ಜಿಲ್ಲೆ ತಾಂಡಾಗಳಲ್ಲಿ ದೀಪಾವಳಿ ಸಂಭ್ರಮ


Team Udayavani, Nov 16, 2020, 3:19 PM IST

ಜಿಲ್ಲೆ ತಾಂಡಾಗಳಲ್ಲಿ ದೀಪಾವಳಿ ಸಂಭ್ರಮ

ದೇವನಹಳ್ಳಿ: ಲಂಬಾಣಿಗರಿಗೆ ದೀಪಾವಳಿ ವಿಶೇಷ ಹಬ್ಬ. ಹೊಸ ವರ್ಷದ ಪ್ರಾರಂಭದ ಸಂಕೇತವಾಗಿದ್ದು ಜಿಲ್ಲೆಯ ಲಂಬಾಣಿ ತಾಂಡಾಗಳಲ್ಲಿ ಹಬ್ಬವನ್ನು ಶ್ರದ್ಧಾ ಭಕ್ತಿ-ಭಾವದಿಂದ ಆಚರಿಸಿದರು.

ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲೂಕುಗಳಲ್ಲಿ ಲಂಬಾಣಿ ತಾಂಡಾಗಳಿವೆ. ದೊಡ್ಡಬಳ್ಳಾಪುರತಾಲೂಕಿನಲ್ಲಿ 17, ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ತೂಬಗೆರೆ ಹೋಬಳಿ 6, ನೆಲಮಂಗಲ 4 ತಾಂಡಾ ಸೇರಿದಂತೆ ಒಟ್ಟು 27 ತಾಂಡಾ ಜಿಲ್ಲೆಯಲ್ಲಿವೆ.

ಕೋವಿಡ್ ಹಿನ್ನೆಲೆಯಲ್ಲಿ ತಾಂಡಾಗಳಲ್ಲಿ ಸರಳವಾಗಿ ಹಬ್ಬ ಆಚರಿಸಿದರು. ಕತ್ತಲಾಗುತ್ತಿದ್ದಂತೆ ಹೆಣ್ಣು ಮಕ್ಕಳು ಒಂಬತ್ತು ದಿನಗಳಿಂದ ಬೆಳೆಸಿದ್ದ ನವಧಾನ್ಯಗಳ ಪೈರು(ತೀಜ್‌) ಮತ್ತು ಮಣ್ಣಿನ ಹಣತೆ ಹಚ್ಚಿ ತಟ್ಟೆಯಲ್ಲಿ ಇಟ್ಟು ದೇವಾಲಯಗಳಿಗೆ ನಂತರ ಎಲ್ಲಾ ಮನೆಗಳಿಗೆ ತೆರಳಿ ಹೊಸ ವರ್ಷದ ಶುಭಾಷಯ ಕೋರುತ್ತಾರೆ. ಇಡೀ ರಾತ್ರಿ ಈ ಪ್ರಕ್ರಿಯೆ ಮುಗಿದ ನಂತರ ಹೆಣ್ಣು ಮಕ್ಕಳು ಮಾರನೇ ದಿನ ಹೊಸ ಉಡುಗೆಯೊಂದಿಗೆ ಪೈರುಗಳನ್ನು ಅಲಂಕರಿಸಿ ತಲೆ ಮೇಲೆ ಹೊತ್ತು ನೀರು ತುಂಬಿರುವ ಕೆರೆ ಕುಂಟೆಗಳಬಳಿ ತೆರಳಿಭಕ್ಷಿಸುಬಂದಹಣದಲ್ಲಿ ಪ್ರಸಾದ ಸಿದ್ಧಪಡಿಸಿ ಗಂಗಾಮಾತೆಗೆ ಪೂಜೆ ಸಲ್ಲಿಸಿ ವಿಸರ್ಜನೆ ಮಾಡುತ್ತಾರೆ.

ಸಮರ್ಪಣೆ: ಹತ್ತಾರು ತಲೆಮಾರಿನ ಅಜ್ಜಂದಿರ, ಅಜ್ಜಿಯರ, ದೊಡ್ಡಪ್ಪ, ಚಿಕ್ಕಪ್ಪಂದಿರ ಹೆಸರಿಗೂ ಪ್ರತ್ಯೇಕ ಸಿಹಿ ಖಾದ್ಯ, ತುಪ್ಪ ದೂಪ ಸಮರ್ಪಣೆ ಮಾಡುತ್ತಾರೆ. ಲಂಬಾಣಿಗರಲ್ಲಿ ದೀಪಾವಳಿಗೆ9ತ್ತು ದಿನ ಮೊದಲೇ ಹಬ್ಬದ ಸಿದ್ಧತೆ ನಡೆಯತ್ತದೆ. ಪ್ರತಿ ತಾಂಡಾದ ದೇವಾಲಯಗಳಲ್ಲಿ ಹೆಣ್ಣು ಮಕ್ಕಳು ನವಧಾನ್ಯಗಳನ್ನು ಬಿದಿರು ಬುಟ್ಟಿಯಲ್ಲಿ ಬಿತ್ತನೆ ಮಾಡಿ ಪೂಜೆ ಸಲ್ಲಿಸುತ್ತಾರೆ. ಉತ್ತರಕರ್ನಾಟಕದಹೈದರಾಬಾದ್‌,ಕರ್ನಾಟಕಪ್ರಾಂತ್ಯಗಳಲ್ಲಿ ಜೀವಂತವಿರುವ ಲಂಬಾಣಿ ವೇಷಭೂಷಣ ಬಯಲು ಸೀಮೆ ಹಾಗೂ ಹಳೇ ಮೈಸೂರು ಭಾಗಗಳಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಹರಪ್ಪ ಮತ್ತು ಮಹೆಂಜುದಾರೊಇತಿಹಾಸದ ಸಮಕಾಲಿನ ಬುಡಕಟ್ಟು ಜನಾಂಗದವರಾಗಿರುತ್ತಾರೆ ಎಂದು ಹಿರಿಯರಾದ ರಾಮನಾಯಕ್‌ ಹೇಳುತ್ತಾರೆ.

ದೀಪಾವಳಿ 9ನೇ ಅಂತಿಮ ದಿನದಂದು ವಿವಿಧ ಸಿಹಿ ಖಾದ್ಯಸಿದ್ಧಗೊಳಿಸುತ್ತಾರೆ. ದೇವಾಲಯದ ಆವರಣಗಳಲ್ಲಿ ತಾಂಡಾದ ನಾಯಕ್‌(ಯಜಮಾನ), ತೋಟಿ(ಡಾವ್‌), ತಳವಾರ(ಕಾರ್‌ಬಾರಿ) ಮನೆಯಂಗಳದಲ್ಲಿ ಹೂ ಚೆಲ್ಲುವುದು ಸಂಪ್ರದಾಯ. ನಂತರ ಕುಟುಂಬದ ಹಿರಿಯ ಮೃತರಾಗಿರುವವರಿಗೆ ದೂಪ(ದಬಕಾರ್‌)ಸಲ್ಲಿಸುವುದು ಮತ್ತು ಮೃತರ ಸಮಾಧಿಗಳಿಗೆ ಪೂಜೆ ನೈವೇದ್ಯ ನಡೆಸುವುದು ರೂಢಿ ಎಂದು ಹಿರಿಯರು ವಿವರಿಸುತ್ತಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.