ಐಪಿಎಲ್‌ 2021: ಕಣಕ್ಕಿಳಿಯಲಿವೆ 9 ತಂಡಗಳು


Team Udayavani, Nov 13, 2020, 5:45 AM IST

IPLಐಪಿಎಲ್‌ 2021: ಕಣಕ್ಕಿಳಿಯಲಿವೆ 9 ತಂಡಗಳು

ಹೊಸದಿಲ್ಲಿ: ಹದಿಮೂರನೇ ಐಪಿಎಲ್‌ ಮುಗಿದು ಎರಡೇ ದಿನಗಳಲ್ಲಿ 2021ರ ಐಪಿಎಲ್‌ಗೆ ಸ್ಕೆಚ್‌ ಹಾಕಲು ಬಿಸಿಸಿಐ ಸಜ್ಜಾಗಿದೆ. ಇದು ಕೆಲವೇ ತಿಂಗಳಲ್ಲಿ ಆರಂಭವಾಗಲಿರುವುದರಿಂದ ತರಾತುರಿ ಸಹಜ. ಇದಕ್ಕೂ ಮಿಗಿಲಾಗಿ, 14ನೇ ಐಪಿಎಲ್‌ನಲ್ಲಿ ಎಂಟರ ಬದಲು 9 ತಂಡ ಗಳನ್ನು ಕಣಕ್ಕಿಳಿಸುವುದು ಬಿಸಿಸಿಐ ಯೋಜನೆ. ಹೀಗಾಗಿ ತ್ವರಿತ ವಾಗಿ ಕಾರ್ಯ ಪ್ರವೃತ್ತವಾಗುವುದು ಅನಿವಾರ್ಯವಾಗಿದೆ.

ಮೊದಲಿನ ಯೋಜನೆಯಂತೆ, 2021ರ ಐಪಿಎಲ್‌ನಲ್ಲಿ 10 ತಂಡಗಳನ್ನು ಆಡಿಸಲು ಬಿಸಿಸಿಐ ಯೋಜಿಸಿತ್ತು. ಆದರೆ ಇದನ್ನೀಗ 9ಕ್ಕೆ ಸೀಮಿತಗೊಳಿಸಲಾಗಿದೆ. 2022ರಲ್ಲಿ ತಂಡಗಳ ಸಂಖ್ಯೆಯನ್ನು ಹತ್ತಕ್ಕೆ ಏರಿಸುವ ಬಗ್ಗೆ ಯೋಚಿಸಲಾಗುವುದು. ಇನ್ನು ಕೆಲವೇ ದಿನಗಳಲ್ಲಿ, ಅಂದರೆ ದೀಪಾವಳಿ ಬಳಿಕ ಐಪಿಎಲ್‌ ಆಡಳಿತ ಮಂಡಳಿ ಸಭೆ ನಡೆಯಲಿದ್ದು, ಅಲ್ಲಿ 9ನೇ ತಂಡಕ್ಕಾಗಿ ಬಿಡ್‌ ಕರೆಯುವ ಸಾಧ್ಯತೆ ಇದೆ.

ಐಪಿಎಲ್‌ ಫ್ರಾಂಚೈಸಿ ಆಸಕ್ತರು
9ನೇ ಐಪಿಎಲ್‌ ತಂಡಕ್ಕಾಗಿ ದೇಶದ ಅನೇಕ ಉದ್ದಿಮೆದಾರರು, ಬೃಹತ್‌ ಕಂಪೆನಿ ಗಳು ಆಸಕ್ತಿ ವಹಿಸಿವೆ. ಸಂಜೀವ್‌ ಗೋಯೆಂಕಾ ಗ್ರೂಪ್‌, ಟಾಟಾಸ್‌ ಮತ್ತು ಅದಾನಿ ಗ್ರೂಪ್‌ ಹೊಸ ಫ್ರಾಂಚೈಸಿಯ ಮಾಲಕತ್ವ ವಹಿಸಲು ಮುಂದೆ ಬಂದಿರುವ ಸುದ್ದಿ ಇದೆ. ಮಾಧ್ಯಮ ದೈತ್ಯ ರೋನಿ ಸೂðವಾಲಾ, ಬ್ಯಾಂಕರ್‌ ಉದಯ್‌ ಕೋಟಕ್‌ ಕೂಡ ಈ ಸಾಲಿನಲ್ಲಿವೆ ಎನ್ನಲಾಗಿದೆ.

ಎಲ್ಲವೂ ಯೋಜನೆಯಂತೆ ಸಾಗಿದರೆ 2021ರ ಐಪಿಎಲ್‌ ಭಾರತದಲ್ಲಿ, ಮಾರ್ಚ್‌ ಕೊನೆಯ ವಾರ ಅಥವಾ ಎಪ್ರಿಲ್‌ ಮೊದಲ ವಾರದಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿಕ್ಕಿದೆ. 9ನೇ ತಂಡ ಆಡಲಿಳಿದರೆ ಆಗ ಪಂದ್ಯಗಳ ಸಂಖ್ಯೆ 60ರಿಂದ 76ಕ್ಕೆ ಏರುತ್ತದೆ. ಹೆಚ್ಚುವರಿ ಎರಡು ತಂಡಗಳ ಪ್ರವೇಶವಾದರೆ ಈ ಸಂಖ್ಯೆ 90ಕ್ಕೆ ನೆಗೆಯಲಿದೆ. “ಐಪಿಎಲ್‌ ವಿಂಡೋ’ ತೀರಾ ಚಿಕ್ಕದಾಗಿರುವುದರಿಂದ ಈ ಅವಧಿಯಲ್ಲಿ 90 ಪಂದ್ಯಗಳನ್ನು ಆಡಿಸಲು ಸಾಧ್ಯವಾಗದು. ಇದಕ್ಕೆ ಸೂಕ್ತ ಯೋಜನೆಗಳನ್ನು ರೂಪಿಸಿಕೊಂಡು, 2022ರಲ್ಲಿ ಅಥವಾ ಅನಂತರದ ವರ್ಷಗಳಲ್ಲಿ 10 ತಂಡಗಳಿಗೆ ಅವಕಾಶ ನೀಡುವುದು ಬಿಸಿಸಿಐ ಯೋಜನೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.