ಶಿಕ್ಷಕರ ಭವನ ನಿರ್ವಹಣೆಯಲ್ಲಿ ಅಕ್ರಮ! ಶೂ, ಸಾಕ್ಸ್‌, ಸಮವಸ್ತ್ರ ಖರೀದಿಯಲ್ಲಿ ಅವ್ಯವಹಾರ


Team Udayavani, Nov 19, 2020, 12:45 PM IST

ಶಿಕ್ಷಕರ ಭವನ ನಿರ್ವಹಣೆಯಲ್ಲಿ ಅಕ್ರಮ! ಶೂ, ಸಾಕ್ಸ್‌, ಸಮವಸ್ತ್ರ ಖರೀದಿಯಲ್ಲಿ ಅವ್ಯವಹಾರ

ಅರಕಲಗೂಡು: ಶಿಕ್ಷಕರ ಭವನ ಹಾಗೂ 255 ಶಾಲೆಗಳಲ್ಲಿ ಶೂ, ಸಾಕ್ಸ್‌, ಸಮವಸ್ತ್ರ, ಇತರೆ ಸಾಮಗ್ರಿಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ಜಿಲ್ಲಾ ಮಟ್ಟದ ಲೆಕ್ಕಾ ತನಿಖಾ ತಂಡ ಡಿಡಿಪಿಐ ಮೂಲಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ 59 ಪುಟ ಒಳಗೊಂಡ ವರದಿಯನ್ನು ನೀಡಿದೆ. ಇದು ಲಕ್ಷಾಂತರ ರೂ. ದುರ್ಬಳಕೆ ಮಾಡಿಕೊಂಡಿಕೊಂಡಿದ್ದಾರೆ ಎನ್ನಲಾದ 10 ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂವರು ಕಾರ್ಯದರ್ಶಿ ಒಳಗೊಂಡಂತೆ, ಐವರು (ಶಿಕ್ಷಣ ಇಲಾಖೆ ಕಚೇರಿ) ಸಿಬ್ಬಂದಿಗಳಲ್ಲಿ ನಡುಕ ಹುಟ್ಟಿಸಿದೆ.

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಗೆ ಬರುವ ಪಟ್ಟಣದ ಶಿಕ್ಷಕರ ಭವನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಿಗೆ ವರದಾನವಾಗಿದೆ ಎನ್ನಲಾಗುತ್ತಿದೆ. ಈ ಭವನದಿಂದಾಗಿ ತಾಲೂಕಿಗೆ ಬಿಇಒ ಆಗಿ
ಆಗಮಿಸಲು ಭಾರೀ ಪೈಪೋಟಿಗಳೇ ನಡೆಯುತ್ತಿತ್ತು. ಅಲ್ಲದೆ, ಶಿಕ್ಷಕರ ಸಂಘದ ಪದಾಧಿಕಾರಿಗಳ ಚುನಾವಣೆ, ಯಾವ ಸಾರ್ವತ್ರಿಕ ಚುನಾವಣೆಗೂ ಕಡಿಮೆ ಇಲ್ಲದಂತೆ ನಡೆಯುತ್ತಿದ್ದು, ಭವನ ಒಂದು ರೀತಿ ಅಕ್ಷಯ ಪಾತ್ರೆ ಎಂದೇ ಹೇಳಲಾಗುತ್ತದೆ.

ಜಿಪಂ ಸಭೆಯಲ್ಲಿ ಅವ್ಯವಹಾರ ಸದ್ದು: ಈ ಎಲ್ಲಾ ನ್ಯೂನತೆಗಳನ್ನು ಮನಗಂಡ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ರಾಜಶೇಖರಪ್ಪ, 2018, ಆಗಸ್ಟ್‌,10 ರಂದು ಶಿಕ್ಷಕರ ಭವನದ ಅವ್ಯವಹಾರದ ಬಗ್ಗೆ ತನಿಖೆ ಮಾಡುವಂತೆ ಜಿಲ್ಲಾ ಉಪನಿರ್ದೇಶಕರಿಗೆ ದೂರು ನೀಡಿದ್ದರು. ಇವರ ದೂರಿನನ್ವಯ ಅಧಿಕಾರಿ ಸೋಮನಾಥ ಅವರನ್ನು ತನಿಖೆಗಾಗಿ ನೇಮಿಸಲಾಗಿತ್ತು. ತನಿಖೆ ವೇಳೆ ಭವನದ ಮೇಲಿನ ಭ್ರಷ್ಟಾಚಾರ ಸಾಬೀತಾಗಿತ್ತು. ಇವರ ವರದಿಯಲ್ಲಿಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿ ಸುತ್ತಿದ್ದ ದೇವರಾಜು ಅವರನ್ನು ಅಮಾನತುಗೊಳಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಆಗಿದ್ದ ನಾಗೇಶ ವಿರುದ್ಧ ಕ್ರಮ
ಜರುಗಿಸಲು ಸಾರ್ವತ್ರಿಕ ಶಿಕ್ಷಣ ಇಲಾಖೆಗೆ ತಿಳಿಸಲಾಗಿತ್ತು ಎನ್ನಲಾಗಿದೆ. ಈ ಎಲ್ಲಾ ಗೊಂದಲಗಳನ್ನು ವೀಕ್ಷಿಸುತ್ತಿದ್ದ ಜಿಪಂ ಸದಸ್ಯರು, ಸಾಮಾನ್ಯ ಸಭೆಯಲ್ಲಿ ಈ ಎಲ್ಲಾ ಅವ್ಯವಹಾರದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು.\

