60ದೇವಾಲಯ ಜೀರ್ಣೋದ್ಧಾರ

ನೀರಾವರಿ ಇಲಾಖೆ ಹಣದಲ್ಲಿದೇಗುಲಗಳ ಅಭಿವೃದ್ಧಿ: ಶಾಸಕ ಎಚ್‌.ಡಿ.ರೇವಣ್ಣ

Team Udayavani, Nov 25, 2020, 1:14 PM IST

H.-D.-Revanna

ಹೊಳೆನರಸೀಪುರ: ತಾಲೂಕಿನ ಗ್ರಾಮೀಣ ಪ್ರದೇಶದ 60ಕ್ಕೂ ಹೆಚ್ಚು ದೇಗುಲ ಪುನರುಜ್ಜೀವನಕ್ಕೆ ನೀರಾವರಿ ಇಲಾಖೆಯಿಂದ ‌ ಹಣ ನೀಡಲಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್‌.ಡಿ.ರೇವಣ್ಣ ನುಡಿದರು.

ತಾಲೂಕಿನ ಹಳೇಕೋಟೆ ಹೋಬಳಿ ಚನ್ನಾಪುರ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿ ದೇವಾಲಯ ಉದ್ಘಾಟನೆ ಹಾಗೂ ದೇವತಾ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ, ಚನ್ನಾಪುರ ತಮ್ಮ ತಂದೆಯವರ ರಾಜಕೀಯ ಜೀವನಕ್ಕೆ ಹೆಚ್ಚು ಒತ್ತಾಸೆ ನೀಡಿದ ಗ್ರಾಮ. ಅದೇ ರೀತಿ ತಮಗೂ 30 ವರ್ಷಗಳಿಂದ ಒತ್ತಾಸೆ ನೀಡುತ್ತಿದೆ ಎಂದು ತಿಳಿಸಿದರು.

ಇತರೆ ವಿಧಾನಸಭಾ ಕ್ಷೇತ್ರದಲ್ಲಿ  ನೀರಾವರಿ ಇಲಾಖೆಯ ಅನುದಾನದಲಿ ದೇವಾ ಲಯಗಳ ಅಭಿವೃದ್ಧಿ ಆಗಿಲ್ಲ, ಆ ಕಾರ್ಯ ಹೊಳೆನರಸೀಪುರದಲ್ಲಿ ನೆರವೇರಿದೆ. ತಾವು, ತಮ್ಮ ಕುಟುಂಬ ಜಿಲ್ಲೆಯಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ  ಸಾಕಷ್ಟು ಕೆಲಸ ಮಾಡಿದೆ. ಅದರಲ್ಲೂ ಪಟ್ಟಣದಲ್ಲಿರುವ ಕಾಲೇಜುಗಳು, ಬೇರೆ ದೊಡ್ಡ ನಗರಗಳಲ್ಲೂ ಇರಲು ಸಾಧ್ಯವಿಲ್ಲ, ಅಂತಹ ಸಾಕಷ್ಟು ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಇತ್ತೀಚಿನ  ‌ ದಿನಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವ  ‌ ನೆಪದಲ್ಲಿ ಲಕ್ಷಾಂತರ ರೂ. ಸುಲಿಗೆ ಮಾಡುತ್ತಿವೆ. ಇದನ್ನು ಅರಿತ ತಾವು , ಸರ್ಕಾರಿ ಕಾಲೇಜುಗಳನ್ನು ತಂದು, ಗ್ರಾಮೀಣಪ್ರದೇಶದ ಶ್ರೀಸಾಮಾನ್ಯನ ಮಕ್ಕಳು ಸಹ ಉನ್ನತ ವ್ಯಾಸಂಗ ಮಾಡಿ, ಅವರಿಗೂ ಸೂಕ್ತ ಸ್ಥಾನಮಾನ ಸಿಗಲಿ ಎಂಬುದು ತಮ್ಮ ಆಶಯ ತಮ್ಮದಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಗೋವಾದಲ್ಲಿ ಸೋನಿಯಾ ಗಾಂಧಿ ಸೈಕ್ಲಿಂಗ್: ವಿಡಿಯೋ ವೈರಲ್

