![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Dec 8, 2020, 5:58 PM IST
ನವದೆಹಲಿ: ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಕೃಷಿ ಕಾಯ್ದೆ ಕುರಿತ ಬೇಡಿಕೆ ಹಾಗೂ ಸಮಸ್ಯೆಯನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ(ಡಿಸೆಂಬರ್ 08, 2020) 7ಗಂಟೆಗೆ ಮಾತುಕತೆ ನಡೆಸಲು ರೈತ ಮುಖಂಡರಿಗೆ ಆಹ್ವಾನ ನೀಡಿರುವುದಾಗಿ ಭಾರತಿಯ ಕಿಸಾನ್ ಸಂಘ(ಬಿಕೆಯು)ದ ಮುಖಂಡ ರಾಕೇಶ್ ಟಿಕೈಟ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಹಿರಿಯ ರೈತ ಮುಖಂಡ, ಇಂದು ರಾತ್ರಿ 7ಗಂಟೆಗೆ ಸಚಿವ ಅಮಿತ್ ಶಾ ಜತೆ ಚರ್ಚೆ ನಡೆಯಲಿದೆ. ನಾವೀಗ ಸಿಂಘು ಗಡಿಯತ್ತ ತೆರಳಲಿದ್ದು, ನಂತರ ಅಲ್ಲಿಂದ ಗೃಹ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದೇವೆ ಎಂದು ಹೇಳಿದರು.
ಪ್ರತಿಭಟನೆ, ಭಾರತ್ ಬಂದ್ ಕರೆ ನಡುವೆ ಕೇಂದ್ರ ಗೃಹ ಸಚಿವರ ಆಹ್ವಾನದಿಂದ ನಿಮಗೆ ಏನಾದರು ಪರಿಹಾರದ ನಿರೀಕ್ಷೆ ಇದೆಯಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾಕೇಶ್ ಅವರು, ಇದೊಂದು ಉತ್ತಮ ಬೆಳವಣಿಗೆ. ಈ ಮಾತುಕತೆ ಮೂಲಕ ಏನಾದರು ಧನಾತ್ಮಕ ಅಂಶ ಹೊರಬೀಳಬಹುದು ಎಂದು ಆಶಾಭಾವ ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:ಪಂಜಾಬ್ ನಲ್ಲಿ ಮತ್ತೆ ಉಗ್ರ ಚಟುವಟಿಕೆಗೆ ಸಂಚು: ಐಎಸ್ ಐಗೆ ಭಿಂದ್ರನ್ ವಾಲೆ ಸೋದರಳಿಯನ ಸಾಥ್!
ಕೇಂದ್ರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತ ಹಾಗೂ ದೇಶದ ವಿವಿಧ ಕಾರ್ಮಿಕ ಸಂಘಟನೆಗಳು ಮಂಗಳವಾರ(ಡಿಸೆಂಬರ್ 08) ದೇಶಾದ್ಯಂತ ಭಾರತ್ ಬಂದ್ ಗೆ ಕರೆ ಕೊಟ್ಟಿದ್ದವು. ಈ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಅಂಗಡಿ, ಮುಂಗಟ್ಟು ಬಂದ್ ಆಗಿದ್ದು, ರಸ್ತೆ ತಡೆ ನಡೆಸಿದ್ದರಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿರುವುದಾಗಿ ವರದಿ ತಿಳಿಸಿದೆ.
ಪಂಜಾಬ್, ಹರ್ಯಾಣ ಮತ್ತು ದೆಹಲಿ ಹೊರತುಪಡಿಸಿ ದೇಶದ ಇತರ ಭಾಗಗಳಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಎಲ್ಲೆಡೆ ಬಸ್, ಜನಸಂಚಾರ ಸೇರಿದಂತೆ ಎಲ್ಲಾ ಅಂಗಡಿ, ಮುಂಗಟ್ಟು ತೆರೆದಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.