846 ಅಂಗನವಾಡಿಗೆ ಸ್ವಂತ ಕಟ್ಟಡವೇ ಇಲ್ಲ!

ಕಾಯಕಲ್ಪಯಾವಾಗ? , ಸ್ಮಾರ್ಟ್‌ಸಿಟಿ ನಗರದಲ್ಲಿಯೇ 86 ಅಂಗನವಾಡಿಗೆ ಸ್ವಂತ ನಿವೇಶನವಿಲ್ಲ

Team Udayavani, Nov 26, 2020, 3:51 PM IST

846 ಅಂಗನವಾಡಿಗೆ ಸ್ವಂತ ಕಟ್ಟಡವೇ ಇಲ್ಲ!

ಉದ್ಘಾಟನೆಗೆ ಸಿದ್ಧವಾಗಿರುವ ಅಂಗನವಾಡಿ ಹೊಸ ಕಟ್ಟಡ

ತುಮಕೂರು: ಪುಟ್ಟ ಮಕ್ಕಳ ಶೈಕ್ಷಣಿಕ ಚಟುವಟಿಕೆ ತಾಣಗಳು ಅಂಗನವಾಡಿ ಕೇಂದ್ರಗಳು, ಇಲ್ಲಿ ಮಕ್ಕಳು ಶಿಕ್ಷಣ ಕಲಿಯಲು ಉತ್ತಮ ವಾತಾವರಣ ಇರಬೇಕು, ಕಂದಗಳು ಮೊದಲು ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸುವ ಕಲ್ಪತರು ನಾಡಿನ 846 ಅಂಗನವಾಡಿ ಕೇಂದ್ರಗಳಿಗೆ ಈವರೆಗೂ ಸ್ವಂತಕಟ್ಟಡವೇ ಇಲ್ಲ.

ಪಾಳು ಬಿದ್ದಿರುವ ಶಾಲೆಗಳಲ್ಲಿ,ಸಮುದಾಯ ಭವನಗಳಲ್ಲಿ ಹಳೆಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಶಿಕ್ಷಣ ಕಲಿಯುವ ಸ್ಥಿತಿ ಇಂದಿಗೂ ಜಿಲ್ಲೆಯಲ್ಲಿದ್ದು ಇದಕ್ಕೆ ಮುಕ್ತಿ ದೊರೆಯುವುದು ಯಾವಾಗ? ಜಿಲ್ಲೆಯಲ್ಲಿ ಇರುವ 4109 ಅಂಗನವಾಡಿಗಳ ಪೈಕಿ ಇಂದಿಗೂ ಬಹುತೇಕ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳೇ ಇಲ್ಲ, ಕೆಲವು ಕಟ್ಟಡಗಳು ಹಳೆದಾಗಿ ಶಿಥಿಲಾವಸೆœಯಲ್ಲಿದ್ದು ಮಕ್ಕಳ ಮೇಲೆ ಎಲ್ಲಿ ಬಿದ್ದು ಬಿಡುತ್ತವೆಯೋ ಎನ್ನುವ ಆತಂಕ ಮೂಡುವ ಸ್ಥಿತಿಯಲ್ಲಿರುವ ಕಟ್ಟಡದಲ್ಲಿ ಅಂಗನವಾಡಿಗಳು ನಡೆಯುತ್ತಿವೆ.

650 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ: 4109 ಅಂಗನವಾಡಿ ಕೇಂದ್ರಗಳಲ್ಲಿ 2850 ಅಂಗನವಾಡಿಗಳು ಮಾತ್ರ ಸ್ವಂತ ಕಟ್ಟಡ ಹೊಂದಿವೆ, ಇನ್ನು 152 ಅಂಗನವಾಡಿಗಳು ಸಮುದಾಯ ಭವನಗಳಲ್ಲಿ, 18ಅಂಗನವಾಡಿಗಳು ಪಂಚಾಯತ್‌ ಕಟ್ಟಡದಲ್ಲಿ, 352 ಅಂಗನವಾಡಿಗಳು ಸರ್ಕಾರಿ ಶಾಲಾ ಕಟ್ಟಡದಲ್ಲಿ ನಡೆಯುತ್ತಿವೆ. 84 ಬಾಡಿಗೆ ರಹಿತ ಕಟ್ಟಡದಲ್ಲಿ ನಡೆಯುತ್ತಿದ್ದರೆ, 650 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಇಂದಿಗೂ ನಡೆಯುತ್ತಿವೆ.