ಶ್ರೀಗುರು ಸಿದ್ದರಾಮೇಶ್ವರ, ಶ್ರೀರಾಮಯೋಗೇಶ್ವರ, ಬೇಬಿ ಮಠದ ಮಲ್ಲಿಕಾರ್ಜನ ಸ್ವಾಮೀಜಿ ದಿವ್ಯಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಪೂಜಾ ಕಾರ್ಯದ ನೇತೃತ್ವವನ್ನು ತೇಜೂರು ಸಿದ್ದ ರಾಮೇಶ್ವರ ಶಿವಯೋಗಿ ಮಠದ ಕಲ್ಯಾಣ ಸ್ವಾಮೀಜಿ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಜೆಡಿಎಸ್‌ ಮುಖಂಡ ಎಚ್‌.ಎನ್‌. ದೇವೇಗೌಡ, ತಹಶೀಲ್ದಾರ್‌ ಕೆ.ಆರ್‌. ಶ್ರೀನಿವಾಸ್‌, ತಾಲೂಕು ಪಂಚಾಯಿತಿ ಇಒ ಕೆ.ಯೋಗೇಶ್‌, ಹಳ್ಳಿಮೈಸೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್‌.ಎಸ್‌. ಪ್ರಭುಶಂಕರ್‌, ಗ್ರಾಮ¨ ‌ ಮುಖಂಡ, ಗ್ರಾಪಂ ಸದಸ್ಯ ವಿರೂಪಾಕ್ಷ, ಸಿ.ಎನ್‌.ಬಸಪ್ಪ, ವಿಶ್ವನಾಥ್‌, ಗುರುರಾಜ್‌ ಮತ್ತಿತರರು ಭಾಗಹಿಸಿದ್ದರು.

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಸ್ವಾಮೀಜಿ, ಕಲ್ಯಾಣ ಸ್ವಾಮೀಜಿ ಅವರು  ಆಶೀರ್ವಚನನೀಡಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.

ಭಕ್ತರಿಗೆ ತೊಂದರೆ ಆಗದಂತೆ ಪೂಜೆಕಾರ್ಯ ಮುಂದುವರಿಸಿ

ಮುಜರಾಯಿ ದೇವಾಲಯಗಳ ಅರ್ಚಕರು ಭಕ್ತರಿಗೆ ತೊಂದರೆ ಆಗದಂತೆ ತಮ್ಮ ದೈನಂದಿನ ಕರ್ತವ್ಯ ನಡೆಸಿಕೊಂಡು ಹೋಗಬೇಕೆಂದು ಮಾಜಿ ಸಚಿವ, ಶಾಸಕ ಎಚ್‌.ಡಿ.ರೇವಣ್ಣ ನುಡಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ತಾಲೂಕಿನ 188 ದೇವಾಲಯಗಳ ಅರ್ಚಕರಿಗೆ 36 ಲಕ್ಷ ರೂ. ತಸ್ಥಿಕ್‌ ಹಣ ವಿತರಣೆ ಮಾಡಿ ಮಾತನಾಡಿದ ಅವರು,ಅರ್ಚಕರು ಭಕ್ತರಿಗೆ ತೊಂದರೆ ಆಗದಂತೆ ಉತ್ತಮವಾಗಿ ಪೂಜಾ ಕಾರ್ಯಕ್ರಮಗಳನ್ನು  ನಡೆಸಿಕೊಂಡು ಹೋಗುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಕೆ.ಆರ್‌. ಶ್ರೀನಿವಾಸ್‌, ಗ್ರೇಡ್‌-2 ತಹಶೀಲ್ದಾರ್‌ ರವಿ, ಕಂದಾಯ ಮತ್ತು ಮುಜರಾಯಿ ಇಲಾಖೆ ಸಿಬ್ಬಂದಿ, ಕಂದಾಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.