ಪಿಂಚಣಿ ಗೋಲ್‌ಮಾಲ್‌; ಸಂಧ್ಯಾ ಸುರಕ್ಷಾ ಸಹಿತ ಮಾಸಾಶನ ಯೋಜನೆಗಳಲ್ಲಿ ವಂಚನೆ

50 ಸಾವಿರ ಪ್ರಕರಣಗಳ ಪತ್ತೆ

Team Udayavani, Nov 26, 2020, 6:05 AM IST

ಪಿಂಚಣಿ ಗೋಲ್‌ಮಾಲ್‌; ಸಂಧ್ಯಾ ಸುರಕ್ಷಾ ಸಹಿತ ಮಾಸಾಶನ ಯೋಜನೆಗಳಲ್ಲಿ ವಂಚನೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಒಬ್ಬನೇ ಫ‌ಲಾನುಭವಿ; ಎರಡು ಕಡೆ ಸಂಧ್ಯಾ ಸುರಕ್ಷಾ ಪಿಂಚಣಿ ! ಇದು ಎಲ್ಲ ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರಿಗೆ ಸಾಮಾಜಿಕ ಭದ್ರತೆ ನೀಡುವ ಸಲುವಾಗಿ ರೂಪಿಸಿರುವ “ಸಂಧ್ಯಾಸುರಕ್ಷಾ’ ಸೇರಿದಂತೆ ವಿವಿಧ ಮಾಸಾಶನ ಯೋಜನೆಗಳಲ್ಲಿ ಆಗುತ್ತಿರುವ ಗೋಲ್‌ಮಾಲ್‌.

ವಿಶೇಷವೆಂದರೆ ಈ ಪಿಂಚಣಿ ಗೋಲ್‌ಮಾಲ್‌ ಪತ್ತೆಗೆ ನೆರವಾಗಿರುವುದು ಆಧಾರ್‌ ಕಾರ್ಡ್‌ ಜೋಡಣೆ. ಯೋಜನೆಯಲ್ಲಿ ದುರುಪಯೋಗವಾಗುತ್ತಿದೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಆಧಾರ್‌ ಕಾರ್ಡ್‌ ಜೋಡಣೆ ಮಾಡಿದಾಗ ಫ‌ಲಾನುಭವಿಗಳ ಹೆಸರು ಎರಡೆರಡು ಕಡೆ ಪಡಿತರ ಚೀಟಿಯಲ್ಲಿ ದಾಖಲಾಗಿರುವುದು ಪತ್ತೆಯಾಗಿದೆ. ರಾಜ್ಯದಲ್ಲಿ ಇಂತಹ 50 ಸಾವಿರ ನಕಲಿ ಫ‌ಲಾನುಭವಿಗಳು ಸಿಕ್ಕಿಬಿದ್ದಿದ್ದಾರೆ.

