಾಣ ಹೆಚ್ಚಳ :  ನಗರದ ಕೆಲವು ನಿರ್ದಿಷ್ಟ ಭಾಗದಲ್ಲಿ ಪಿಎಂ2.5ನ ಪ್ರಮಾಣ ಹೆಚ್ಚಳವಾಗಿದೆ. ಇದೇ ವೇಳೆ ವಾಹನಗಳಿಂದ ಹೊರ ಹೊಮ್ಮುವ ಹೊಗೆಯಿಂದಾಗಿ ಗಾಳಿಯಲ್ಲಿ ನೈಟ್ರೋಜನ್‌ ಆಕ್ಸೈಡ್‌ ಪ್ರಮಾಣ ಸಹ ಹೆಚ್ಚಳವಾಗಿದೆ. ಆದರೆ, ನೈಟ್ರೋಜನ್‌ ಆಕ್ಸೈಡ್‌ ಪ್ರಮಾಣ ಎಷ್ಟು ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ಇದಕ್ಕಾಗಿ ನಗರದಲ್ಲಿ ವಾಹನಗಳ ಬಳಕೆಯ ಸಂಖ್ಯೆ ಹೆಚ್ಚಾಗಿರುವುದು ಹಾಗೂ ಸಮೂಹ ಸಾರಿಗೆ ಬಳಕೆ ಈ ಹಿಂದೆ ಮತ್ತು ಈಗ ಇರುವುದು ಅಧ್ಯಯನ ಮಾಡಬೇಕಿದೆ ಎನ್ನುತ್ತಾರೆ ಸಿಎಸ್‌ಟಿಇಪಿ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಡಾ. ಪ್ರತಿಮಾ ಸಿಂಗ್‌.

ಏನಿದು ಪಿಎಂ 2.5 ಮತ್ತು ಪಿಎಂ 10? :  ಪಿಎಂ 2.5ನ ಸಂಕ್ಷಿಪ್ತ ರೂಪ ಪರ್ಟಿಕ್ಯೂಲರ್‌ ಮ್ಯಾಟರ್‌ಆಗಿದೆ. ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳನ್ನು ಗುರುತಿಸಲು ಪಿಎಂ 2.5 ಮತ್ತು ಪಿಎಂ 10 ಎಂದು ಉಲ್ಲೇಖ ಮಾಡಲಾಗುತ್ತದೆ. ಗಾಳಿಯಲ್ಲಿ ಪಿಎಂ 2.5 ಮತ್ತು ಪಿಎಂ 10 ಮಾನದಂಡಗಳ ಆಧಾರದ ಮೇಲೆ ಮಾಲಿನ್ಯ ಪ್ರಮಾಣ ಗುರುತಿಸಲಾಗುತ್ತದೆ. ಇನ್ನು ಗಾಳಿಯಯಲ್ಲಿರುವ ಮಾಲಿನ್ಯಕಾರಕ ಕಣಗಳ ಆಧಾರದ ಮೇಲೆ ಪಿಎಂ 2.5 ಮತ್ತು ಪಿಎಂ10 ಎಂದು ವರ್ಗೀಕರಿಸಲಾಗುತ್ತದೆ.

ಉಳಿದ ನಗರಗಳಿಗಿಂತ ನಗರದಲ್ಲಿ ವಾಯು ಮಾಲಿನ್ಯ ಪ್ರಮಾಣ ಕಡಿಮೆ ಇದೆ. ವಾರ್ಷಿಕ ಸರಾಸರಿ ಪಿಎಂ 10 ಪ್ರಮಾಣವು 89ರಲ್ಲಿ ಇದೆ. ಇದನ್ನು ಮತ್ತಷ್ಟು ಇಳಿಸಲುಯೋಜನೆ ರೂಪಿಸಿಕೊಳ್ಳುತ್ತೇವೆ. ಇದಕ್ಕಾಗಿ ಕೇಂದ್ರ ಸರ್ಕಾರ 279 ಕೋಟಿ ರೂ. ಆರ್ಥಿಕ ನೆರವು ನೀಡುತ್ತಿದೆ. ವಿಜಯಕುಮಾರ್‌ ಗೋಗಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ

 

ಹಿತೇಶ್‌ ವೈ

ಟಾಪ್ ನ್ಯೂಸ್

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.