ಅಪರಾಧ ತಡೆಗೆ ಗ್ರಾಮ ವಾಸ್ತವ್ಯ


Team Udayavani, Dec 9, 2020, 8:50 PM IST

Untitled-1

ಸಾಂದರ್ಭಿಕ ಚಿತ್ರ

ಶಿರಸಿ: ಅಪರಾಧ ತಡೆಗೆ ಪೊಲೀಸರಿಂದಲೂ ನಿಗದಿತ ಸಮಯದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುತ್ತದೆ ಎಂದು ನೂತನ ಪೊಲೀಸ್‌ ಉಪಾಧೀಕ್ಷಕ ರವಿ ನಾಯ್ಕ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿರಸಿ, ಸಿದ್ದಾಪುರ ಮತ್ತು ಯಲ್ಲಾಪುರ ತಾಲೂಕುಗಳಲ್ಲಿ ಒಂಟಿ ಮನೆಗಳ ರಕ್ಷಣೆಗೆ ಪೊಲೀಸ್‌ ಇಲಾಖೆ ವಿಶೇಷ ಯೋಜನೆ ಹಮ್ಮಿಕೊಳ್ಳಲಿದೆ. ನಮ್ಮ ಸಿಬ್ಬಂದಿ ವಾರದಲ್ಲಿ ಎರಡು ದಿನ ಗ್ರಾಮ ವಾಸ್ತವ್ಯ ಮಾಡುವ ಮೂಲಕ ರಕ್ಷಣೆ ಒದಗಿಸಲಿದ್ದೇವೆ. ಪೋಲೀಸ್‌ ಬೀಟ್‌ ವ್ಯವಸ್ಥೆ ಈಗಾಗಲೇ ಇದ್ದು, ಅದನ್ನು ಇನ್ನಷ್ಟು ಬಲಪಡಿಸಲಾಗುವುದು. ಪ್ರತಿ ಎರಡು ಅಥವಾ ಮೂರು ಹಳ್ಳಿಗಳಿಗೆ ಒಬ್ಬ ಪೊಲೀಸ್‌ ಸಿಬ್ಬಂದಿಗೆ ಜವಾಬ್ದಾರಿ ವಹಿಸಲಿದ್ದೇವೆ. ಆತ ಹಳ್ಳಿಯಲ್ಲಿಯೇ ರಾತ್ರಿಯೂ ಇರುವುದರಿಂದ ಸ್ಥಳೀಯರ ಸಮಸ್ಯೆ ಇನ್ನಷ್ಟು ಹತ್ತಿರದಿಂದ ತಿಳಿಯಲು ಸಾಧ್ಯವಾಗುತ್ತದೆ. ಇದರೊಂದಿಗೆ ಒಂಟಿ ಮನೆಗಳ ರಕ್ಷಣೆ ಸಾಧ್ಯವಾಗುತ್ತದೆ ಎಂದರು.

ಶಿರಸಿಯಲ್ಲಿ ಟ್ರಾಫಿಕ್‌, ಪಾರ್ಕಿಂಗ್‌ ಸಮಸ್ಯೆ ಇದೆ. ಇದನ್ನು ಪರಿಹರಿಸಲು ಮೊದಲೆ ಆದ್ಯತೆ ನೀಡಲಾಗುತ್ತದೆ. ಕೆಲ ಕಡೆಗಳಲ್ಲಿ ಇಕ್ಕಟ್ಟಾದ ರಸ್ತೆಗಳಿವೆ. ವಾಹನ ಅಡ್ಡಾದಿಡ್ಡಿ ನಿಲ್ಲಿಸಿದರೆ ಇತರರಿಗೂ ತೊಂದರೆ ಆಗುತ್ತದೆ. ಯಾವ ರೀತಿಯಲ್ಲಿ ಈ ಸಮಸ್ಯೆ ಬಗೆಹರಿಸಬಹುದು ಎಂದು ಪರಿಶೀಲಿಸುತ್ತೇವೆ. ಪೊಲೀಸ್‌ ಮತ್ತು ಜನರ ನಡುವಿನ ಸಂಬಂಧ ಇನ್ನಷ್ಟು ಬಲಗೊಳ್ಳಬೇಕು. ಅನ್ಯಾಯಕ್ಕೆ ಒಳಗಾದವರು ಮತ್ತು ಬಡವರೇ ಹೆಚ್ಚಿನ ಸಂಖ್ಯೆಯಲ್ಲಿ ಠಾಣೆಗೆ ಆಗಮಿಸುತ್ತಾರೆ. ಅವರಿಗೆ ವಿಶ್ವಾಸ ಮೂಡುವ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದ್ದೇವೆ ಎಂದರು.

