![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 8, 2020, 7:30 PM IST
2021 ರ ಜನವರಿಯಲ್ಲಿಯೇ ಚುನಾವಣೆ ನಡೆಸುವ ಸಾಧ್ಯತೆ .
ಬೆಂಗಳೂರು: ರಾಜ್ಯದೆಲ್ಲೆಡೆ ಗ್ರಾ. ಪಂ ಚುನಾವಣೆ ಬಾರಿ ಸದ್ದು ಮಾಡುತ್ತಿರುವ ಬೆನ್ನೆಲ್ಲೆ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಲ್ಲಿಯೂ ಚುನಾವಣಾ ಅಖಾಡ ರಂಗೇರಲಾರಂಭಿಸಿದೆ. ಮುಂಬರುವ 2021 ರ ಜನವರಿಯಲ್ಲಿ ಆಡಳಿತ ಮಂಡಳಿಯ ಸಾಮಾನ್ಯ ಸಭೆ ನಡೆಸಲು ಮಂಡಳಿ ಕಾರ್ಯಕಾರಿ ಸಮೀತಿಯು ಮುಂದಾಗಿದ್ದು, ಜನವರಿಯಲ್ಲಿಯೇ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಲ್ಲಿ ಒಟ್ಟು 1,595 ಜನ ಸದಸ್ಯ ಮತದಾರರಿದ್ದು, ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕಜಾಂಚಿ ಹಾಗೂ ಕಾರ್ಯಕಾರಿ ಸಮೀತಿಯ ಸದ್ಯಸ್ಯರುಗಳನ್ನು ಈ ಸದಸ್ಯರು ಆಯ್ಕೆ ಮಾಡಲಿದ್ದಾರೆ.
ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ ಸಾ. ರಾ ಗೋವಿಂದು, ನಿರ್ಮಾಪಕರಾದ ಬಾ.ಮ ಹರೀಶ್, ಕೆ.ಸಿ. ಎನ್ ಚಂದ್ರಶೇಖರ, ವೆಂಕಟೇಶ್ ಮುಂತಾದವರ ಹೆಸರುಗಳು ಆಕಾಂಕ್ಷಿಗಳ ಸಾಲಿನಲ್ಲಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ಇನ್ನಷ್ಟು ಜನರ ಹೆಸರು ಸೇರ್ಪಡೆಗೊಳ್ಳುವ ಸಾಧ್ಯತೆಗಳಿವೆ ಎಂಬ ಮಾತು ಕೇಳಿ ಬರುತ್ತಿದೆ.
ಇದನ್ನೂ ಓದಿ:ರಂಗೇರಿದ ಗ್ರಾಪಂ ಚುನಾವಣಾ ಅಖಾಡ
ಈ ಹಿಂದೆ ಚಿತ್ರ ಪ್ರದರ್ಶಕ ಡಿ.ಆರ್ ಜೈರಾಜ್ ಅವರು ಮಂಡಳಿಯ ಅಧ್ಯಕ್ಷರಾಗಿದ್ದರು. 2020ರ ಜೂನ್ ವೇಳೆಗೆ ಅವರ ಅಧಿಕಾರ ಅವಧಿ ಪೂರ್ಣಗೊಂಡಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಆಡಳಿತ ಮಂಡಳಿಯ ಅಧಿಕಾರ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಚುನಾವಣೆ ನಡೆಸಲು ಸಮೀತಿಯು ತಯಾರಿ ನಡೆಸುತ್ತಿದ್ದು, ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಥಾಮಸ್ ಡಿಸೋಜಾ ಅವರನ್ನು ಚುನಾವಣಾ ಅಧಿಕಾರಿಯಾಗಿ ನೇಮಿಸಿದೆ ಎಂದು ತಿಳಿದುಬಂದಿದೆ.
ಚಲನ ಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಸಲುತೀರ್ಮಾನಿಸಿದ್ದು,ಕಾರ್ಯಕಾರಿ ಸಮೀತಿಯು ಈ ವಾರದಲ್ಲಿ ಮತ್ತೊಮ್ಮೆ ಸಭೆ ಸೇರುವ ಮೂಲಕ ಚುನಾವಣಾ ದಿನಾಂಕವನ್ನು ನಿಗದಿಪಡಿಸುವುದಾಗಿ ತಿಳಿಸಿದೆ. ಸದ್ಯದಲ್ಲಿಯೇ ಸದಸ್ಯರೆಲ್ಲರಿಗೂ ತಿಳುವಳಿಕೆ ಸೂಚನಾ ಪತ್ರವನ್ನು ರವಾನಿಸಲಾಗುವುದು ಎಂದು ಥಾಮಸ್ ಡಿಸೋಜಾ ತಿಳಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.