ಮೂಲಭೂತ ಸೌಲಭ್ಯದ ಕೊರತೆ: ಜಿಲ್ಲೆಯ ಅಂಗನವಾಡಿಗಳಲ್ಲಿ 1.40 ಲಕ್ಷ ಮಕ್ಕಳು ಅಂಗನವಾಡಿಗಳಲ್ಲಿ ಶಿಕ್ಷಣ ಪಡೆಯುತ್ತಿದ್ದು ಅದರಲ್ಲಿಯೂ ಗ್ರಾಮೀಣ ಪ್ರದೇಶದಲ್ಲಿಯೇ ಹೆಚ್ಚು ಮಕ್ಕಳು ಅಂಗನವಾಡಿಗಳಲ್ಲಿ ಶಿಕ್ಷಣ ಪಡೆಯುತ್ತಲಿದ್ದಾರೆ. ಕೆಲವು ಗ್ರಾಮೀಣ ಪ್ರದೇಶದ ಅಂಗನವಾಡಿಗಳಲ್ಲಿ ಮೂಲಭೂತ ಸೌಲಭ್ಯದ ಕೊರತೆ ಎದ್ದು ಕಾಣುತ್ತಿದೆ, ಕೆಲವು ಅಂಗನವಾಡಿಗಳಿಗೆ ಶೌಚಾಲಯವಿಲ್ಲ, ಕೆಲವು ಅಂಗನವಾಡಿಗಳಿಗೆ ಕುಡಿಯುವ ನೀರಿನ ಸೌಲಭ್ಯವೂ ಇಲ್ಲ, ಕೆಲವು ಅಂಗನವಾಡಿಗಳ ಕಟ್ಟಡ ಶಿಥಿಲವಾಗಿದ್ದು ಎಲ್ಲಿ ಮಕ್ಕಳ ಮೇಲೆ ಕಟ್ಟಡದ ಮೇಚ್ಛಾವಣೆ ಬೀಳುತ್ತದೆಯೋ ಎನ್ನುವ ಆತಂಕ ಪೋಷಕರಲ್ಲಿ ಇದೆ.ಇಂತಹದರ ನಡುವೆ ಜಿಲ್ಲೆಯ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಕಟ್ಟಬೇಕು ಎಂದು ಜಿಪಂ ಸಭೆಗಳಲ್ಲಿ ಚರ್ಚೆ ನಡೆಯುತ್ತಲೇ ಇರುತ್ತದೆ. ಆದರೆ ಇಂದಿಗೂ ಈ ಅಂಗನವಾಡಿ ಕಟ್ಟಡ ಕಟ್ಟಲು ಅಗತ್ಯ ಕ್ರಮ ಕೈಗೊಂಡಿಲ್ಲ.

