ಕೆ. ಡಿ. ಶೆಟ್ಟಿ ಅವರ ಸಮಾಜ ಸೇವೆ ಅನುಕರಣೀಯ: ಧರ್ಮಪಾಲ ದೇವಾಡಿಗ


Team Udayavani, Dec 8, 2020, 6:39 PM IST

ಕೆ. ಡಿ. ಶೆಟ್ಟಿ ಅವರ ಸಮಾಜ ಸೇವೆ ಅನುಕರಣೀಯ: ಧರ್ಮಪಾಲ ದೇವಾಡಿಗ

ಮುಂಬಯಿ, ಡಿ. 7: ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿಯೊಬ್ಬ ಸಾಧನೆ ಮತ್ತು ಛಲದದೊಂದಿಗೆ ಎತ್ತರಕ್ಕೇರಬಹುದು ಎಂಬುದಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ಡಿ. ಶೆಟ್ಟಿ ಅವರು ಉದಾಹರಣೆಯಾಗಿದ್ದಾರೆ. ನಿರಂತರ ಪರಿಶ್ರಮದಿಂದ ಸ್ವಂತ ಉದ್ಯಮ ವನ್ನು ಪ್ರಾರಂಭಿಸಿ ಅಸಹಾಯಕರಿಗೆ ಸಹಾಯ ಮಾಡುವ ಉದ್ದೇಶದಿಂದ ತನ್ನ ಮಾತೃಶ್ರೀಯರ ಹೆಸರಲ್ಲಿ ಭವಾನಿ ಫೌಂಡೇಶನ್‌ ಸಂಸ್ಥೆಯನ್ನು ಸ್ಥಾಪಿಸಿ ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿನ ಜನಸಾಮಾನ್ಯರಿಗೆ ಸಹಾಯ ಮಾಡುತ್ತಿರು ವುದನ್ನು ಕರ್ನಾಟಕ ಸರಕಾರ ಗುರುತಿಸಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಮುಂದಿನ ದಿನಗಳಲ್ಲಿ ಇವರ ಸೇವಾಕಾರ್ಯವನ್ನು ದೇಶ ಗುರುತಿಸು ವಂತಾಗಲಿ ಎಂದು ಭವಾನಿ ಫೌಂಡೇಷನ್‌ನ ಟ್ರಸ್ಟಿ ಹಾಗೂ ಅಖೀಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ ತಿಳಿಸಿದರು.

ಡಿ. 5ರಂದು ನವಿಮುಂಬಯಿಯ ಸಿಬಿಡಿಯಲ್ಲಿನ ಭವಾನಿ ಫೌಂಡೇಶನ್‌ ಕಾರ್ಯಾಲಯದಲ್ಲಿ ನಡೆದ ವಿಶೇಷ ಸಭೆಯಲ್ಲಿ ಭವಾನಿ ಫೌಂಡೇಶನ್‌ ವತಿಯಿಂದ ಕೆ. ಡಿ. ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿ, ಕೆ. ಡಿ. ಶೆಟ್ಟಿಯವರ ಸಾಧನೆ ಅನುಕರಣೀ ಯವಾಗಿದೆ. ಅವರಿಂದ ಇನ್ನಷ್ಟು ಸಮಾಜಪರ ಸೇವೆಗಳು ಮಾಡುವಂತಾ ಗಬೇಕು. ಅದಕ್ಕಾಗಿ ಅವರೊಂದಿಗೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದರು.

ಇಂಡಿಯನ್‌ ಎಕ್ಸ್‌ಪ್ರೆಸ್‌ ಪತ್ರಿಕೆಯ ಪತ್ರಕರ್ತ, ಭವಾನಿ ಪೌಂಡೇಶನ್‌ ಟ್ರಸ್ಟಿ ದಿನೇಶ್‌ ಶೆಟ್ಟಿ  ಮಾತನಾಡಿ, ಕೆ. ಡಿ. ಶೆಟ್ಟಿಯ ಸಾಧನೆ ಹಾಗೂ ಜನ ಸಾಮಾನ್ಯರ ಸೇವೆಯನ್ನು ಮಹಾರಾಷ್ಟ್ರ ಸರಕಾರವೂ ಗುರುತಿಸಿ ಅವರನ್ನು ಗೌರವಿಸುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮವನ್ನು ನಿರ್ವಹಿಸಿದ ಭವಾನಿ ಫೌಂಡೇಶನ್‌ನ ಟ್ರಸ್ಟಿ ಕಲಾ ಸಂಘಟಕ ಕರ್ನೂರು ಮೋಹನ್‌ ರೈ ಮಾತನಾಡಿ. ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯವಾಗಿ ಸಹಕರಿಸುವುದರೊಂದಿಗೆ ಮಹಾರಾಷ್ಟ್ರದ ಆದಿವಾಸಿ ಜನರಿಗೆ ಸಹಾಯ ಮಾಡುತ್ತಾ ಬಂದಿರುವ ಭವಾನಿ ಫೌಂಡೇಶನ್‌ನ ಸೇವಾ ಕಾರ್ಯವನ್ನು ಕರ್ನಾಟಕ ಸರಕಾರ ಗುರುತಿಸಿರುವುದು ಅಭಿನಂದನೀಯ. ಈ ಸೇವೆಯು ನಿರಂತರವಾಗಿ ಮುಂದುವರಿ ಯಲಿದೆ ಎಂದರು.

