ಬಿಎಂಸಿ ಪ್ರಾರಂಭಿಸಿದ 244 ಉಚಿತ ಕೋವಿಡ್‌ ಪರೀಕ್ಷಾ ಕೇಂದ್ರಗಳಿಗೆ ಉತ್ತಮ ಪ್ರತಿಕ್ರಿಯೆ


Team Udayavani, Dec 4, 2020, 3:09 PM IST

ಬಿಎಂಸಿ ಪ್ರಾರಂಭಿಸಿದ 244 ಉಚಿತ ಕೋವಿಡ್‌ ಪರೀಕ್ಷಾ ಕೇಂದ್ರಗಳಿಗೆ ಉತ್ತಮ ಪ್ರತಿಕ್ರಿಯೆ

ಮುಂಬಯಿ, ಡಿ. 3: ಮುಂಬಯಿ ಮಹಾನಗರ ಪಾಲಿಕೆಯು ಪ್ರಾರಂಭಿಸಿದ 244 ಉಚಿತ ಕೋವಿಡ್‌-19 ಪರೀಕ್ಷಾ ಕೇಂದ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನವೆಂಬರ್‌ ಮೊದಲ ವಾರದಲ್ಲಿ ಉದ್ಘಾಟನೆಯಾದಾಗಿನಿಂದ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಣೆಯಿಂದ ಪರೀಕ್ಷಿಸಿಕೊಂಡಿದ್ದು, ಅವರಲ್ಲಿ ಶೇ. 3ರಷ್ಟು ಮಂದಿಯಲ್ಲಿ ಕೊರನಾ ಪಾಸಿಟಿವ್‌ ದೃಢಪಟ್ಟಿದೆ.

ಕೋವಿಡ್‌ ರೋಗ ಲಕ್ಷಣಗಳಿರುವವರು ಅಥವಾ ಸೋಂಕಿತ ರೋಗಿಯೊಂದಿಗೆ ಸಂಪರ್ಕಕ್ಕೆ ಬಂದ ಯಾವುದೇ ವ್ಯಕ್ತಿ ಈ ಕೇಂದ್ರಗಳಲ್ಲಿ ಉಚಿತವಾಗಿ ಪರೀಕ್ಷೆಗಳಿಗೆ ಒಳಗಾಗಬಹುದು. ಕ್ಲಾಸಿಕಲ್‌ ಕೋವಿಡ್‌ -19 ರೋಗಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನ್ಯುಮೋನಿಯಾ, ಉಸಿರಾಟದ ತೊಂದರೆಗಳಿದ್ದ ವ್ಯಕ್ತಿಗಳು ಹತ್ತಿರದ ಯಾವುದೇ ಕೇಂದ್ರದಲ್ಲಿ ಉಚಿತವಾಗಿ ಪರೀಕ್ಷೆಗೆ ಒಳಗಾಗಬಹುದು ಎಂದು ಮುಂಬಯಿ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ಹೇಳಿದ್ದಾರೆ.

ಕೋವಿಡ್‌ ಪರೀಕ್ಷಾ  ಸಂಖ್ಯೆಯಲ್ಲೂ ಹೆಚ್ಚಳ :

ದೈನಂದಿನ ಕೋವಿಡ್‌ ಪರೀಕ್ಷೆಯ ಸಂಖ್ಯೆ 17,000ಕ್ಕಿಂತಲೂ ಹೆಚ್ಚಳಗೊಂಡಿದ್ದು, ನ. 28ರ ವೇಳೆಗೆ ಪಾಸಿಟಿವ್‌ ಪ್ರಮಾಣವು ಶೇ. 16ರಿಂದ ಶೇ. 15ಕ್ಕೆ ಇಳಿದಿದೆ. ಆರೋಗ್ಯ ಕಾರ್ಯಕರ್ತರು ಬಿಎಂಸಿಯ ಉಪಕ್ರಮವನ್ನು ಸ್ವಾಗತಿಸಿದ್ದಾರೆ. ಉಚಿತ ಪರೀಕ್ಷೆಯನ್ನು ಒದಗಿಸುವ ಬಿಎಂಸಿ ಆಸ್ಪತ್ರೆಗಳು ದೂರದಲ್ಲಿದ್ದು, ಇನ್ನೊಂದೆಡೆ ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷೆ ವೆಚ್ಚವೂ ಭರಿಸಲಾರದಷ್ಟಿದೆ. ಆದ್ದರಿಂದ ಪರೀಕ್ಷಾ ಕೇಂದ್ರಗಳು ತಮ್ಮ ಮನೆಗಳ ಸಮೀಪ ವಿರುವ ಜನರಿಗೆ ಪರಿಹಾರವನ್ನು ನೀಡುತ್ತಿದೆ ಎಂದು ಆರೋಗ್ಯ ಕಾರ್ಯಕರ್ತ ಡಾ| ರವಿಕಾಂತ್‌ ಸಿಂಗ್‌ ಹೇಳಿದ್ದಾರೆ.

