![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 22, 2020, 7:33 AM IST
ಹೊಸದಿಲ್ಲಿ: ಸನ್ರೈಸರ್ ಹೈದರಾಬಾದ್ ತಂಡದ ಟಿ. ನಟರಾಜನ್ 13ನೇ ಐಪಿಎಲ್ ಕೂಟದ ನಿಜವಾದ ಹೀರೋ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ದೇವ್ ಪ್ರಶಂಸಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಕಪಿಲ್, “ಸದಾ ಬದಲಾಗುತ್ತಿರುವ ವೇಗದ ಬೌಲಿಂಗ್ನಲ್ಲಿ ನಿಖರವಾದ ಯಾರ್ಕರ್ಗಳನ್ನು ಹಾಕಿ ಮೂಲಭೂತ ವಿಷಯಗಳಿಗೆ ಅಂಟಿಕೊಳ್ಳುವ ಮೂಲಕ ತಮಿಳುನಾಡಿನ ವೇಗಿಯಿಂದ ನಾನು ಹೆಚ್ಚು ಪ್ರಭಾವಿತನಾಗಿದ್ದೇನೆ’ ಎಂದರು.
“ಟಿ. ನಟರಾಜನ್ 2020ರ ಐಪಿಎಲ್ ಹೀರೋ. ಈ ವೇಗಿ ಯಾವುದೇ ಭಯವಿಲ್ಲದೆ ಅನೇಕ ಸ್ಟಾರ್ ಆಟಗಾರರಿಗೆ ಯಾರ್ಕರ್ ಎಸೆದು ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೌಲಿಂಗ್ನಲ್ಲಿ ಯಾರ್ಕರ್ ಅತ್ಯುತ್ತಮ ಎಸೆತ. ಈಗ ಮಾತ್ರವಲ್ಲ, ಸುಮಾರು ನೂರು ವರ್ಷಗಳಿಂದಲೂ ಇದು ವೇಗಿಗಳ ಪಾಲಿನ ಪ್ರಮುಖ ಅಸ್ತ್ರವಾಗಿದೆ’ ಎಂದು ಕಪಿಲ್ ಹೇಳಿದರು.
ಬೌಲಿಂಗ್ ಓಕೆ; ಬ್ಯಾಟಿಂಗ್?
ಆಸ್ಟ್ರೇಲಿಯ ಪ್ರವಾಸದಲ್ಲಿ ಭಾರತದ ಬೌಲಿಂಗ್ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ, ಆದರೆ ಬ್ಯಾಟಿಂಗ್ ಸಾಮರ್ಥ್ಯ ತುಸು ಅನುಮಾನ ಮೂಡಿಸುತ್ತದೆ ಎಂದು ಕಪಿಲ್ದೇವ್ ಹೇಳಿದರು.
“ನಮ್ಮ ಪೇಸ್ ಬೌಲಿಂಗ್ ಉತ್ತಮ ಮಟ್ಟದಲ್ಲಿದೆ. ಆದರೆ ಇನ್ನಿಂಗ್ಸ್ ಒಂದರಲ್ಲಿ ನಮ್ಮ ಬ್ಯಾಟ್ ಮನ್ 400 ರನ್ ಪೇರಿಸಲು ಶಕ್ತರೇ ಎಂಬುದನ್ನು ಯೋಚಿಸಬೇಕಾಗುತ್ತದೆ. ಏಕೆಂದರೆ 400 ರನ್ ಬಾರಿಸದೇ ಟೆಸ್ಟ್ ಪಂದ್ಯವನ್ನು ಉಳಿಸಿಕೊಳ್ಳಲು ಸಾಧ್ಯವಾಗದು. ಇದನ್ನು ಸಾಧಿಸಲು ಶಕ್ತರಾದರೆ ಯಾವುದೇ ಸಮಸ್ಯೆ ಇಲ್ಲ ಎಂದರ್ಥ’ ಎಂಬುದಾಗಿ ಕಪಿಲ್ ಅಭಿಪ್ರಾಯಪಟ್ಟರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.