ಇದನ್ನೂ ಓದಿ:ವಿಜಯನಗರ ಜಿಲ್ಲೆ ಹಿಂದೆ ಸಚಿವರ ರಿಯಲ್ಎಸ್ಟೇಟ್ ಅಭಿವೃದ್ಧಿ ತಂತ್ರ :ಕುಡತಿನಿ ಶ್ರೀನಿವಾಸ್

ಆರೋಪಿಗಳ ಎದೆಬಡಿತ ಹೆಚ್ಚಳ: ಈ ಬಗ್ಗೆ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಸಿಇಒ, ವಿಶೇಷ ಲೆಕ್ಕ ತನಿಖೆ ಕೈಗೊಂಡು ವರದಿ ಸಲ್ಲಿಸಲು ರೇಷ್ಮೆ, ಕೃಷಿ ಇಲಾಖೆ ಉಪನಿರ್ದೇಶಕರು ಹಾಗೂ ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ
ನಿರ್ದೇಶಕರ ನೇತೃತ್ವದಲ್ಲಿ ತಂಡ ರಚಿಸಿದ್ದರು. ಈ ತಂಡಈಗ ಸಾರ್ವಜನಿಕ ಶಿಕ್ಷಣಇಲಾಖೆಆಯುಕ್ತರಿಗೆ ತನ್ನ ತನಿಖಾ ವರದಿಯನ್ನು ರವಾನೆ ಮಾಡಿದ್ದು, ಭ್ರಷ್ಟಾಚಾರದ ಆರೋಪವನ್ನು ಹೊತ್ತಿರುವ ಅಧಿಕಾರಿಗಳ ಎದೆಬಡಿತ ಹೆಚ್ಚಾಗುವಂತೆ ಮಾಡಿದೆ.

ಶೂ, ಸಾಕ್ಸ್‌ಗಳಲ್ಲೂ ಭ್ರಷ್ಟಾಚಾರ: ಶಾಲಾ ಮಕ್ಕಳಿಗೆ ಗುಣಮಟ್ಟದ ಶೂ ಮತ್ತು ಸಾಕ್ಸ್‌ ನೀಡಲಿ ಎಂಬ ಕಾರಣಕ್ಕೆ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಮುಖ್ಯ ಉಪಾಧ್ಯಾಯರು ಅವರ ಖಾತೆಗೆ ಸರ್ಕಾರ ಹಣ ಜಮಾ ಮಾಡಿತ್ತು. ಆದರೆ, ಮಕ್ಕಳ ಶೂ ಖರೀದಿಯಲ್ಲೂ ಅವ್ಯವಹಾರ ವೆಸಗಿರುವುದು ವಿಶೇಷ ಲೆಕ್ಕಾ ತನಿಖಾ ತಂಡದ ವರದಿಯಿಂದ ಬಹಿರಂಗವಾಗಿದೆ.

ಒಂದೊಂದು ದರ ನಿಗದಿ: ಬಹುತೇಕ ಶಾಲೆಗಳು ಭವಾನಿ ಏಜೆನ್ಸಿ, ಕಭೀರ ಖಾನ್‌, ನಾಸಿರ ಖಾನ್‌, ತಹವೀರ ಖಾನ್‌ ಎಂಬುವರ ಏಜೆನ್ಸಿಗಳಿಂದ ಶೂ, ಸಾಕ್ಸ್‌ ಖರೀದಿಸಲಾಗಿದೆ ಎಂದು ದಾಖಲಿಸಲಾಗಿದೆ. ಆದರೆ, ಒಂದೇ ಕಂಪನಿಯು ಒಂದೊಂದು ಶಾಲೆಗೆ
ಒಂದೊಂದು ದರವನ್ನು ನಿಗದಿ ಮಾಡಿರುವುದು ಅನುಮಾನಕ್ಕೆಕಾರಣವಾಗಿದೆ.

ಯಾವುದೇ ಶಾಲೆಗಳು ನಿಯಮಾನುಸಾರಖರೀದಿಸಿಲ್ಲಎಂದುವರದಿಯಲ್ಲಿ ಶಿಕ್ಷಕರಬಣ್ಣವನ್ನುಬಯಲು ಮಾಡಿದೆ. ಸಮಾಜಕ್ಕೆ ಮಾದರಿಯಾಗಬೇಕಾಗಿದ್ದ ಶಿಕ್ಷಕರೇ ಈ ರೀತಿ ಲೋಪ ಮಾಡಿದರೆ ಹೇಗೆ ಎಂಬುವುದು ಸಾರ್ವಜನಿಕರ ಚರ್ಚೆಯಾಗಿದೆ.
ಒಟ್ಟಾರೆ ಶಿಕ್ಷಣ ಇಲಾಖೆಯಲ್ಲಿ ಆಗಿರುವ ಈ ಎಲ್ಲಾ ಭ್ರಷ್ಟಾಚಾರದ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಶಿಕ್ಷಣ ಇಲಾಖೆ, ಯಾವ ರೀತಿಯಲ್ಲಿ ಕ್ರಮ ಜರುಗಿಸುತ್ತದೆ ಎಂಬುವುದನ್ನುಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.