![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 14, 2020, 4:19 PM IST
ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿದ ನಿರುದ್ಯೋಗಿ ಅಭ್ಯರ್ಥಿಗಳ ಪಟ್ಟಿ ಪಡೆದು, ಅಭ್ಯರ್ಥಿಗಳನ್ನು ಸಂಪರ್ಕಿಸಿ ಅವರಿಗೆ ಆಸಕ್ತ ಕ್ಷೇತ್ರದಲ್ಲಿ ತರಬೇತಿ ನೀಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯ ಒದಗಿಸಿ ಎಂದು ಜಿಪಂ ಸಿಇಒ ರಘುನಂದನ್ ಮೂರ್ತಿ ಹೇಳಿದರು.
ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಎಸ್ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತರಬೇತಿ ಸಂಸ್ಥೆಯಲ್ಲಿ ಮಹಿಳಾ ಕೌಶಲಾಧಾರಿತ ವೃತ್ತಿಗಳಿಗೆ ಮಾತ್ರವಲ್ಲದೆ, ಯುವಕರು ಹೆಚ್ಚಿನ ಆಸಕ್ತಿಯುಳ್ಳ ಎಲೆಕ್ಟ್ರಿಕಲ್, ಟೆಕ್ಸ್ಟೈಲ್ಸ್, ಜೇನು ಸಾಕಾಣಿಕೆ, ಕುರಿ ಸಾಕಾಣಿಕೆ, ತೋಟಗಾರಿಕೆ ಬೆಳೆಗಳ ಪದ್ದತಿ, ಮೀನುಗಾರಿಕೆ, ಹೈನುಗಾರಿಕೆ, ಕಂಪ್ಯೂಟರ್ ತರಬೇತಿ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಿ. ಅರ್ಜಿ ಆಹ್ವಾನಿಸುವುದಷ್ಟೇ ಅಲ್ಲ, ಅಭ್ಯರ್ಥಿಗಳ ಮಾಹಿತಿದೊರಕುವ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಿ, ಆಸಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ತರಬೇತಿ ನೀಡಿ. ಸ್ವಯಂ ಉದ್ಯೋಗ ಕೈಗೊಳ್ಳಲು ಸಂಸ್ಥೆ ಹಾಗೂ ಲೀಡ್ ಬ್ಯಾಂಕ್ನಿಂದ ಅಗತ್ಯ ಅನುಕೂಲ ಮಾಡಿಕೊಡಿ ಎಂದರು.
ಸಂಸ್ಥೆಗೆ ಬಿಡುಗಡೆಯಾದ ಅನುದಾನ, ಫಲಾನುಭವಿಗಳ ವಿವರ ಪಡೆದ ಅವರು, ಸೂಕ್ತಮಾಹಿತಿ ನೀಡದ ಸಮಿತಿ ಸದಸ್ಯರಿಗೆ ಸರಿಯಾಗಿ ಕಾರ್ಯನಿರ್ವಹಿಸಿ, ಅರ್ಹ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಅನುಕೂಲ ಕಲ್ಪಿಸಿಕೊಡಿ ಎಂದು ಸೂಚನೆ ನೀಡಿದರು.
ಆರ್ಸೆಟ್ಇ ಸಂಸ್ಥೆ ನಿರ್ದೇಶಕ ವಿ.ಎಸ್. ಪಲ್ಲಾಪುರ, ಜಿ.ಪಂ.ನ ಯೋಜನಾ ನಿರ್ದೇಶಕ ಟಿ. ಕೃಷ್ಣಮೂರ್ತಿ, ಜಂಟಿ ಕೈಗಾರಿಕಾ ನಿರ್ದೇಶಕ ಪ್ರಶಾಂತ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಪ್ರಾಣೇಶ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರೇವಣಸಿದ್ದಪ್ಪ ಬೋಲಾ, ಎಸ್ಬಿಐ ಚೀಪ್ಮ್ಯಾನೇಜರ್ ಮಹಾಂತೇಶ, ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ವೀರೇಶ, ಕೈಮಗ್ಗಾಧಿಕಾರಿ ಹೈದರ್ಖಾನ್, ಪಾಲಿಟೆಕ್ನಿಕ್ ಕಾಲೇಜಿನ ವೀರನಗೌಡ, ಸಂಜೀವಿನಿ ಡಿಪಿಎಂ ಅಂಬಣ್ಣ ಸೇರಿದಂತೆ ಅಧಿಕಾರಿಗಳು ಇದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.