ಅಧಿಕಾರಕ್ಕಾಗಿ ಯಾವ ಪಕ್ಷಕ್ಕಾದರೂ ಜೆಡಿಎಸ್ ‌ಬೆಂಬಲ


Team Udayavani, Dec 12, 2020, 2:05 PM IST

ಅಧಿಕಾರಕ್ಕಾಗಿ ಯಾವ ಪಕ್ಷಕ್ಕಾದರೂ ಜೆಡಿಎಸ್ ‌ಬೆಂಬಲ

ದೇವನಹಳ್ಳಿ: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರಾದ್ಯಂತ ರೈತರುಪ್ರತಿಭಟಿಸುತ್ತಿದ್ದಾರೆ. ರೈತರ ಪಕ್ಷ ಎಂದು ಹೇಳುವ ಜೆಡಿಎಸ್‌ನವರು ಇದೀಗ ಬಿಜೆಪಿಗೆ ಬೆಂಬಲ ನೀಡಿರುವುದು ರೈತರ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುವುದು ತಿಳಿಯುತ್ತದೆ. ಅಧಿಕಾರದ ಆಸೆಗಾಗಿ ಯಾವ ಪಕ್ಷಕ್ಕಾದರೂ ಬೆಂಬಲಿಸುತ್ತಾರೆ ಎಂದು ಮಾಜಿ ಸಚಿವಕೃಷ್ಣಬೈರೇಗೌಡ ಆರೋಪಿಸಿದರು.

ತಾಲೂಕಿನ ಚಿಕ್ಕಸಣ್ಣೆ ಬಳಿ ಇರುವ ಎಸ್‌ಎಸ್‌ಬಿ ಕನ್‌ವೆನ್ಷನ್‌ ಹಾಲ್‌ನಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಎಪಿಎಂಸಿಕಾಯ್ದೆಯನ್ನು ತಿದ್ದುಪಡಿ ತಂದು, ರೈತರ ಮೇಲೆದುಷ್ಪರಿಣಾಮ ಬೀರಲಿದೆ. ಈ ಕಾಯ್ದೆಯಿಂದ ಅಂಬಾನಿ, ಅದಾನಿಯಂತಹವರು ಅನುಕೂಲ ಮಾಡಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರೈತರ ಭವಿಷ್ಯವನ್ನೇ ಕಿತ್ತುಕೊಳ್ಳುವ ಉನ್ನಾರ ನಡೆಯುತ್ತಿದೆ ಎಂದರು.

ಬಯಲು ಸೀಮೆಯ ಜನರಿಗೆ ಶಾಶ್ವತ ನೀರಾವರಿ ಒದಗಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೆಬ್ಟಾಳ ಮತ್ತು ನಾಗವಾರ ಕೆರೆಯ ನೀರನ್ನುಶುದ್ಧಿಕರಿಸಿ, ಈ ಭಾಗದ ಕೆರೆಗಳಿಗೆ ಹರಿಸಲಾಯಿತು. ಇನ್ನೂ ಅತೀ ಹೆಚ್ಚು ಕೆರೆಗಳನ್ನು ಸೇರಿಸಲು ಸರ್ಕಾರದಮೇಲೆ ಒತ್ತಡ ತರಲಾಗುವುದು. ಅಧಿಕಾರ ಇದ್ದರೂಅಭಿವೃದ್ಧಿಗೆ ಒತ್ತು ನೀಡುತ್ತೇವೆ. ಅಧಿಕಾರ ಇಲ್ಲದಿದ್ದರೂ ಹೋರಾಟದ ಮೂಲಕ ಜನರಿಗೆ ಕೆಲಸ ಮಾಡುತ್ತೇವೆ. ಎತ್ತಿನ ಹೊಳೆ ಯೋಜನೆ ಸ್ಥಗಿತಗೊಂಡಿದೆ. ದೊಡ್ಡಬಳ್ಳಾಪುರ ಹತ್ತಿರ ಭೂ ಸ್ವಾಧೀನ ಪ್ರಕ್ರಿಯೆಯಾಗಿದ್ದರೂ ಈಗಿನ ಬಿಜೆಪಿ ಸರ್ಕಾರಕ್ಕೆ ಜಮೀನಿನ ದರ ನಿಗದಿಗೊಳಿಸಲು ಇವರ ಕೈಯಲ್ಲಿ ಆಗುತ್ತಿಲ್ಲ. ನಮ್ಮ ಕಾಂಗ್ರೆಸ್‌ ಸರ್ಕಾರ ಬಂದರೆ, ಎತ್ತಿನ ಹೊಳೆ ಯೋಜನೆ ಕಾಮಗಾರಿಯ ವೇಗ ಹೆಚ್ಚಿಸಲಾಗುತ್ತದೆ ಎಂದರು.

