![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Nov 18, 2020, 8:33 AM IST
ಲಕ್ನೋ: ಉತ್ತರಪ್ರದೇಶದ ಬುಲಂದ್ಶಹರ್ ಜಿಲ್ಲೆಯ 15 ವರ್ಷದ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾದ ಮೂರು ತಿಂಗಳ ನಂತರ ಮಂಗಳವಾರ (17-11-2020) ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಗಳಿಗೆ ಬೆಂಕಿ ಹಚ್ಚಿ ಕೊಂದಿದ್ದಾರೆಂದು ಸಂತ್ರಸ್ತ ಬಾಲಕಿಯ ತಂದೆ ಆರೋಪಿಸಿದ ಬೆನ್ನಲ್ಲೇ, ಈಗಾಗಲೇ ಜೈಲಿನಲ್ಲಿರುವ ಅತ್ಯಾಚಾರ ಆರೋಪಿಗಳಾದ, ಮೃತಪಟ್ಟ ಬಾಲಕಿಯ ಸಂಬಂಧಿಕ ಮತ್ತು ಇಬ್ಬರು ಸ್ನೇಹಿತರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಅತ್ಯಾಚಾರ ಪ್ರಕರಣದ ಹಿಂಪಡೆಯಲು ಆರೋಪಿಗಳ ಸಂಬಂಧಿ ಮತ್ತು ಅವರ ಸ್ನೇಹಿತರು ಬಾಲಕಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಮೋದಿ-ಬೈಡೆನ್ ಮೊದಲ ಮಾತುಕತೆ: ಕೋವಿಡ್19, ಹವಾಮಾನ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಚರ್ಚೆ
ಆಗಸ್ಟ್ 15 ರಂದು ಅತ್ಯಾಚಾರ ಘಟನೆ ನಡೆದಿತ್ತು. ತಕ್ಷಣವೇ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಆದರೇ ಮಂಗಳವಾರ(17-11-2020) ಬೆಳಿಗ್ಗೆ 8 ಗಂಟೆಗೆ ಸುಟ್ಟ ಗಾಯಗಳೊಂದಿಗೆ ಅತ್ಯಾಚಾರ ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದಳು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಕಳುಹಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಅತ್ಯಾಚಾರ ಆರೋಪಿಗಳ ಕುಟುಂಬದ ಸದಸ್ಯರ ಒತ್ತಡ ಮತ್ತು ಬೆದರಿಕೆಗಳ ನಂತರ ಸಂತ್ರಸ್ತೆಯು ತನಗೆ ತಾನು ಬೆಂಕಿ ಹಚ್ಚಿಕೊಂಡಿದ್ದಾಳೆ ಅನುಮಾನವಿದ್ದು, ಆದರೇ ಆಕೆಯ ತಂದೆಯು, ಬೆಂಕಿ ಹಚ್ಚಿ ಕೊಂದಿದ್ದಾರೆಂದು ಎಫ್ ಆರ್ ದಾಖಲಿಸಿದ್ದರಿಂದ, ನ್ಯಾಯಯುತ ತನಿಖೆ ನಡೆಸಲಾಗುವುದು. ಸದ್ಯಕ್ಕೆ ಬಂಧಿತ ಮೂವರನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಶೇ. 10 ದಾಟದ ಹಾಜರಿ ; ಕ್ಯಾಂಪಸ್ ಪ್ರವೇಶಕ್ಕೆ ಕಾಲೇಜು ವಿದ್ಯಾರ್ಥಿಗಳ ನಿರಾಸಕ್ತಿ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.