ಕೆ. ಡಿ. ಶೆಟ್ಟಿಯವರ ಪುತ್ರಿ ಮತ್ತು ಭವಾನಿ ಫೌಂಡೇಶನ್‌ನ ಟ್ರಸ್ಟಿ ಶಿಖಾ ಕೆ. ಶೆಟ್ಟಿ  ಮಾತನಾಡಿ, ತಂದೆಯವರಿಗೆ ಸಿಕ್ಕಿದ ಪ್ರಶಸ್ತಿ ಬಗ್ಗೆ ನನಗೆ ತುಂಬಾ ಅಭಿಮಾನವಿದೆ. ಅವರು ಮಾಡಿದ ಸೇವೆಯನ್ನು ಸರಕಾರವು ಗುರುತಿಸಿ ಗೌರವಿಸಿದೆ. ಸಮಾಜ ಸೇವೆಯು ಅವರ ರಕ್ತದ ಕಣದಲ್ಲಿದೆ. ನಾವು ಯಾವಾಗಲೂ ಅವರೊಂದಿಗಿದ್ದೇವೆ. ಇನ್ನೊಬ್ಬರ ಕಷ್ಟದ ಬಗ್ಗೆ ಚಿಂತಿಸುವವರು ಅವರು ಎಂದರು.

ಕಾರ್ಯಕ್ರಮದಲ್ಲಿ ಫೌಂಡೇಶನ್‌ನ ಟ್ರಸ್ಟಿಗಳು ಕೆ. ಡಿ. ಶೆಟ್ಟಿ ಅವರನ್ನು ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. ಫೌಂಡೇಶನ್‌ನ ಪದಾಧಿಕಾರಿ ರವಿ ಉಚ್ಚಿಲ್‌ ಹಾಗೂ ಇತರರು ಅಭಿನಂದಿಸಿದರು. ಭವಾನಿ ಫೌಂಡೇಶನ್‌ನ ಟ್ರಸ್ಟಿ ಪ್ರೇಮನಾಥ ಶೆಟ್ಟಿ ಮುಂಡ್ಕೂರು ವಂದಿಸಿದರು.

ಹೊರನಾಡ ಕನ್ನಡಿಗರ ಪರವಾಗಿ ಪ್ರಶಸ್ತಿ ಸ್ವಿಕಾರ: ಕೆ. ಡಿ. ಶೆಟ್ಟಿ : ಅಸಹಾಯಕರಿಗೆ ಸಹಾಯ ಮಾಡುವುದು ನಮ್ಮ ಗುರಿಯಾಗಿರಲಿ.  ನಾವೆಲ್ಲರೂ ಜಾತಿ ಭೇದ ಮರೆತು ತುಳು ಕನ್ನಡಿಗರಾಗಿ ಕನ್ನಡ ಶಾಲೆಗಳಿಗೆ  ಹಾಗೂ ಶಿಕ್ಷಣದಲ್ಲಿ ವಂಚಿತ ರಾಗುವವರಿಗೆ ಸಹಕರಿಸೋಣ. ರಾಜ್ಯೋತ್ಸವ ಪ್ರಶಸ್ತಿಯು ನನಗೆ ಸಿಕ್ಕಿದೆ ಅನ್ನುದರ ಬದಲು ಮಹಾರಾಷ್ಟ್ರದಲ್ಲಿನ ಎಲ್ಲ  ತುಳು ಕನ್ನಡಿಗರ ಪರವಾಗಿ ಸ್ವೀಕರಿಸಿದ್ದೇನೆ ಎನ್ನಬಹುದು. ಇದೀಗ ನನ್ನ  ಜವಾಬ್ದಾರಿ ಹೆಚ್ಚಾಗಿದೆ. ಸಂಪಾದನೆಯಲ್ಲಿ ಕೆಲವಂಶ ವನ್ನಾದರೂ ದಾನ  ಧರ್ಮದಲ್ಲಿ ವಿನಿಯೋಗಿಸಬೇಕು ಎಂಬುದೇ ನನ್ನ ಕನಸು. ಸಮಾಜಸೇವೆ  ನನ್ನ ರಕ್ತದಲ್ಲಿದೆ. ರಾತ್ರಿ ಶಾಲೆಯಲ್ಲಿ ಕಲಿತು ಬಡವರ ಕಣ್ಣೀರೊರಸುವ ಕೆಲಸವನ್ನು ಮಾಡುವ ಭಾಗ್ಯ ನನಗೆ ದೊರಕಿದೆ. -ಕೆ. ಡಿ. ಶೆಟ್ಟಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.