ಗ್ರಾಪಂ ಚುನಾವಣೆಯಲ್ಲಿ ಒಗ್ಗಟ್ಟಾಗಿ ಶ್ರಮಿಸಬೇಕು. ಪ್ರತಿ ಮನೆ ಮನೆಗೆ ಹೋಗಿ ಕಾರ್ಯಕರ್ತರು ಮುಖಂಡರು ಕಾಂಗ್ರೆಸ್‌ ಸರ್ಕಾರವಿದ್ದಾಗ ಜನಪರ ಆಡಳಿತ ನೀಡಿರುವ ಬಗ್ಗೆಮನವರಿಕೆ ಮಾಡಿಕೊಡಬೇಕು. ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿರುವ ಸರ್ಕಾರ ಕೃಷಿ ನೂತನ ಮಸೂದೆಗಳನ್ನು ಜಾರಿತಂದು ರೈತರಿಗೆ ಅನ್ಯಾಯ ಎಸಗುತ್ತಿದೆ. ರೈತರು ಇದೀಗ ಬೀದಿಗೆ ಬರಲುಬಿಜೆಪಿಸರ್ಕಾರದದುರಾಡಳಿತಸಾಕ್ಷಿಯಾಗಿದೆ ಎಂದರು.

ಇದೇವೇಳೆಮಾಜಿಸಂಸದಸಿ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಮುನಿನರಸಿಂಹಯ್ಯ, ವೆಂಕಟಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ.ಪ್ರಸನ್ನಕುಮಾರ್‌, ಉಪಾಧ್ಯಕ್ಷ ವಿ.ಶಾಂತಕುಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌.ಪಿ.ಮುನಿರಾಜು, ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ ಸಿ.ಜಗನ್ನಾಥ್‌, ಕಾರ್ಯದರ್ಶಿ ಎಸ್‌.ಆರ್‌. ರವಿಕುಮಾರ್‌, ಜಿಪಂ ಸದಸ್ಯರಾದ ಲಕ್ಷ್ಮೀ ನಾರಾಯಣ್‌, ಕೆ.ಸಿ.ಮಂಜುನಾಥ್‌, ಅನಂತ ಕುಮಾರಿ, ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ, ತಾಪಂ ಅಧ್ಯಕ್ಷೆ ಶಶಿಕಲಾಆನಂದ್‌, ಮಾಜಿ ಅಧ್ಯಕ್ಷೆ ಚೈತ್ರಾವೀರೇಗೌಡ, ಕೆಪಿಸಿಸಿ ಸದಸ್ಯರಾದ ಚೇತನ್‌ ಗೌಡ, ಚಿನ್ನಪ್ಪ, ತಾಪಂ ಮಾಜಿ ಸದಸ್ಯ ಲಕ್ಷ್ಮಣ್‌ ಗೌಡ, ಯುವ ಮುಖಂಡರಾದ ಕೆ.ಆರ್‌.ನಾಗೇಶ್‌ ಇತರರು ಹಾಜರಿದ್ದರು.

ಚರ್ಮೋದ್ಯಮದ ಮೇಲೆ ದುಷ್ಪರಿಣಾಮ :

ವಿರೋಧ ಪಕ್ಷಗಳ ಒಪ್ಪಿಗೆ ಪಡೆಯದೆ ವಿಧಾನ ಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನುಅಂಗೀಕರಿಸಿ, ರೈತರು ಹಾಗೂ ಚರ್ಮೋದ್ಯಮದಮೇಲೆ ತೀವ್ರ ಪರಿಣಾಮ ಬೀರಲಿದೆ. ವಯಸ್ಸಾದ ಜಾನುವಾರುಗಳನ್ನು ರೈತರು ಇಟ್ಟುಕೊಂಡು ಏನು ಮಾಡುತ್ತಾರೆ. ಅದನ್ನು ನೇರ ವಾಗಿ ಸರ್ಕಾರವೇ ಖರಿಧಿಸುವಂತಾಗಲಿ ಬಿಜೆಪಿ ಮುಖಂಡರ ಮನೆಯಲ್ಲೂ, ಜಮೀನಿನಲ್ಲೂ ಸಾಕಲಿ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.