ಬಿಜೆಪಿಗೆ ‘ಗ್ರಾಮ ಸ್ವರಾಜ್ಯ’ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಶಹಬ್ಬಾಸ್
Team Udayavani, Dec 3, 2020, 4:09 PM IST
ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗಾಗಿ ಬಿಜೆಪಿ ‘ಗ್ರಾಮ ಸ್ವರಾಜ್ಯ’ ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂಘಟನೆ ಉದ್ದೇಶದ ಈ ಸಮಾವೇಶಗಳು ಗ್ರಾಮಗಳನ್ನು ವಿಶ್ವಾಸಕ್ಕೆ ಪಡೆಯುಲು, ಸಮಸ್ಯೆಗಳನ್ನು ಪರಿಹರಿಸಲು ಬಳಕೆಯಾಗಲಿ. ಈ ಮೂಲಕ ಗ್ರಾಮ ಸ್ವರಾಜ್ಯದ ನಿಜ ಉದ್ದೇಶ ಸಾಕಾರವಾಗಲಿ ಎಂದಿದ್ದಾರೆ.
ಬಿಜೆಪಿಯ ಗ್ರಾಮ ಸ್ವರಾಜ್ಯ ಎಂಬುದು ಸಂಘಟನೆ ಉದ್ದೇಶದ ಸಮಾವೇಶವಾದರೂ, ಅವುಗಳನ್ನು ಹಳ್ಳಿಗಳ ಹಂತಕ್ಕೆ ಕೊಂಡೊಯ್ಯಬೇಕು ಎಂದು ನಾನು ಒತ್ತಾಯಿಸುತ್ತೇನೆ. ಆ ಮೂಲಕವಾದರೂ ನಮ್ಮ ಹಳ್ಳಿಗಳ ಜ್ವಲಂತ ಸಮಸ್ಯೆಗಳು ಬಿಜೆಪಿ ಸಚಿವರು, ಶಾಸಕರು ಮತ್ತು ಸರ್ಕಾರದ ಅರಿವಿಗೆ ಬರಲಿ. ಹಾಗಾದರೂ ಹಳ್ಳಿ ಜನರ ಸಮಸ್ಯೆಗಳು ಶಾಶ್ವತವಾಗಿ ನೀಗಲಿ ಎಂದು ಆಶಿಸುತ್ತೇನೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ:ಪಿಎಫ್ಐ ಕಚೇರಿ, ಪದಾಧಿಕಾರಿಗಳ ಮನೆ ಮೇಲೆ ಇ.ಡಿ ದಾಳಿ: ಕರ್ನಾಟಕ ಸೇರಿ 9 ರಾಜ್ಯದಲ್ಲಿ ದಾಳಿ
‘ಗ್ರಾಮ ಸ್ವರಾಜ್ಯ’ ಸಮಾವೇಶಗಳು ಕೇವಲ ಪಕ್ಷ ಸಂಘಟನೆಗಷ್ಟೇ ಸೀಮಿತವಾದರೆ ಅದು ಸ್ವಾರ್ಥವಾಗುತ್ತದೆ. ಗ್ರಾಮಗಳನ್ನು ಸಶಕ್ತಗೊಳಿಸಲು ಈ ಕಾರ್ಯಕ್ರಮವನ್ನು ಬಿಜೆಪಿ ಬಳಸಿಕೊಂಡರೆ, ಗ್ರಾಮ ಸ್ವರಾಜ್ಯದ ಹೆಸರಿಗೆ ಅರ್ಥ ಸಿಗುತ್ತದೆ. ಹಳ್ಳಿ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂಬುದು ನನ್ನ ಅನಿಸಿಕೆ. ಈ ನಿಟ್ಟಿನಲ್ಲಿ ಸರ್ಕಾರ ಚಿಂತಿಸಲಿ ಎಂದು ಸಲಹೆ ನೀಡಿದ್ದಾರೆ.
ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಗ್ರಾಮ ಸ್ವರಾಜ್ಯ ಕಾರ್ಯಕ್ರಮಗಳು ನೆರೆ ಪೀಡಿತ ಗ್ರಾಮಗಳನ್ನು ಕೇಂದ್ರೀಕರಿಸುವುದು ಅಗತ್ಯ. ಬಿಜೆಪಿ ನಾಯಕರು ಆ ಗ್ರಾಮಗಳಿಗೆ ಭೇಟಿ ನೀಡಲಿ. ಅಲ್ಲಿನ ಸಮಸ್ಯೆಗಳು, ಮನೆಗಳನ್ನು ಕಳೆದುಕೊಂಡ ನಿರಾಶ್ರಿತರ ಪರದಾಟ, ದುಃಖ ದುಮ್ಮಾನಗಳನ್ನು ಕಣ್ಣಾರೆ ಕಂಡು ಅವರಿಗೆ ಪರಿಹಾರ ಒದಗಿಸಬೇಕು ಎಂದು ಎಚ್ ಡಿಕೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿ ಜತೆ ಅನೈತಿಕ ಸಂಬಂಧ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.