ಲಾಕ್‌ಡೌನ್‌ ಬಳಿಕ ಹೊಸ ಚಿತ್ರದತ್ತ ಸೆಂಚುರಿ ಸ್ಟಾರ್ : ‌ಶಿವಪ್ಪನಾದ ಶಿವಣ್ಣ


Team Udayavani, Nov 20, 2020, 4:21 PM IST

ಲಾಕ್‌ಡೌನ್‌ ಬಳಿಕ ಹೊಸ ಚಿತ್ರದತ್ತ ಸೆಂಚುರಿ ಸ್ಟಾರ್ : ‌ಶಿವಪ್ಪನಾದ ಶಿವಣ್ಣ

ಲಾಕ್‌ಡೌನ್‌ ನಂತರ ಶಿವರಾಜ್‌ ಕುಮಾರ್‌ ಅವರ ಹೊಸ ಚಿತ್ರಕ್ಕೆ ಮುಹೂರ್ತ ನಡೆದಿದೆ. ಗುರುವಾರ ಅವರ ಹೊಸ ಚಿತ್ರ ಸೆಟ್ಟೇರಿದ್ದು,ಈ ಚಿತ್ರಕ್ಕೆ “ಶಿವಪ್ಪ’ ಎಂದು ಹೆಸರಿಡಲಾಗಿದೆ. ಚಿತ್ರಕ್ಕೆಕಾಯೋ ತಂದೆ ಎಂಬ ಟ್ಯಾಗ್‌ಲೈನ್‌ ಇದೆ. ಇದು ಶಿವರಾಜ್‌ ಕುಮಾರ್‌ ಅವರ 123ನೇ ಸಿನಿಮಾವಾಗಿದ್ದು, ತಮಿಳಿನ ಖ್ಯಾತ ಛಾಯಾಗ್ರಾಹಕ, ನಿರ್ದೇಶಕ ವಿಜಯ್‌ ಮಿಲ್ಟನ್‌ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.

ಚಿತ್ರದಲ್ಲಿ ಧನಂಜಯ್‌, ಪೃಥ್ವಿ ಅಂಬರ್‌ ನಟಿಸುತ್ತಿದ್ದಾರೆ. ನಟಿ ಉಮಾಶ್ರೀ ದೊಡ್ಡ ಗ್ಯಾಪ್‌ನ ನಂತರ ಮತ್ತೆನಟನೆಗೆ ಮರಳಿದ್ದಾರೆ. ಚಿತ್ರದಲ್ಲಿ ಶಶಿಕುಮಾರ್‌ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದು,10 ವರ್ಷಗಳ ನಂತರ ಶಿವಣ್ಣ ಜೊತೆ ನಟಿಸುತ್ತಿದ್ದಾರೆ.

ತಪ್ಪು ಮಾಡಲು ಹೊರಡೋದೇ ದೊಡ್ಡ ತಪ್ಪು ಎಂಬ ಸಂದೇಶದೊಂದಿಗೆ ಈ ಸಿನಿಮಾ ಮಾಡಲಾಗುತ್ತಿದೆ. ಶಿವರಾಜ್‌ಕುಮಾರ್‌ ಇಲ್ಲಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲಾಕ್‌ಡೌನ್‌ ಮುಂಚೆ ಒಪ್ಪಿಕೊಂಡ ಸಿನಿಮಾ ಇದಾಗಿದ್ದು, ಮತ್ತೆ ಚಿತ್ರೀಕರಣಕ್ಕೆ ಮರಳಿರುವುದರಿಂದ ಶಿವಣ್ಣ ಖುಷಿಯಾಗಿದ್ದಾರೆ. ಈ ಬಗ್ಗೆ ಮಾತನಾಡುವ ಅವರು, “ಕಥೆ ಚೆನ್ನಾಗಿದೆ. ಯಾವಾಗ ಚಿತ್ರೀಕರಣ ಆರಂಭವಾಗುತ್ತದೋ ಎಂದು ನಾನು ಕಾಯುತ್ತಿದ್ದೆ. ಇದು ಪಕ್ಕಾ ವಿಜಯ್‌ ಮಿಲ್ಟನ್‌ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎನ್ನುತ್ತಾರೆ.

ಚಿತ್ರ ಸಹಜವಾಗಿ ಬರಲು ಏಕಕಾಲದಲ್ಲಿ ಮೂರು ಕ್ಯಾಮರಾ ಇಟ್ಟು ಚಿತ್ರೀಕರಿಸಿಕೊಳ್ಳುವ ಪ್ಲ್ರಾನ್‌ ಚಿತ್ರತಂಡಕ್ಕಿದೆ. ಚಿತ್ರದಲ್ಲಿ ಏಳು ಫೈಟ್‌ ಇದ್ದು, ವಿಭಿನ್ನವಾಗಿ ಚಿತ್ರೀಕರಿಸುವ ಯೋಚನೆ ಚಿತ್ರತಂಡದ್ದು. ಒಂದು ವಾರ ಬೆಂಗಳೂರಿನಲ್ಲಿ ಹಾಗೂ ಉಳಿದಂತೆ ಗೋಕರ್ಣದಲ್ಲಿ ಶೂಟಿಂಗ್‌ನಡೆಯಲಿದೆ. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಆಯ್ಕೆ ಇನ್ನಷ್ಟೇ ಆಗಬೇಕಿದೆ. ಚಿತ್ರವನ್ನುಕೃಷ್ಣ ಕ್ರಿಯೇಶನ್ಸ್‌ನಡಿ ಕೃಷ್ಣ ಸಾರ್ಥಕ್‌ ನಿರ್ಮಿಸುತ್ತಿದ್ದಾರೆ. ಚಿತ್ರ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಎಂಟು ತಿಂಗಳ ನಂತರ ಹೊಸ ಸಿನಿಮಾ ತೆರೆಗೆ

