
ಮಧ್ಯಪ್ರದೇಶದಲ್ಲಿ ಜಾರಿಯಾಗಲಿದೆ ‘ಗೋ ಸೆಸ್’ ! ಗೋ ಸಂಪುಟ ಸಭೆಯಲ್ಲಿ ತೀರ್ಮಾನ
Team Udayavani, Nov 23, 2020, 6:09 PM IST

ಭೋಪಾಲ: ಮಧ್ಯಪ್ರದೇಶದಲ್ಲಿ 4 ಸಾವಿರ ಗೋಶಾಲೆಗಳ ನಿರ್ಮಾಣಕ್ಕೆ “ಕೌ ಸೆಸ್'( ಗೋ ಸೆಸ್) ವಿಧಿಸಲು ತೀರ್ಮಾನಿಸಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಭಾನುವಾರ ನಡೆದ ಮೊದಲ “ಗೋ ಸಂಪುಟ’ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅದನ್ನು ಖಾಸಗಿ – ಸರ್ಕಾರಿ ಸಹಭಾಗಿತ್ವದಲ್ಲಿ ನಿರ್ಮಿಸುವ ನಿರ್ಧಾರಕ್ಕೆ ಬರಲಾಗಿದೆ.
ಗೋಶಾಲೆಯಲ್ಲಿಯೇ ಬೆರಣಿ, ಹಾಲಿನ ಪುಡಿ ಸೇರಿದಂತೆ ಹಲವು ಉಪ ಉತ್ಪನ್ನಗಳನ್ನು ಖಾಸಗಿ ಸಹ ಭಾಗಿತ್ವದಲ್ಲಿ ತಯಾರಿಸುವುದರ ಬಗ್ಗೆಯೂ ಸಮ್ಮತಿ ಸೂಚಿಸಲಾಗಿದೆ.
ಗೋ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಚೌಹಾಣ್ ಅಗರ್-ಮಾಲ್ವಾ ಸಮೀಪ ಇರುವ ಸಲಾರಿಯಾ ಗ್ರಾಮದಲ್ಲಿರುವ ದೇಶದ ಮೊದಲ ಗೋ ಅಭಯಾರಣ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಚೌಹಾಣ್ “ಗೋ ಶಾಲೆ ನಿರ್ಮಿಸಲು ಮತ್ತು ಅದರ ನಿರ್ವಹಣೆಗಾಗಿ ಗೋ ಸೆಸ್ ವಿಧಿಸಲು ತೀರ್ಮಾನಿಸಲಾಗಿದೆ’ ಎಂದರು.
ಇದನ್ನೂ ಓದಿ:ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಆರೋಗ್ಯ ಮತ್ತಷ್ಟು ಗಂಭೀರ
ಇದರ ಜತೆಗೆ ಸಭೆಯಲ್ಲಿ ಗೋವಿಗೆ ತಾಯಿಯ ಸ್ಥಾನ ನೀಡುವ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗಿದೆ. ಜತೆಗೆ ಅಡುಗೆ ಮನೆಯಲ್ಲಿ ಸಗಣಿಯ ಬೆರಣಿಗಳನ್ನು ಬಳಕೆ ಮಾಡುವುದಕ್ಕೆ, ಗೋ ಮೂತ್ರವನ್ನು ವೈದ್ಯಕೀಯ ಬಳಕೆಗೆ ಮತ್ತು ಕೀಟನಾಶಕಗಳ ಸ್ಥಾನದಲ್ಲಿ ಬಳಕೆ ಮಾಡುವುದರ ಬಗ್ಗೆ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.