ಎವರೆಸ್ಟ್‌ ಈಗ ಮತ್ತಷ್ಟು ಎತ್ತರ; ಶಿಖರದ ಪರಿಷ್ಕೃತ ಮಾಹಿತಿ ಬಿಡುಗಡೆ!


Team Udayavani, Dec 8, 2020, 4:45 PM IST

Mount everest

ಹೊಸದಿಲ್ಲಿ: ಜಗತ್ತಿನ ಅತೀ ದೊಡ್ಡ ಶಿಖರವನ್ನು ಏರುವ ಕನಸು ನಿಮ್ಮದಾಗಿದ್ದರೆ ಇಂದಿನಿಂದಲೇ ತುಸು ಹೆಚ್ಚು ಅಭ್ಯಾಸ ಮಾಡಬೇಕಾಗಿದೆ. ಯಾಕೆಂದರೆ ಈ ಹಿಂದೆ ಕಂಡುಕೊಳ್ಳಲಾದ ಎತ್ತರಕ್ಕಿಂತ ಕೆಲವು ಹೆಜ್ಜೆ ಹೆಚ್ಚು ಇಡಬೇಕಾಗಿದೆ. ಅರ್ಥಾತ್‌ ನಿಮ್ಮ ಕನಸುಗಳು ಬೆಳೆದಂತೆ ಈಗ ಎವರೆಸ್ಟ್‌ ಶಿಖರವೂ ಬೆಳೆದಿದೆ.

ಹೌದು. ವಿಶ್ವದ ಅತ್ಯುನ್ನತ ಶಿಖರವಾದ ಎವರೆಸ್ಟ್ ಪರ್ವತದ ಎತ್ತರ ಈಗ ಮೊದಲಿಗಿಂತಲೂ ಹೆಚ್ಚಾಗಿದೆ. ಈ ಮಾಹಿತಿಯನ್ನು ನೇಪಾಲ ಮತ್ತು ಚೀನ ಜಂಟಿಯಾಗಿ ಘೋಷಿಸಿವೆ. ಈ ಹಿಂದೆ ಇದರ ಎತ್ತರವು 8,848 ಮೀಟರ್ ಆಗಿತ್ತು. ಇದನ್ನು ಈಗ 8,848.86 ಮೀಟರ್ (29,032 ಅಡಿ‌) ಎಂದು ಅಳತೆ ಮಾಡಲಾಗಿದೆ. ಆದರೆ ಅದರ ಎತ್ತರ 84,48.86 ಮೀಟರ್ ಎಂದು ಚೀನ ಈ ಹಿಂದೆ ತಿಳಿಸಿತ್ತು.

ನೇಪಾಲದ ವಿದೇಶಾಂಗ ಸಚಿವರು ಈ ಮಾಹಿತಿಯನ್ನು ಬಿಡುಗಡೆ ಮಾಡಿದ್ದಾರೆ. 2019ರ 13 ಅಕ್ಟೋಬರ್‌ನಲ್ಲಿ ಎವರೆಸ್ಟ್ ಪರ್ವತದ ಎತ್ತರವನ್ನು ಅಳೆಯಲು ನೇಪಾಲ ಮತ್ತು ಚೀನ ಒಪ್ಪಂದ ಮಾಡಿಕೊಂಡಿದ್ದವು. ಇದರ ಜತೆಗೆ ಚೀನ ಮತ್ತು ನೇಪಾಲ ಒಟ್ಟಾಗಿ ಜುಮ್ಲಾಂಗ್ಮಾ ಮತ್ತು ಸಾಗರಮಾಥ ಪರ್ವತದ ಎತ್ತರವನ್ನು ಘೋಷಿಸಲು ನಿರ್ಧರಿಸಿದ್ದವು. ಕಳೆದ ವರ್ಷ ಎವರೆಸ್ಟ್ ಪರ್ವತದ ಎತ್ತರವನ್ನು ಅಳೆಯಲು ತಂಡವನ್ನು ಕಳುಹಿಸಲಾಗಿತ್ತು.  ಈ ವರ್ಷ ಮತ್ತೊಮ್ಮೆ ಎವರೆಸ್ಟ್‌ನ ಎತ್ತರವನ್ನು ಅಳೆಯಲು ಟಿಬೆಟ್‌ನಿಂದ ತಂಡವನ್ನು ಕಳುಹಿಸಲಾಗಿತ್ತು.

2015ರಲ್ಲಿ ಸಂಭವಿಸಿದ ಭೀಕರ ಭೂಕಂಪ ಮತ್ತು ಇತರ ಕೆಲವು ಭೌಗೋಳಿಕ ಘಟನೆಗಳಿಂದಾಗಿ ಗರಿಷ್ಠ ಎತ್ತರ ಬದಲಾಗಬಹುದು ಎಂದು ನೇಪಾಲ ಈ ಹಿಂದೆ ಹೇಳಿತ್ತು. ಈ ಸಂದರ್ಭದಲ್ಲಿ ಅದನ್ನು ಮತ್ತೆ ಅಳೆಯಲು ನಿರ್ಧರಿಸಲಾಗಿತ್ತು.

ಎವರೆಸ್ಟ್ ಪರ್ವತವನ್ನು 1954 ರಲ್ಲಿ ಸರ್ವೆ ಆಫ್ ಇಂಡಿಯಾ ಅಳತೆ ಮಾಡಿದ ಸಂದರ್ಭ ಅದರ ಎತ್ತರ 8,848 ಮೀಟರ್ ಎಂದು ಹೇಳಲಾಗಿತ್ತು. ಹಿಮಾಲಯದ ಬಗ್ಗೆ ಸಂಶೋಧನೆ ನಡೆಸುತ್ತಿರುವ ಅನೇಕ ಸಂಸ್ಥೆಗಳು ಮತ್ತು ವಿಜ್ಞಾನಿಗಳು ಎವರೆಸ್ಟ್‌ನ ಎತ್ತರವು ನಿರಂತರವಾಗಿ ಹೆಚ್ಚುತ್ತಿದೆ ಎಂದು ಹಲವು ಬಾರಿ ಹೇಳಿಕೊಂಡಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.