ಗೋಲ್‌ಮಾಲ್‌ ಹೇಗೆ?
ಉದಾಹರಣೆಗೆ ತುಮಕೂರಿನಲ್ಲಿರುವ ವ್ಯಕ್ತಿ ಅಲ್ಲಿ ಪಡೆದಿರುವ ಪಡಿತರ ಚೀಟಿಯಲ್ಲಿ ತನ್ನ ವೃದ್ಧ ತಂದೆ-ತಾಯಿ ಹೆಸರು ಸೇರ್ಪಡೆ ಮಾಡಿರುತ್ತಾನೆ. ಬಳಿಕ ಚಿಕ್ಕಬಳ್ಳಾಪುರ ಅಥವಾ ಕೋಲಾರದಲ್ಲಿನ ತನ್ನ ಸ್ವಗ್ರಾಮದಲ್ಲಿನ ಪಡಿತರ ಚೀಟಿಯಲ್ಲೂ ತಂದೆ-ತಾಯಿಯ ಹೆಸರು ಸೇರಿಸಿರುತ್ತಾನೆ. ಕೆಲವೆಡೆ ಮಧ್ಯವರ್ತಿಗಳು ಹಿರಿಯ ನಾಗರಿಕರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಮಾಸಾಶನ ಪಡೆಯುತ್ತಿದ್ದಾರೆ.
ಶೇ. 95.6 ಪೂರ್ಣ ಆಧಾರ್‌ ಜೋಡಣೆ ಕಾರ್ಯ ಶೇ. 95.6ರಷ್ಟು ಪೂರ್ಣಗೊಂಡಿದೆ. ಸಿಕ್ಕಿಬಿದ್ದಿರುವ 50 ಸಾವಿರ ಪ್ರಕರಣಗಳ ನೈಜತೆ ಪರಿಶೀಲನೆಗೆ ವಾರ್ಡ್‌, ಗ್ರಾಮ ಹಾಗೂ ತಾಲೂಕು ಹಂತದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬ್ಯಾಂಕ್‌ ಅಕೌಂಟ್‌ ಲಿಂಕ್‌
ಶೇ. 100ರಷ್ಟು ಆಧಾರ್‌ ಜೋಡಣೆಯಾದ ತತ್‌ಕ್ಷಣ ಬ್ಯಾಂಕ್‌ ಖಾತೆಗೆ ಬಾಕಿ ಸಮೇತ ಮಾಸಾಶನ ಹಣ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ.

ಪಿಂಚಣಿ ಯೋಜನೆಗಳು
ರಾಜ್ಯದಲ್ಲಿ ಕಂದಾಯ ಇಲಾಖೆಯಡಿ ಜಾರಿಯಲ್ಲಿರುವ ವೃದ್ಧಾಪ್ಯ, ಸಂಧ್ಯಾಸುರಕ್ಷಾ, ನಿರ್ಗತಿಕ ವಿಧವಾ, ಮನಸ್ವಿನಿ, ಮೈತ್ರಿ ಯೋಜನೆಗಳನ್ನು ಜಾರಿಗೊಳಿಸಿ 600ರಿಂದ 1 ಸಾವಿರ ರೂ. ವರೆಗೆ ಮಾಸಾಶನ ನೀಡಲಾಗುತ್ತಿದೆ. ಒಟ್ಟು 49 ಲಕ್ಷ ಫ‌ಲಾನುಭವಿಗಳಿದ್ದಾರೆ. ಸಂಧ್ಯಾ ಸುರಕ್ಷಾ ಯೋಜನೆಯಡಿ 32.92 ಲಕ್ಷ ಫ‌ಲಾನುಭವಿಗಳಿದ್ದಾರೆ. 8.50 ಲಕ್ಷ ಅಂಗವಿಕಲರು, 29.21 ಲಕ್ಷ ದೇವದಾಸಿಯರು ಇದ್ದಾರೆ.

ಸಾವಿರಾರು ಪ್ರಕರಣಗಳಲ್ಲಿ ಮಾಸಾಶನ ಹಣ ಮಧ್ಯವರ್ತಿಗಳ ಪಾಲಾಗುತ್ತಿದೆ. ಹೀಗಾಗಿ ಆಧಾರ್‌ ಸಂಖ್ಯೆ ಜೋಡಣೆ, ಬ್ಯಾಂಕ್‌ ಖಾತೆ ಕಡ್ಡಾಯ ಮಾಡಿ ನೇರವಾಗಿ ಯಾರದೇ ಹಸ್ತಕ್ಷೇಪ ಇಲ್ಲದೆ ಖಾತೆಗೆ ಹಣ ಜಮಾವಣೆಯಾಗಲಿದೆ. ಅವರ ಮನೆ ಬಾಗಿಲಿಗೆ ಮಾಸಾಶನ ತಲುಪಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ.
– ಆರ್‌. ಅಶೋಕ್‌,  ಕಂದಾಯ ಸಚಿವರು

-  ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.