ಮಂಗಳೂರು ವಿ.ವಿ. ಪದವಿ ಫಲಿತಾಂಶ; ಸರ್ವರ್ ಸಮಸ್ಯೆ ನಿವಾರಣೆ
Team Udayavani, Nov 21, 2020, 7:50 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅಂತಿಮ ಪದವಿ ಪರೀಕ್ಷಾ ಫಲಿತಾಂಶ ಪ್ರಕಟನೆಯಲ್ಲಿ ಉಂಟಾಗಿದ್ದ ಗೊಂದಲವು ಶೇ. 99ರಷ್ಟು ನಿವಾರಣೆಯಾಗಿದೆ. ಶನಿವಾರ ಮಧ್ಯಾಹ್ನದೊಳಗೆ ಎಲ್ಲ ವಿದ್ಯಾರ್ಥಿಗಳಿಗೆ ಫಲಿತಾಂಶ ದೊರಕುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಿ.ವಿ. ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ವಿ.ವಿ.ಯ ಅಂತಿಮ ಪದವಿ ಫಲಿತಾಂಶ ಕಳೆದ ರವಿವಾರ ಮತ್ತು ಸೋಮವಾರ ಪ್ರಕಟಿಸಲಾಗಿತ್ತು. ಆದರೆ ಸರ್ವರ್ ಸಮಸ್ಯೆಯಿಂದಾಗಿ ಕೆಲವೇ ವಿದ್ಯಾರ್ಥಿಗಳು ಫಲಿತಾಂಶ ಪಡೆದರೆ, ಬಹುತೇಕರಿಗೆ ಫಲಿತಾಂಶ ಲಭ್ಯವಾಗಿರಲಿಲ್ಲ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದರು. ವಿ.ವಿ. ಸಂಬಂಧಪಟ್ಟವರು ಸಮಸ್ಯೆ ನಿವಾರಣೆಗೆ ಪ್ರಯತ್ನ ಪಡುತ್ತಿದ್ದು, ಈಗಾಗಲೇ ಶೇ. 99ರಷ್ಟು ನಿವಾರಣೆಯಾಗಿದೆ. ವಿದ್ಯಾರ್ಥಿಗಳ ಗೊಂದಲ ಪರಿಹರಿಸಿ ಫಲಿತಾಂಶ ಒದಗಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿ.ವಿ. ಕುಲಸಚಿವ (ಪರೀಕ್ಷಾಂಗ) ಪ್ರೊ| ಪಿ. ಎಲ್. ಧರ್ಮ ತಿಳಿಸಿದ್ದಾರೆ.
ದಾಖಲಾತಿ ನ. 30ರ ವರೆಗೆ ವಿಸ್ತರಣೆ
ಫಲಿತಾಂಶ ಪ್ರಕಟನೆಯಲ್ಲಿ ಉಂಟಾದ ಗೊಂದಲದ ಕಾರಣ ದಿಂದಾಗಿ ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪ್ರಕ್ರಿಯೆಯನ್ನು ವಿವಿ ಮುಂದೂಡಿದೆ.
ಸ್ನಾತಕೋತ್ತರ ಪದವಿ ಸೇರ್ಪಡೆಗೆ ದಾಖಲಾತಿ ಪ್ರಕ್ರಿಯೆಗೆ ಕೊನೆಯ ದಿನಾಂಕವನ್ನು ನ. 21ಕ್ಕೆ ನಿಗದಿ ಪಡಿಸಲಾಗಿತ್ತು. ಆದರೆ ಸರ್ವರ್ ಸಮಸ್ಯೆ ಯಿಂದಾಗಿ ಬಹುತೇಕ ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯ ವಾಗದ ಕಾರಣ ನ. 30ರ ವರೆಗೆ ದಾಖಲಾತಿ ಅವಧಿಯನ್ನು ವಿಸ್ತರಿಸಲಾಗಿದೆ. ಮಂಗಳೂರು ವಿ.ವಿ.ಯ ಸ್ನಾತಕೋತ್ತರ ವಿಭಾಗಗಳು/ವಿ.ವಿ. ಕಾಲೇಜು ಮಂಗಳೂರು/ವಿ.ವಿ. ಸಂಧ್ಯಾ ಕಾಲೇಜು ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪಕಾಲೇಜು ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿವಿಯ ಸಂಯೋಜಿತ ಕಾಲೇಜುಗಳು ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲ್ಪಡುವ ವಿವಿಧ ಸ್ನಾತ ಕೋತ್ತರ ಕಾರ್ಯಕ್ರಮಗಳ ಪ್ರವೇಶಾತಿಗೆ ನ. 30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಪಿ.ಜಿ. ಡಿಪ್ಲೊಮಾ ಮತ್ತು ಸರ್ಟಿಫಿಕೆಟ್ ಕಾರ್ಯಕ್ರಮಗಳ ಭರ್ತಿ ಮಾಡಿದ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರವೇಶ ಪರೀಕ್ಷೆ ಹಾಗೂ ಇನ್ನಿತರ ಮಾಹಿತಿಗಳನ್ನು ಮಂಗಳೂರು ವಿ.ವಿ. ವೆಬ್ಸೈಟ್ www.mangaloreuniversity.ac.in ನಲ್ಲಿ ಪಡೆಯಬಹುದು ಎಂದು ಕುಲಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudubidire: 77 ಕೋ.ರೂ. ವೆಚ್ಚದ ಅಮೃತ್ 2.0 ನೀರಿನ ಯೋಜನೆಗೆ ಚಾಲನೆ
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ
Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು
Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.