ಭೂಸುಧಾರಣ ಕಾಯ್ದೆಯಲ್ಲಿ ಮಾರಕವಾದ ಅಂಶವಾದರೂ ಯಾವುದು? ಪ್ರತಿಭಟನಾಕಾರರಿಗೆ HDK ಪ್ರಶ್ನೆ


Team Udayavani, Dec 9, 2020, 12:22 PM IST

ಜೆಡಿಎಸ್‌ ರೈತ ವಿರೋಧಿ ನಿಲುವು ತಳೆಯಲು ಎಂದಾದರೂ ಸಾಧ್ಯವೇ? :ಕುಮಾರಸ್ವಾಮಿ

ಬೆಂಗಳೂರು : ಹೊಸ ಭೂ ಸುಧಾರಣಾ ಕಾಯ್ದೆಯಲ್ಲಿ ಮಾರಕವಾದ ಅಂಶಗಳು ಯಾವುದು ಯಾಕಾಗಿ ಪ್ರತಿಭಟನೆ ನಡೆಸುತ್ತಿದ್ದೀರಿ ಎಂದು ಪ್ರತಿಭಟನಾನಿರತರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ ಡಿಕೆ ನಿಜವಾಗಿಯೂ ಭೂ ಸುಧಾರಣೆಯಲ್ಲಿ ಯಾವೆಲ್ಲಾ ಬದಲಾವಣೆ ತರಲಾಗಿದೆ ಎಂಬುದನ್ನು ಪ್ರತಿಭಟನಾಕಾರರಿಗೆ ಅವಲೋಕಿಸುವಷ್ಟು ತಾಳ್ಮೆ ಇಲ್ಲ ಮೊದಲಿದ್ದ ಕಾಯ್ದೆಗೂ ಈಗಿರುವ ಕಾಯ್ದೆಗೂ ಬಹಳಷ್ಟು ಬದಲಾವಣೆ ತರಲಾಗಿದೆ ಹಾಗಾಗಿ ಪ್ರತಿಭಟನಾಕಾರರು ಮೊದಲು ಬದಲಾವಣೆಗೊಳಿಸಿದ ಭೂ ಸುಧಾರಣಾ ಕಾಯ್ದೆಯನ್ನು ಪರಿಶೀಲಿಸಿ ಬಳಿಕ ಪ್ರತಿಭಟನೆ ನಡೆಸಲಿ ಎಂದು ಹೇಳಿದ್ದಾರೆ.

ರೈತರ ಕಾಯಿದೆ ಬಗ್ಗೆ ಬಿಜೆಪಿಯ ಪರವಾಗಿ ಜೆಡಿಎಸ್ ಒಲವು ತೋರಿಸುತ್ತಿದೆ ಎಂಬ ಕಾಂಗ್ರೆಸ್ ಹಾಗೂ ರೈತ ಮುಖಂಡರ ಹೇಳಿಕೆಗೆ ಸಮರ್ಥನೆಯನ್ನು ನೀಡಿದ ಹೆಚ್ ಡಿಕೆ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್‌ ರೈತರ ಹಿತ ಕಾಯುತ್ತ ಆ ಕೆಲಸ ಮಾಡಿದೆ. ಕಾಯ್ದೆ ವಿಚಾರವಾಗಿ ನ್ಯಾಯ ಕಾಂಗ್ರೆಸ್‌ ಕಡೆಯೂ ಇರಲಿಲ್ಲ, ಬಿಜೆಪಿ ಕೆಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್‌ ಮಾಡಿದೆ.

ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್‌ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್‌ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕೃಷಿಕಾಯ್ದೆಗಳ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ರಾಜ್ಯಪ್ರವಾಸ; ಬಿ.ಸಿ. ಪಾಟೀಲ್

ಜೆಡಿಎಸ್‌ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಮೊದಲು ಪ್ರಸ್ತಾಪಿಸಿದ ಮಸೂದೆಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 248 ಎಕರೆ ಜಮೀನು ಹೊಂದಲು ಅವಕಾಶವಿತ್ತು. ಆದರೆ, ಈಗ ಅದನ್ನು ತೆಗೆದು ಹಾಕಲಾಗಿದೆ. ಕಲಂ 80ರ ಅಡಿಯ ನೀರಾವರಿ ಜಮೀನನ್ನು ಕೃಷಿ ಉದ್ದೇಶಕ್ಕೆ ಮಾತ್ರವೇ ಬಳಸಬೇಕು ಎಂಬ ನಿಬಂಧನೆ ವಿಧಿಸಲಾಗಿದೆ.

