ಬಂಧಿತ ಸಿದ್ದಿಕ್ ಕಪ್ಪನ್ ಪತ್ರಕರ್ತನಲ್ಲ, ಕೇರಳದ ಪಿಎಫ್ಐ ಕಾರ್ಯದರ್ಶಿ!
ಹೇಬಿಯಸ್ ಕಾರ್ಪಸ್ ವಿಚಾರಣೆ ವೇಳೆ ಸುಪ್ರೀಂಗೆ ಉತ್ತರಪ್ರದೇಶದ ಪೊಲೀಸರ ಮಾಹಿತಿ
Team Udayavani, Nov 21, 2020, 7:14 AM IST
ಹೊಸದಿಲ್ಲಿ: ಉತ್ತರಪ್ರದೇಶದ ಹತ್ರಾಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ, ಸ್ಥಳಕ್ಕೆ ತೆರಳಲು ಯತ್ನಿಸಿದ್ದ ಕೇರಳದ ಸಿದ್ದಿಕ್ ಕಪ್ಪನ್ ಪತ್ರಕರ್ತನಲ್ಲ. ಆತ ನಿಜಕ್ಕೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಚೇರಿ ಕಾರ್ಯದರ್ಶಿ ಎಂದು ಉತ್ತರಪ್ರದೇಶ ಪೊಲೀಸರು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸಿದ್ದಿಕ್ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದ ಪತ್ರಿಕೆ 2018ಕ್ಕೇ ಮುಚ್ಚಿಹೋಗಿದೆ. ಆತ ಪತ್ರಕರ್ತನ ಸೋಗು ಧರಿಸಿ ಹತ್ರಾಸ್ನಲ್ಲಿ ವ್ಯವಸ್ಥಿತವಾಗಿ ಜಾತಿ ಗಲಭೆಯೆಬ್ಬಿಸಲು ಯತ್ನಿಸಿದ್ದ, ತನಿಖೆಯಿಂದ ಈ ಸಂಗತಿಗಳು ಗೊತ್ತಾಗಿವೆ. ಆತ ನಮಗೆ ಆರಂಭದಲ್ಲಿ ತನ್ನ ನೈಜ ವಿಳಾಸ ತಿಳಿಸದೇ ಏಮಾರಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಸಿದ್ದಿಕ್ ಬಂಧನ ಪ್ರಶ್ನಿಸಿ ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ವೇಳೆ ಉತ್ತರಪ್ರದೇಶ ಪೊಲೀಸರು ಸುಪ್ರೀಂ ಕೋರ್ಟ್ಗೆ ಈ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ವಕೀಲರನ್ನು ಭೇಟಿಯಾಗಲು ಸಿದ್ದಿಕ್ಗೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ದಲಿತ ಮಹಿಳೆಯನ್ನು ಮೇಲ್ವರ್ಗದ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಿ ಸಾಯಿಸಿದ ಪ್ರಕರಣದ ಬೆನ್ನಲ್ಲೇ, ಉತ್ತರಪ್ರದೇಶದ ಹತ್ರಾಸ್ಗೆ ತೆರಳಲು ಸಿದ್ದಿಕ್ ಹೊರಟಿದ್ದರು. ಅ.5ರಂದು ಅವರನ್ನು ಮಾರ್ಗಮಧ್ಯೆ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Explainer: FBI ವಾಂಟೆಡ್ ಲಿಸ್ಟ್ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್ ಯಾದವ್?
Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.