ಸದ್ಯಕ್ಕಿಲ್ಲ ಎಸ್‌ಆರ್‌ಕೆ, ಆರ್‌ಡಿಎಕ್ಸ್‌ : ಶಿವರಾಜ್‌ಕುಮಾರ್‌ಈ ಹಿಂದೆ “ಎಸ್‌ಆರ್ ಕೆ’ ಹಾಗೂ”ಆರ್‌ಡಿಎಕ್ಸ್‌’ ಎಂಬ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಆದರೆ, ಸದ್ಯಕ್ಕೆ ಆ ಸಿನಿಮಾಗಳು ಆರಂಭವಾಗುತ್ತಿಲ್ಲ. ಬೇರೆಬೇರೆ ಕಾರಣಗಳಿಂದ ಆ ಚಿತ್ರಗಳ ಚಿತ್ರೀಕರಣಮುಂದೆ ಹೋಗಿವೆ. ಸದ್ಯ ಶಿವಣ್ಣ “ಶಿವಪ್ಪ’ನಲ್ಲಿ ಬಿಝಿ. “ಭಜರಂಗಿ-2′ ನಂತರ “ಶಿವಪ್ಪ’ ಚಿತ್ರವೇ ತೆರೆಗೆ ಬರಲಿದೆ.

ಕೋವಿಡ್ ಬಳಿಕ ಆರು ಸಿನಿಮಾಗಳಿಗೆ ಗ್ರೀನ್‌ ಸಿಗ್ನಲ್‌ : ಶಿವರಾಜ್‌ಕುಮಾರ್‌ ಕೋವಿಡ್ ಲಾಕ್‌ಡೌನ್‌ ವೇಳೆ ಸುಮ್ಮನೆ ಮನೆಯಲ್ಲಿಕುಳಿತಿಲ್ಲ. ಸಾಕಷ್ಟು ಸಿನಿಮಾ, ವೆಬ್‌ ಸೀರಿಸ್‌ಗಳನ್ನು ನೋಡಿದ್ದಾರೆ. ಜೊತೆಗೆ ಹೊಸಕಥೆಗಳನ್ನು ಕೇಳಿದ್ದಾರೆ. ಫೋನ್‌ನಲ್ಲೇ ಕಥೆ ಕೇಳಿ ಇಷ್ಟಪಟ್ಟ ಶಿವಣ್ಣ, ಆರು ಸಿನಿಮಾಗಳಿಗೆ ಗ್ರೀನ್‌ ಸಿಗ್ನಲ್‌ಕೊಟ್ಟಿದ್ದಾರೆ. ಹಾಗಾಗಿ, ಹೊಸದಾಗಿ ಶಿವಣ್ಣಕೈಯಲ್ಲಿ ಆರು ಸಿನಿಮಾಗಳಿವೆ. ಈ ಬಗ್ಗೆ ಮಾತನಾಡುವ ಶಿವಣ್ಣ, “ಕೋವಿಡ್ ಸಮಯದಲ್ಲಿ ನನಗೇನು ಮನೆಯಲ್ಲಿದ್ದು, ಬೇಸರವಾಗಿಲ್ಲ. ನಾನು ಸಾಕಷ್ಟು ಕಥೆ ಕೇಳಿದೆ. ಹೊಸದಾಗಿ ಆರು ಸಿನಿಮಾ ಒಪ್ಪಿಕೊಂಡಿದ್ದೇನೆ. ಆ ಸಿನಿಮಾಗಳ ಬಗ್ಗೆ ಆಯಾ ಸಮಯ ಬಂದಾಗ ಹೇಳುತ್ತೇನೆ’ ಎನ್ನುತ್ತಾರೆ.

ಶಿವರಾಜ್‌ ಕುಮಾರ್‌ ಅವರನ್ನೊಳಗೊಂಡ ಚಿತ್ರರಂಗದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಆದರೆ, ಈವರೆಗೆ ಸರ್ಕಾರದಿಂದ ಯಾವುದೇ ನೆರವು ಬಿಡುಗಡೆಯಾಗಿಲ್ಲ. ಈ ಬಗ್ಗೆ ಮಾತನಾಡುವ ಶಿವರಾಜ್‌ಕುಮಾರ್‌, “ನಮಗೆ ಸರ್ಕಾರದ ಮೇಲೆ ಭರವಸೆ ಇದೆ. ಸ್ವಲ್ಪ ದಿನ ತಡವಾದರೂ ಚಿತ್ರರಂಗದ ಕಷ್ಟಕ್ಕೆ ಸರ್ಕಾರ ಸ್ಪಂದಿಸುವ ವಿಶ್ವಾಸವಿದೆ. ಎಲ್ಲರಿಗೂ ಅವರವರದ್ದೇ ಆದ ಸಮಸ್ಯೆಗಳು ಇರುತ್ತವೆ’ ಎನ್ನುತ್ತಾರೆ ಶಿವಣ್ಣ.

ಗಾಜನೂರಿನ ತೋಟದ ಕೆಲಸ :  ಶಿವರಾಜ್‌ಕುಮಾರ್‌ ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಸಿನಿಮಾ ಕೆಲಸದ ಜೊತೆಗೆ ಕೃಷಿ ಕೆಲಸ ಕೂಡಾ ಮಾಡಿದ್ದಾರೆ. ಗಾಜನೂರಿನಲ್ಲಿರುವ ಜಮೀನಿನ ಕೆಲಸವನ್ನು ಮಾಡಿಸಿದ್ದಾರೆ. ಈ ಮೂಲಕ ಕೃಷಿಯತ್ತವೂ ಶಿವಣ್ಣ ಒಲವು ತೋರಿದ್ದಾರೆ.

 

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.