650 ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರಗಳು: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಕಟ್ಟಲು ಜಿಪಂ ಯೋಜನೆ ರೂಪಿಸಬೇಕಾಗಿದೆ, ಆದರೆ 650 ರಲ್ಲಿ 225 ಅಂಗನವಾಡಿ ಕಟ್ಟಡಗಳಿಗೆ ನಿವೇಶನವಿದೆ. ಅಲ್ಲಿ ಅಂಗನವಾಡಿ ಕಟ್ಟಬಹುದು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಕಟ್ಟಡ ಕಟ್ಟಲು ನಿವೇಶನದಕೊರತೆ ಎದುರಾಗಿದೆ. ತುಮಕೂರಿನ ಕೇಂದ್ರಗಳಿಗೆ ಸ್ವಂತ ಕಟ್ಟಡ: ತುಮಕೂರು ನಗರದಲ್ಲಿರುವ 179 ಅಂಗನವಾಡಿ ಕೇಂದ್ರಗಳಲ್ಲಿ 58 ಕೇಂದ್ರಗಳು ಮಾತ್ರ ಸ್ವಂತ ಕಟ್ಟಡ ಹೊಂದಿದೆ. ಉಳಿದ 13 ಕೇಂದ್ರಗಳು ಸಮುದಾಯ ಭವನದಲ್ಲಿ 11 ಸರ್ಕಾರಿ ಶಾಲಾ ಕಟ್ಟಡದಲ್ಲಿ ಇನ್ನು 97ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಕಟ್ಟಡ ಕಟ್ಟಲು 11 ಅಂಗನವಾಡಿಗಳಿಗೆ ಮಾತ್ರ ನಿವೇಶನ ಇದೆ ಇಲ್ಲಿಸ್ಮಾರ್ಟ್‌ ಸಿಟಿ ಯೋಜನೆ ಯಿಂದ ಕಟ್ಟಡಗಳ ಕಾಮಗಾರಿ ಆರಂಭವಾಗಿವೆ. ಉಳಿದ ಅಂಗನವಾಡಿ ಕೇಂದ್ರಗಳಿಗೆ ನಿವೇಶನವೇ ಇಲ್ಲ, ನಗರದಲ್ಲಿ ಸರ್ಕಾರಿಯೋಜನೆಯ ಕಟ್ಟಡ ಕಟ್ಟಲು ಪಾಲಿಕೆಯ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳೇ ಇಲ್ಲ, ನಗರದಲ್ಲಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಕಟ್ಟಲು ಈ ಹಿಂದಿನಿಂದ ನಗರ ಶಾಸಕರು, ಪಾಲಿಕೆ ಸದಸ್ಯರು ಹೆಚ್ಚು ಒತ್ತು ನೀಡದೇ ಇರುವುದೇ ಅಂಗನವಾಡಿ ಕಟ್ಟಡಗಳು ಇಂದಿಗೂ ಬಾಡಿಗೆಯಲ್ಲಿ ಇರಲು ಪ್ರಮುಖ ಕಾರಣವಾಗಿದೆ.

345 ಅಂಗನವಾಡಿ ಶೌಚಾಲಯಗಳು ಪೂರ್ಣ :  ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 345 ಶೌಚಾಲಯಗಳು ಪೂರ್ಣಗೊಂಡು 130 ಶೌಚಾಲಯ ಪ್ರಗತಿಯಲ್ಲಿವೆ, ಇನ್ನೂ 318 ಅಂಗನವಾಡಿಗಳಿಗೆ ಶೌಚಾಲಯ ಅಗತ್ಯವಿದೆ. ಇದರ ಜೊತೆಗೆ 653 ಅಂಗನವಾಡಿ ಕೇಂದ್ರಗಳು ಬಾಡಿಗೆಕಟ್ಟಡದಲ್ಲಿದ್ದು ಹೊಸದಾಗಿ ಅಂಗನವಾಡಿ ಕಟ್ಟಡ ನಿರ್ಮಿಸಲು 229ಕೇಂದ್ರಗಳಿಗೆ ನಿವೇಶನ ಲಭ್ಯವಿದ್ದು ಅವುಗಳಿಗೆಕಟ್ಟಡಕಟ್ಟಲು ಅನುದಾನ ಬಿಡುಗಡೆ ಮಾಡುವಂತೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಹಲವುಕಡೆ ನಿವೇಶನ ಇಲ್ಲ ಅಲ್ಲಿ ನಿವೇಶನಪಡೆದು ಅಂಗನವಾಡಿ ಕಟ್ಟಡಕಟ್ಟಲುಕ್ರಮ ಕೈಗೊಳ್ಳಲಾಗುವುದು ಎನ್ನುತ್ತಾರೆ ಅಧಿಕಾರಿಗಳು.

ಜಿಲ್ಲೆಯಲ್ಲಿ ಅಂಗನವಾಡಿಗಳಿಗೆ ಸ್ವಂತ ಕಟ್ಟಡಕಟ್ಟಲು ಜಿಪಂ ನಿಂದ ಸೂಚಿಸಿರುವುದರ ಮೇರೆಗೆ 25 ಅಂಗನವಾಡಿ ಕಟ್ಟಡಗಳು ಪೂರ್ಣಗೊಂಡು ನ.26 ರಂದು ಸಚಿವರಿಂದ ಉದ್ಘಾಟನೆಯಾಗಲಿವೆ. ಇನ್ನೂ 93 ಕಟ್ಟಡಗಳ ನಿರ್ಮಾಣ ಪ್ರಗತಿಯಲ್ಲಿವೆ. ನಟರಾಜ್‌, ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

 

-ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.