ನೆಕ್ಕಿಲಾಡಿ ಸಮೀಪದ ಕುಮಾರಧಾರಾ ನದಿ ಕಿಂಡಿ ಅಣೆಕಟ್ಟು: ತುಂಬಿದ ಹೂಳು: ನೀರು ಸಂಗ್ರಹ ಸವಾಲು


Team Udayavani, Dec 10, 2020, 5:21 AM IST

ನೆಕ್ಕಿಲಾಡಿ ಸಮೀಪದ ಕುಮಾರಧಾರಾ ನದಿ ಕಿಂಡಿ ಅಣೆಕಟ್ಟು: ತುಂಬಿದ ಹೂಳು: ನೀರು ಸಂಗ್ರಹ ಸವಾಲು

ಪುತ್ತೂರು: ನಗರಕ್ಕೆ ನೀರೊದ ಗಿಸಲು ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿ ಸಮೀಪ ಕುಮಾರಧಾರಾ ನದಿಗೆ ನಿರ್ಮಿ ಸಿರುವ ಕಿಂಡಿ ಅಣೆಕಟ್ಟಿನಲ್ಲಿ ಹೂಳು ತುಂಬಿದೆ. ಇದರಿಂದ ನಿರೀಕ್ಷೆಯ ಪ್ರಮಾಣದಲ್ಲಿ ನೀರು ಸಂಗ್ರಹಿಸಲು ಸಮಸ್ಯೆ ಉಂಟಾ ಗಿದೆ ಈ ಹಿನ್ನೆಲೆಯಲ್ಲಿ ನಗರಾಡಳಿತ ಹೂಳು ತೆರವು ಮಾಡಲು ಯೋಜನೆ ರೂಪಿಸಿದೆ.

12 ವರ್ಷಗಳ ಹಿಂದೆ ಕುಡ್ಸೆಂಪ್‌ ಯೋಜನೆಯಡಿ ನಿರ್ಮಿಸಿದ ಕಿಂಡಿ ಅಣೆಕಟ್ಟಿನ ಒಳಭಾಗದಲ್ಲಿ ಜಾಕ್‌ವೆಲ್‌ ಸುತ್ತ ಹೂಳು ಭರ್ತಿಯಾಗಿದ್ದರೆ, ಹೊರ ಭಾಗದಲ್ಲಿ ಮರಳು ತುಂಬಿಕೊಂಡಿದೆ. ಎರಡೂ ಸಮಸ್ಯೆ ಏಕಕಾಲದಲ್ಲಿ ಕಾಣಿಸಿ ಕೊಂಡ ಕಾರಣ ಜನವರಿಯಲ್ಲಿ ನಗರಕ್ಕೆ ಕುಡಿಯುವ ನೀರಿನ ಅಭಾವ ತಲೆ ದೋರುವ ಭೀತಿ ಎದುರಾಗಿದೆ. ಇದನ್ನು ಮನಗಂಡ ನಗರಸಭೆಯ ನೂತನ ಆಡಳಿತ ಹೂಳೆತ್ತಿ ನೀರು ಸಂಗ್ರಹ ಸಮಸ್ಯೆ ಪರಿಹರಿಸಲು ನಿರ್ಧರಿಸಿದೆ.

9 ಮೀಟರ್‌ ಎತ್ತರವಿರುವ ಕಿಂಡಿ ಅಣೆ ಕಟ್ಟಿನಲ್ಲಿ 630 ಮಿಲಿಯನ್‌ ಲೀಟರ್‌ (ಎಂಎಲ್‌ಡಿ) ನೀರು ತುಂಬಿಕೊಳ್ಳುವ ಸಾಮರ್ಥ್ಯವಿದೆ. ನಗರಕ್ಕೆ ಇದಕ್ಕಿಂತ ಹೆಚ್ಚಿನ ನೀರಿನ ಆವಶ್ಯಕತೆ ಇರುವ ಕಾರಣ, ನಗರದ ನಾನಾ ಕಡೆ ಕೊರೆಯಲಾಗಿರುವ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಅಣೆಕಟ್ಟಿನ ಹೊರ ಭಾಗದಲ್ಲಿ ನದಿಯಲ್ಲಿ ಮರಳು ಹೇರಳ ವಾಗಿ ಶೇಖರಣೆ ಯಾಗಿ ರುವುದೂ ಸಮಸ್ಯೆಯಾಗಿದೆ. ಮರಳು ತೆಗೆಯುವ ಅಧಿಕಾರ ನಮಗಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗೆ ಪತ್ರ ಬರೆಯಲಿದ್ದೇವೆ. ಜಿಲ್ಲಾಡಳಿತದಿಂದಲೇ ಮರಳು ತೆಗೆ ದರೆ ಉತ್ತಮ ಅಥವಾ ನಗರಸಭೆಗೆ ವಿಶೇಷ ಅಧಿಕಾರ ನೀಡಿದರೆ ಜಲಸಿರಿ ಯೋಜನೆ ಯಡಿ ಕೆಲಸ ಮಾಡಿಸಲು ಅವಕಾಶವಿದೆ ಎನ್ನುತ್ತಾರೆ ನಗರಸಭೆಯ ಜನಪ್ರತಿನಿಧಿಗಳು. 2019, 2020ರ ಬೇಸಗೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಕಂಡು ಬಂದಿರಲಿಲ್ಲ. ಅದಕ್ಕಿಂತ ಹಿಂದಿನ 2 ವರ್ಷಗಳಲ್ಲಿ ಎಪ್ರಿಲ್‌ ಹೊತ್ತಿಗೆ ನೀರಿನ ಪ್ರಮಾಣ ಕಡಿಮೆಯಾಗಿತ್ತು. ಇದೇ ವೇಳೆ ಮಂಗಳೂರು ನಗರದ ಸಮಸ್ಯೆ ನಿವಾರಿಸಲು ಉಪ್ಪಿನಂಗಡಿ ಬಳಿಯ ಅಣೆಕಟ್ಟನ್ನು ತೆರೆದು ನೀರು ಹರಿಸಲಾಗಿತ್ತು ಎನ್ನುತ್ತಾರೆ ನಗರಸಭೆ ಅಧಿಕಾರಿಗಳು.

