ಕೋವಿಡ್ 2ನೇ ಅಲೆ ತಡೆಗೆ ಹಲವು ಕ್ರಮ: ಡಿಸಿ


Team Udayavani, Dec 1, 2020, 11:54 AM IST

ಕೋವಿಡ್ 2ನೇ ಅಲೆ ತಡೆಗೆ ಹಲವು ಕ್ರಮ: ಡಿಸಿ

ಉಡುಪಿ, ನ. 30: ಕೋವಿಡ್ ಎರಡನೇ ಅಲೆ ಜಿಲ್ಲೆಯಲ್ಲಿಯೂ ಆರಂಭ ವಾಗಬಹುದು. ಹೀಗಾಗಿ ಎಲ್ಲರೂ ಗರಿಷ್ಠ ಎಚ್ಚರಿಕೆ ವಹಿಸಬೇಕು. ಸರಕಾರದ ಮಾರ್ಗಸೂಚಿ ಪಾಲಿಸದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದ್ದಾರೆ.

ಎರಡನೇ ಅಲೆ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಡಳಿತವು ತಜ್ಞರು, ಅಧಿಕಾರಿಗಳ ಜತೆ ಸಭೆ ನಡೆಸಿದೆ. ಕೋವಿಡ್ ನಿರ್ಮೂಲನೆಯಾಗಿದೆ ಎಂದು ಭಾವಿಸುವಂತಿಲ್ಲ. ಆದ್ದರಿಂದ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಲ್ಲ ತಹಶೀಲ್ದಾರ್‌, ಇಒಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿ ತಿಳಿಸಿದರು.

ಲೈಸೆನ್ಸ್‌ ರದ್ದು: ಎಚ್ಚರಿಕೆ

ಈಗ ರಥೋತ್ಸವಗಳು, ಕೋಲ, ಕಂಬಳ, ಯಕ್ಷಗಾನ ಇತ್ಯಾದಿ ಆರಂಭವಾಗುತ್ತಿವೆ. ಮದುವೆ, ರಾಜಕೀಯ, ಸಾಮಾಜಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಯಾವುದೇ ಕಾರ್ಯಕ್ರಮ ಮಾಡಿದರೂ ಶಿಷ್ಟಾಚಾರ ಪಾಲನೆಯಾಗಬೇಕು. ಒಂದು ವೇಳೆ ಪಾಸಿಟಿವ್‌ ಪ್ರಕರಣ ಕಂಡು ಬಂದರೆ ಸಿಡಿ ನೋಡಿ ಪ್ರಾಥಮಿಕ ಸಂಪರ್ಕದವರನ್ನು ಐಸೊಲೇಶನ್‌ಗೆ ಒಳಪಡಿಸುತ್ತೇವೆ. ಅಂಗಡಿಗಳಲ್ಲಿ ಮಾಸ್ಕ್ ಧರಿಸದೆ ಹೋದರೆ ಅಂತಹವರ ಲೈಸೆನ್ಸ್‌ ಅನ್ನು ತಾತ್ಕಾಲಿಕವಾಗಿ ರದ್ದುಗೊಳಿಸಬೇಕು. ಹೀಗೆ ಕ್ರಮ ಕೈಗೊಳ್ಳದ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಲಾಗುವುದು ಎಂದು ಎಚ್ಚರಿಸಿದರು.

ಕಾಲೇಜುಗಳ ಪರಿಶೀಲನೆ :

ಕಾಲೇಜುಗಳು ಆರಂಭವಾಗುವ ಕುರಿತು ಪ್ರಾಂಶುಪಾಲರ ಸಭೆ ಕರೆದು ನಿಯಮಾವಳಿಗಳ ಕುರಿತು ವಿವರಿಸಿದ್ದೇವೆ. ವಾರಕ್ಕೆರಡು ಬಾರಿ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸೂಚಿಸಿದ್ದೇನೆ ಎಂದರು.

ಮಾದರಿಯಾಗಿ :

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಿಸಿಯವರು, ರಾಜಕೀಯ ಕಾರ್ಯಕ್ರಮದಲ್ಲಿ ನಿಯಮ ಪಾಲನೆಯಾಗಬೇಕು. ಸಂಘಟಕರು ಇತರರಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸಹಾಯಕ ಕಮಿಷನರ್‌ ರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡ, ಜಿ.ಪಂ. ಉಪಕಾರ್ಯದರ್ಶಿ ಕಿರಣ್‌ ಪಡ್ನೇಕರ್‌ ಉಪಸ್ಥಿತರಿದ್ದರು.

ಕೇರಳದಲ್ಲಿ ಅಪಾಯ- ಮುನ್ನೆಚ್ಚರಿಕೆ ಅಗತ್ಯ :

ಪಾಸಿಟಿವ್‌ ಪ್ರಕರಣಗಳಲ್ಲಿ ರೋಗ ಲಕ್ಷಣವಿರುವ ಪ್ರಮಾಣ ಶೇ.9 ಇದೆ. ಐಸಿಯು ಬಳಸುತ್ತಿರುವವರು ಕೇವಲ ಮೂರು ಮಂದಿ. 87 ಐಸಿಯು ಬೆಡ್‌ ಖಾಲಿ ಇದೆ. ನ. 29ರಂದು 43 ಮಂದಿ ಆಸ್ಪತ್ರೆಯಲ್ಲಿಯೂ, 176 ಮಂದಿ ಹೋಮ್‌ ಐಸೊಲೇಶನ್‌ನಲ್ಲಿಯೂ ಇದ್ದರು. ಇದರರ್ಥ ಗಂಭೀರವಲ್ಲದ ಪ್ರಕರಣಗಳು ಹೆಚ್ಚಿಗೆ ಇವೆ. ಕೇರಳದಲ್ಲಿ 2ನೇ ಹಂತದ ಅಲೆ ಹೆಚ್ಚಿಗೆ ಆಗುತ್ತಿದೆ. ಹೀಗಾಗಿ ಎಚ್ಚರಿಕೆ ವಹಿಸಬೇಕಾಗಿದೆ. ಡಾ| ಪ್ರಶಾಂತ ಭಟ್‌  ಜಿಲ್ಲಾ ಕೋವಿಡ್ ನೋಡಲ್‌ ಅಧಿಕಾರಿ, ಉಡುಪಿ.

 

ಕೋವಿಡ್ ತಡೆಗೆ ಕ್ರಮಗಳು :

  • ಮಾಸ್ಕ್ ಧರಿಸದವರಿಂದ ದಂಡ ಸಂಗ್ರಹ
  • ದಂಡ ವಿಧಿಸದ ಅಧಿಕಾರಿಗಳ ವಿರುದ್ಧ ಕ್ರಮ,
  • ಅನುಮತಿ ಪಡೆಯದ ಕಾರ್ಯ ಕ್ರಮಗಳಿದ್ದರೆ ಅದಕ್ಕೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ,
  • ಅನುಮತಿ ಪಡೆದು 200 ಜನರಿಗಿಂತ ಹೆಚ್ಚಿಗೆ ಸೇರಿದರೆ ಅವರ ವಿರುದ್ಧವೂ ಪ್ರಕರಣ

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.