ಅಡಕೆ ಕಟಾವು ಕಾರ್ಯ ಈ ದಿನಗಳಲ್ಲಿ ನಡೆಯುತ್ತಿದ್ದು, ಈ ಕುರಿತಂತೆ ರೈತರ ನಡುವೆ ವೈಮನಸ್ಸಿನ ಪ್ರಕರಣಗಳೂ ಬರುತ್ತಿವೆ. ಆದರೆ, ಇಂತಹ ಸಿವಿಲ್‌ ಪ್ರಕರಣಗಳಲ್ಲಿ ಪೊಲೀಸ್‌ ಹಸ್ತಕ್ಷೇಪ ಆಗಬಾರದು. ಇಂತಹ ಸಿವಿಲ್‌ ಪ್ರಕರಣದಲ್ಲಿ ಭಾಗಿ ಆಗದಂತೆ ಪೊಲೀಸರಿಗೆ ಸ್ಪಷ್ಟ ತಿಳಿಸಿದ್ದೇನೆ ಎಂದರು. ರೌಡಿಸಂ ಮತ್ತು ಗೂಂಡಾಗಿರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಗಾಂಜಾ ಮಾರಾಟ ಮತ್ತು ಸಾಗಾಟವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಲಿದೆ. ನಮ್ಮ ಜಿಲ್ಲೆಯಲ್ಲಿಯೂ ಕೆಲವೆಡೆ ಗಾಂಜಾ ಬೆಳೆಯುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇವೆ. ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೆಲ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಅರಣ್ಯ ಇಲಾಖೆ ಜೊತೆ ಚರ್ಚೆ ನಡೆಸಿ, ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚುತ್ತೇವೆ ಎಂದ ಅವರು, ಹೈವೇ ಗಸ್ತು ತಿರುಗಾಟವನ್ನು ಇನ್ನಷ್ಟು ಹೆಚ್ಚಿಸಲಾಗುತ್ತಿದೆ. ಗ್ರಾಮೀಣ ರಸ್ತೆಗಳಲ್ಲಿ ರಾತ್ರಿ ವೇಳೆ ವಾಹನ ಹಾಳಾಗಿ ನಿಂತರೆ, ಅಥವಾ ರಸ್ತೆಯಲ್ಲಿ ತೊಂದರೆ ಆದರೆ ತಕ್ಷಣವೇ ರೇಡಿಯಂ ಸ್ಟಿಕ್ಕರ್‌ ಅಳವಡಿಸಿ ಅಪಘಾತ ಆಗದಂತೆ ಕಾಳಜಿ ವಹಿಸುತ್ತೇವೆ. ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ವ್ಯವಹರಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಿದ್ದೇವೆ ಎಂದರು.

ಪ್ರತಿ ಮನೆಯಲ್ಲೂ ಮಾಹಿತಿ :  ತುರ್ತು ಸಂದರ್ಭದಲ್ಲಿ ಗ್ರಾಮಸ್ಥರಿಗೆ ತಕ್ಷಣವೇ ಪೊಲೀಸರನ್ನು ಸಂಪರ್ಕಿಸಲು ಅನುವಾಗುವ ಸಲುವಾಗಿ ಪ್ರತಿ ಮನೆಗೂ ಮಾಹಿತಿ, ದೂರವಾಣಿ ಸಂಖ್ಯೆ ಉಳ್ಳ ಸ್ಟಿಕ್ಕರ್‌ ಹಚ್ಚಲಿದ್ದೇವೆ. ಮನೆಯ ಬಾಗಿಲಿನ ಹಿಂದೆ ಈ ಸ್ಟಿಕ್ಕರ್‌ ಅಳವಡಿಸಲಾಗುತ್ತಿದ್ದು, ಇದರಲ್ಲಿ ಬೀಟ್‌ ಪೊಲೀಸರ, ಪೋಲೀಸ್‌ ಠಾಣೆ ಮತ್ತು ಪಿಎಸ್‌ಐ ಅವರ ಮೊಬೈಲ್‌ ನಂಬರ್‌ ಇರಲಿದೆ. ತುರ್ತು ಸಂದರ್ಭದಲ್ಲಿ ಪೊಲೀಸರ ದೂರವಾಣಿ ಸಂಖ್ಯೆ ಸುಲಭವಾಗಿ ಸಿಗುವಂತಿರಬೇಕು ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.