ಉಳುವವನೇ ಭೂಮಿ ಒಡೆಯ ಎಂಬ ತತ್ವದಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಲಾಗಿತ್ತು. ಅದನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದರಲ್ಲಿ ದೇವರಾಜ ಅರಸರ ಆಶಯವನ್ನು ಕಾಪಾಡಿಕೊಂಡಿದ್ದು ಜೆಡಿಎಸ್‌ನ ಹೆಗ್ಗಳಿಕೆಯಲ್ಲವೇ? ಎಸ್‌ಸಿ/ಎಸ್‌ಟಿ ಜನರ ಭೂಮಿ ವಿಚಾರದಲ್ಲಿ ಯಾವುದೇ ವಿನಾಯಿತಿಯೂ ನೀಡದಂತೆ ನೋಡಿಕೋಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದರು.

ಕಾಯ್ದೆಯಲ್ಲಿನ 79(ಎ, ಬಿ) ಕಲಂಗಳ ಔಚಿತ್ಯದ ಬಗ್ಗೆ ಈ ವರೆಗೆ ಶಾಸನಸಭೆಗಳ ಒಳ, ಹೊರಗೆ ಸಾಕಷ್ಟು ಚರ್ಚೆಗಳಾಗಿವೆ. ಪ್ರೊ. ನಂಜುಂಡಸ್ವಾಮಿ ಅವರೇ, ‘ಇದು ಜನರ ಸ್ವಾತಂತ್ರ್ಯ ಹರಣ ಮಾಡುತ್ತದೆ’ ಎಂದು ಪ್ರತಿಪಾದಿಸಿದ್ದರು. ಕೃಷಿ ಮಾಡುವ ಇಚ್ಛೆ ಇದ್ದೂ, ಕೃಷಿಕರಲ್ಲದಿದ್ದರೆ ಕೃಷಿ ಭೂಮಿ ಹೊಂದಂತೆ ಮಾಡುತ್ತಿದ್ದ ಈ ನಿಯಮವನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ:ಮಧ್ಯಪ್ರದೇಶ : ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದವರ ಕಾರು ಬಾವಿಗೆ ಬಿದ್ದು 6 ಸಾವು, 3 ಗಂಭೀರ

79(ಎ, ಬಿ) ಕಲಂ ಅಗತ್ಯತೆ, ಸಾಧಕ-ಬಾಧಕಗಳ ಪರಾಮರ್ಶೆಗೆ ಸಿದ್ದರಾಮಯ್ಯ ಅವರೂ ಸಿಎಂ ಆಗಿದ್ದಾಗ ಶ್ರೀನಿವಾಸ ಪ್ರಸಾದ್‌ರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ ಮಾಡಿದ್ದರು. ಆದರೆ, ಈ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರದ್ದು ಈಗ ದಿವ್ಯ ಮೌನ. ಈ ಕಲಂ ತೆಗೆದು ಹಾಕಿ ಕೃಷಿ ಮಾಡುವ ಮನಸ್ಸುಗಳಿಗೆ ಕೃಷಿ ಸಾಧ್ಯವಾಗಿಸುತ್ತಿರುವುದು ಜೆಡಿಎಸ್‌ ಎಂದರು.

79(ಎ, ಬಿ) ಕಲಂಗೆ ಇತಿಶ್ರೀ ಹಾಡಿರುವುದು ನಮ್ಮ ಕೃಷಿ ವ್ಯಾಪ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಯುವಕರನ್ನು ಕೃಷಿಯತ್ತ ಆಕರ್ಷಿಸಲು ಸಹಾಯಕವಾಗುತ್ತದೆ. ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡಬಯಸುವವರಿಗೆ ಹಾದಿ ಸುಗಮವಾಗುತ್ತದೆ. ಸಾಂಪ್ರದಾಯಕ ಕೃಷಿಯ ಜಾಗಕ್ಕೆ ವೈಜ್ಞಾನಿಕ ಕೃಷಿ ಬರಲು ಅನುಕೂಲವಾಗುತ್ತದೆ. ಇದನ್ನು ಎಲ್ಲರೂ ಗಮನಿಸಬೇಕು ಎಂದಿದ್ದಾರೆ.

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.