ಹಲಗೆ ಜೋಡಣೆಗೆ ಯಾಂತ್ರಿಕ ಪರಿಕರವಿಲ್ಲ
ಈಗಾಗಲೇ ಬೇಸಗೆ ಕಾಲಿಟ್ಟಿರುವ ಕಾರಣ ಕೆಲವೇ ದಿನಗಳಲ್ಲಿ ಕಿಂಡಿ ಅಣೆಕಟ್ಟಿನಲ್ಲಿ ನೀರು ಶೇಖರಿಸುವ ಕೆಲಸ ನಡೆಯಬೇಕಾಗಿದೆ. ಕಟ್ಟೆಯ ಕಿಂಡಿಗಳಲ್ಲಿ ಹಲಗೆಗಳನ್ನು ಇಳಿಸಿ ನೀರು ಸಂಗ್ರಹಿಸಲಾಗುತ್ತದೆ. ಇಲ್ಲಿ ಮಾನವ ಶ್ರಮದ ಮೂಲಕ ಹಲಗೆ ಜೋಡಿಸಲಾಗುತ್ತದೆ. ರಾಜ್ಯದ ಹಲವೆಡೆ ಪೌರಾಡಳಿತ ಸಂಸ್ಥೆಗಳ ಕುಡಿಯುವ ನೀರಿನ ಯೋಜನೆಯಲ್ಲಿ ಕಿಂಡಿ ಅಣೆಕಟ್ಟುಗಳಿಗೆ ಯಾಂತ್ರೀಕೃತವಾಗಿ ಹಲಗೆ ಇಳಿಸಲಾಗುತ್ತದೆ. ಪುತ್ತೂರಿನಲ್ಲಿ ಈ ವ್ಯವಸ್ಥೆ ಇನ್ನೂ ಜಾರಿಗೆ ಬಂದಿಲ್ಲ.

7 ಲಕ್ಷ ರೂ. ಯೋಜನೆ
ನೆಕ್ಕಿಲಾಡಿ ಕಿಂಡಿ ಅಣೆಕಟ್ಟಿನ ಹೂಳು ತೆಗೆಯುವ ಕಾಮಗಾರಿ ನಡೆಯಲಿದೆ. 7 ಲಕ್ಷ ರೂ. ಗಳ ಅಂದಾಜು ಪಟ್ಟಿ ತಯಾರಿಸಿದೆ. ಅಣೆಕಟ್ಟು ನಿರ್ಮಾಣ ವಾದಂದಿನಿಂದ ಇದೇ ಮೊದಲ ಹೂಳು ಮೇಲೆತ್ತುವ ಯೋಜನೆ ರೂಪಿಸ ಲಾಗಿದೆ.
-ಜೀವಂಧರ್‌ಜೈನ್‌,  ಅಧ್ಯಕ್ಷರು, ನಗರಸಭೆ, ಪುತ್ತೂರು

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

pramod madhwaraj

Pramod Madhwaraj;ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

Subrahmanya: ಕುಮಾರ ಪರ್ವತ ಚಾರಣ ಆರಂಭಿಸಿದ ಚಾರಣಿಗರು

Subrahmanya: ಕುಮಾರ ಪರ್ವತ ಚಾರಣ ಆರಂಭಿಸಿದ ಚಾರಣಿಗರು

Puttur: ಹೊಸ ಅಡಿಕೆ ಧಾರಣೆ ಜಿಗಿತ

Puttur: ಹೊಸ ಅಡಿಕೆ ಧಾರಣೆ ಜಿಗಿತ; ಬೆಳೆಗಾರರ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

3-ankola

Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್‌ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.