ದೀದಿ-ಕೇಂದ್ರ ನಡುವೆ ಈಗ ಐಪಿಎಸ್ ಕಾಳಗ
Team Udayavani, Dec 13, 2020, 1:06 AM IST
ಹೊಸದಿಲ್ಲಿ/ಕೋಲ್ಕತಾ: ಪಶ್ಚಿಮ ಬಂಗಾಲ ಮತ್ತು ಕೇಂದ್ರ ಸರಕಾರ ನಡುವಿನ ಗುದ್ದಾಟ ಸದ್ಯಕ್ಕೆ ನಿಲ್ಲುವ ಲಕ್ಷಣ ಇಲ್ಲ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭದ್ರತೆ ಉಸ್ತುವಾರಿ ಹೊತ್ತಿದ್ದ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜಿಸುವಂತೆ ಗೃಹ ಸಚಿ ವಾಲಯ ಶನಿವಾರ ಸೂಚನೆ ನೀಡಿದೆ. ಡೈಮಂಡ್ ಹಾರ್ಬರ್ನ ಎಸ್ಪಿ ಭೋಲಾನಾಥ ಪಾಂಡೆ, ಪ್ರಸಿಡೆನ್ಸಿ ರೇಂಜ್ನ ಡಿಐಜಿ ಪ್ರವೀಣ್ ತ್ರಿಪಾಠಿ, ದಕ್ಷಿಣ ಬಂಗಾಲದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಜೀವ್ ಮಿಶ್ರಾರನ್ನು ಕೇಂದ್ರ ಸೇವೆಗೆ ನಿಯೋಜಿಸುವಂತೆ ಸೂಚಿಸಲಾಗಿದೆ. ಈ ಮೂವರು ಅಧಿ ಕಾರಿಗಳು ಪಶ್ಚಿಮ ಬಂಗಾಲ ಕೇಡರ್ಗೆ ಸೇರಿದವರು. ಅಖೀಲ ಭಾರತ ಸೇವಾ ನಿಯಮಗಳ ಅನ್ವಯ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯಗಳಲ್ಲಿರುವ ಅಖೀಲ ಭಾರತ ಸೇವೆ ಅಧಿಕಾರಿಗಳನ್ನು (ಐಎಎಸ್, ಐಪಿಎಸ್) ಕೇಂದ್ರ ಸೇವೆಗೆ ನಿಯೋಜಿಸುವಾಗ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಲಾಗುತ್ತದೆ. ಶುಕ್ರವಾರ ವಷ್ಟೇ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರನ್ನು ಡಿ.14ಕ್ಕೆ ಹೊಸದಿಲ್ಲಿಗೆ ಬರುವಂತೆ ಈಗಾಗಲೇ ಬುಲಾವ್ ನೀಡಿದೆ.
ತುರ್ತು ಪರಿಸ್ಥಿತಿ ಹೇರಲು ಯತ್ನ: ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜಿಸುವಂತೆ ಸೂಚಿಸಿದ ಕ್ರಮವನ್ನು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಆಕ್ಷೇಪಿಸಿದ್ದಾರೆ. ಗೃಹ ಕಾರ್ಯದರ್ಶಿ ಅಜಯ ಭಲ್ಲಾಗೆ ಪತ್ರ ಬರೆದು ಕಾನೂನು ಸುವ್ಯವಸ್ಥೆ ರಾಜ್ಯಗಳಿಗೆ ಸೇರಿದ್ದು. ಕೇಂದ್ರ ಬಲವಂತದ ಕ್ರಮಗಳನ್ನು ಅನುಸರಿಸುತ್ತದೆ ಎಂದು ಟೀಕಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಪರೋಕ್ಷವಾಗಿ ಪಶ್ಚಿಮ ಬಂಗಾಲದಲ್ಲಿ ತುರ್ತು ಪರಿಸ್ಥಿತಿ ಹೇರಲು ಯತ್ನಿಸುತ್ತಿ ದ್ದಾರೆ ಎಂದು ದೂರಿದ್ದಾರೆ. ಕೇಂದ್ರ ಸರಕಾರದ ಕ್ರಮ ಕೇವಲ ರಾಜಕೀಯ ಪ್ರೇರಿತ ಎಂದು ಬಣ್ಣಿಸಿರುವ ಬ್ಯಾನರ್ಜಿ, ಅಮಿತ್ ಶಾ ಸೂಚನೆ ಮೇರೆಗೆ ಈ ಪತ್ರ ಬರೆಯಲಾಗಿದೆ ಎಂದು ಪತ್ರದಲ್ಲಿ ದೂರಿದ್ದಾರೆ.
ಪ್ರಮುಖರ ಜತೆ ಭಾಗವತ್ ಚರ್ಚೆ
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಡಿ.12, 13ರಂದು ಪಶ್ಚಿಮ ಬಂಗಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಈಗಾಗಲೇ ಕೋಲ್ಕತಾಕ್ಕೆ ಆಗಮಿಸಿದ್ದಾರೆ. ವೈದ್ಯಕೀಯ ವಿಜ್ಞಾನ, ಬಾಹ್ಯಾಕಾಶ, ಮೈಕ್ರೋಬಯಾಲಜಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಯುವ ಸಮುದಾಯದವರನ್ನು ಭೇಟಿಯಾಗಲಿದ್ದಾರೆ. ಜತೆಗೆ ಸರೋದ್ ವಾದಕ ಪಂ| ತೇಜೇಂದ್ರ ನಾರಾಯಣ ಮುಜುಂದಾರ್ ಅವರನ್ನು ಭೇಟಿಯಾಗಲಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಆರ್ಎಸ್ಎಸ್ನ ಕೆಲವು ಪ್ರಮುಖ ನಾಯಕರನ್ನು ಭೇಟಿ ಯಾಗಿ ಮಾತುಕತೆ ನಡೆಸಲಿದ್ದಾರೆ. ಮುಂದಿನ ವರ್ಷದ ಎಪ್ರಿಲ್-ಮೇನಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Naxalites Encounter: ಛತ್ತೀಸ್ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!
Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ
Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…
Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.