ಎಲ್ಲರನ್ನು ಪರೀಕ್ಷೆಗೊಳಪಡಿಸಲು ನಿರ್ಧಾರ ಮುಂದಿನ ಹಂತದಲ್ಲಿ ಮುಂಬಯಿ ಮಹಾನಗರ ಪಾಲಿಕೆಯು ಸೆಕ್ಯೂರಿಟಿ ಗಾರ್ಡ್‌ಗಳು, ಡೆಲಿವರಿ ಹುಡುಗರನ್ನು ಪರೀಕ್ಷಿಸಲು ಪ್ರಾರಂಭಿಸಲಿದೆ. ಇವರು ಹೆಚ್ಚಾಗಿ ಸಾರ್ವಜನಿಕರೊಂದಿಗೆ ಬೆರೆಯುವುದರಿಂದ ಸೋಂಕು ಹರಡುವ ಭೀತಿ ಹೆಚ್ಚಾಗಿರುತ್ತದೆ.ಈಗಾಗಲೇ ತರಕಾರಿ ಮಾರಾಟಗಾರರು, ಸಾರ್ವಜನಿಕ ವಾಹನ ಚಾಲಕರನ್ನು ಪರೀಕ್ಷಿಸಲು ಪ್ರಾರಂಭಿಸಿದ್ದೇವೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ತಿಳಿಸಿದ್ದಾರೆ.

ಟೋಲ್‌ ಫ್ರೀ ಸಂಖ್ಯೆಗೆ ಕರೆ ಮಾಡಬಹುದು :  ಪರೀಕ್ಷಾ ಸೌಲಭ್ಯಗಳನ್ನು ನಾಗರಿಕರ ಮನೆ ಬಾಗಿಲಿಗೆ ತರುವ ಉದ್ದೇಶದಿಂದ ಮುಂಬಯಿ ಮಹಾನಗರ ಪಾಲಿಕೆಯು ತನ್ನ ಎಲ್ಲ 24 ವಾರ್ಡ್‌ಗಳಲ್ಲಿ ಕೇಂದ್ರವನ್ನು ಪ್ರಾರಂಭಿಸಿತು. ಟೋಲ್‌ ಫ್ರೀ ಸಂಖ್ಯೆ-1916ಗೆ ಕರೆ ಮಾಡುವ ಮೂಲಕ ಆಯಾಯ ಕೇಂದ್ರಗಳ ವಿಳಾಸಗಳನ್ನು ಪಡೆದು ಹೆಸರು ನೋಂದಾಯಿಸಿಕೊಳ್ಳಬಹುದು. ಇದನ್ನು ಬಿಎಂಸಿಯ ಮುಖ್ಯ ನಿಯಂತ್ರಣ ಕೊಠಡಿ ನಿರ್ವಹಿಸುತ್ತಿದ್ದು, ಮೀಸಲಾದ ಕೋವಿಡ್‌-19 ವೆಬ್‌ಸೈಟ್‌ನಲ್ಲೂ ಮಾಹಿತಿ ಪಡೆಯಬಹುದು. ಆಯಾಯ ವಾರ್ಡ್‌ಗಳ ಕೋವಿಡ್‌ ಪರೀಕ್ಷಾ ಕೇಂದ್ರಗಳಲ್ಲಿ ಆರ್‌ಟಿ-ಪಿಸಿಆರ್‌ ಮತ್ತು ಕ್ಷಿಪ್ರ ಪ್ರತಿಜನಕ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಲಾಗಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.